spot_img

ಕಾರ್ಕಳದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ

Date:

spot_img

ಕಾರ್ಕಳ : ಕಾರ್ಕಳದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿಸೆಂಟ್ ಪಾಯಸ್ ರವರು ಮಾತನಾಡುತ್ತಾ ಮಕ್ಕಳಿಗೆ ದುಶ್ಚಟದ ಬಗ್ಗೆ ಅರಿವು ಮೂಡಿಸಲು , ಮಾದಕ ವಸ್ತು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಕಾಯಿಲೆಯಿಂದ ಬಳಲುವ ಜನಸಂಖ್ಯೆಗಿಂತ ದುಶ್ಚಟಕ್ಕೆ ಬಲಿಯಾಗಿ ಮರಣಹೊಂದುವವರ ಸಂಖ್ಯೆ ಹೆಚ್ಚಾಗಿದೆ. ಆದುದರಿಂದ ಹದಿಹರೆಯದ ಮಕ್ಕಳು ನೀವು ನಿಮ್ಮ ಭವಿಷ್ಯವನ್ನು ದುಶ್ಚಟಮುಕ್ತ ಸಮಾಜ ಕಟ್ಟುವಲ್ಲಿ ಮುಡಿಪಾಗಿರುವಂತೆ ಮಾಹಿತಿಯನ್ನು ನೀಡುವುದರ ಜೊತೆಗೆ ಸ್ವಾಸ್ಥ್ಯ ಸಂಕಲ್ಪದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಶ್ರೀಯುತ ಕುಮಾರ್ K.M ರವರು ಧರ್ಮಸ್ಥಳ ಯೋಜನೆಯ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮುನಿಯಾಲು ಸರಕಾರಿ ಫಸ್ಟ್ ಗ್ರೇಡ್ ಕಾಲೇಜಿನ ಪ್ರಾಂಶುಪಾಲರಾದ ಸುಧಾಕರ್ K.G, ಶೌರ್ಯ ವಿಪತ್ತು ನಿರ್ವಹಣೆಯ ಯೋಜನಾಧಿಕಾರಿಗಳಾದ ಜೈವಂತ ಪಾಟ್ಕರ್ ಮತ್ತು ಕಿಶೋರ್, ಕಾಲೇಜ್ ನ ವಿಭಾಗ ಅಧಿಕಾರಿಗಳಾದ ಚಿತ್ರಾ ಕುಮಾರ್ K.V , ಮಲ್ಲಿಕಾ K , ಪವಿತ್ರ S , ಪುನೀತ್, ಬೋಧಕರಾದ ಬಾಲಚಂದ್ರ ಹೆಬ್ಬಾರ್, ಪ್ರವೇಶ ನಿರ್ವಹಕರಾದ ಗುಣಪಾಲ್ ಜೈನ್,ಕಾರ್ಕಳ ನಗರ ವಲಯದ ಮೇಲ್ವಿಚಾರಕಾರದ ಗೀತಾ ಹೆಗ್ಡೆ , ಕಾಬೆಟ್ಟು ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಶೀತಲ್ ಹಾಗೂ ಪ್ರಥಮ ದರ್ಜೆಯ 180 ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರಿಬೇವಿನ ನೀರು: ಆರೋಗ್ಯಕ್ಕೆ ಅದ್ಭುತ, ಇಲ್ಲಿದೆ ಸಂಪೂರ್ಣ ಲಾಭಗಳ ವಿವರ!

ಕರಿಬೇವಿನ ಎಲೆಗಳನ್ನು ನೀರಿನಲ್ಲಿ ನೆನೆಸಿ ಆ ನೀರನ್ನು ಕುಡಿಯುವುದರಿಂದ ನಾವು ಊಹಿಸುವುದಕ್ಕಿಂತಲೂ ಹೆಚ್ಚಿನ ಲಾಭಗಳನ್ನು ಪಡೆಯಬಹುದು.

ದಿಢೀ‌ರ್ ಹೃದಯಾಘಾತಕ್ಕೂ ಮುನ್ಸೂಚನೆ ಇದ್ದೇ ಇರುತ್ತದೆ, ಅದನ್ನು ಗಮನಿಸಬೇಕಷ್ಟೇ : ಡಾ। ಸುರೇಶ್ ಹರಸೂರ

ದಿಢೀ‌ರ್ ಹೃದಯಾಘಾತಕ್ಕೂ ಮುನ್ಸೂಚನೆ ಇದ್ದೇ ಇರುತ್ತದೆ, ಅದನ್ನು ನಾವು ಸರಿಯಾಗಿ ಗಮನಿಸಬೇಕಷ್ಟೇ ಎಂದು ಬಸವೇಶ್ವರ ಆಸ್ಪತ್ರೆಯ ಮೆಡಿಸಿನ್ ವಿಭಾಗದ ಮುಖ್ಯಸ್ಥರಾದ ಡಾ। ಸುರೇಶ್ ಹರಸೂರರವರು ಹೇಳಿದರು.

ದಿನ ವಿಶೇಷ – ಗುರು ಪೂರ್ಣಿಮಾ

ಇದು ಗುರುಗಳ ಪವಿತ್ರ ಸೇವೆಗೆ ನಮಸ್ಕರಿಸುವ ದಿನ, ಈ ದಿನವು ಆಷಾಢ ಮಾಸದ ಪೂರ್ಣಿಮೆಯಂದು ಬರುತ್ತದೆ.

ದೇಶಾದ್ಯಂತ 2,500 ‘ಸ್ಥಳೀಯ ಬ್ಯಾಂಕ್ ಅಧಿಕಾರಿ’ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ BoB

ಬ್ಯಾಂಕ್ ಆಫ್ ಬರೋಡಾ (BoB) ದೇಶಾದ್ಯಂತ 2,500 'ಸ್ಥಳೀಯ ಬ್ಯಾಂಕ್ ಅಧಿಕಾರಿ' ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.