spot_img

ತಮನ್ನಾ ಭಾಟಿಯಾ – ವಿಜಯ್ ವರ್ಮಾ ಪ್ರೇಮ ಸಂಬಂಧಕ್ಕೆ ಬ್ರೇಕಪ್?

Date:

ಮುಂಬೈ: ಮಿಲ್ಕ್ ಬ್ಯೂಟಿ ತಮನ್ನಾ ಭಾಟಿಯಾ ಮತ್ತು ಬಾಲಿವುಡ್ ನಟ ವಿಜಯ್ ವರ್ಮಾ ಅವರ ಪ್ರೇಮ ಸಂಬಂಧ ಮುರಿದು ಬಿದ್ದಿರುವ ಬಗ್ಗೆ ವರದಿಯಾಗಿದೆ. ಇತ್ತೀಚೆಗೆ ಇಬ್ಬರೂ ಪರಸ್ಪರ ದೂರವಾಗಿದ್ದು, ಬ್ರೇಕಪ್ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಚಿತ್ರರಂಗದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ತಮನ್ನಾ ಮತ್ತು ವಿಜಯ್, ಲಸ್ಟ್ ಸ್ಟೋರೀಸ್ 2 ಸಿನಿಮಾ ಮೂಲಕ ಪರಿಚಿತರಾಗಿ ನಂತರ ಒಟ್ಟಿಗೆ ಹಲವು ಬಾರಿ ಕಾಣಿಸಿಕೊಂಡಿದ್ದರು. ಈ ಜೋಡಿ ಹೊಸ ವರ್ಷಾಚರಣೆ ವೇಳೆ ತಬ್ಬಿಕೊಂಡು ಮುತ್ತಿಡುವ ವಿಡಿಯೋ ವೈರಲ್ ಆಗಿತ್ತು. ಇದಾದ ನಂತರ ಅವರ ಸಂಬಂಧವನ್ನು ಅಧಿಕೃತವಾಗಿಯೇ ಒಪ್ಪಿಕೊಂಡಿದ್ದರು.

ಆದರೆ, ಮೂಲಗಳ ಪ್ರಕಾರ, ಕೆಲವು ವಾರಗಳ ಹಿಂದೆಯೇ ಇವರಿಬ್ಬರ ನಡುವೆ ಬಿರುಕು ಉಂಟಾಗಿ ಸಂಬಂಧ ಅಂತ್ಯಗೊಂಡಿದೆ. ಅವರಿಬ್ಬರೂ ಸ್ನೇಹಿತರಾಗಿ ಮುಂದುವರಿಯಲು ನಿರ್ಧಾರ ಮಾಡಿಕೊಂಡಿದ್ದಾರೆ. ಆದರೂ, ಈ ಕುರಿತು ತಮನ್ನಾ ಅಥವಾ ವಿಜಯ್ ಅವರಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ.

ಈ ಸುದ್ದಿ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದು, ಅವರಿಬ್ಬರೂ ಮತ್ತೆ ಒಟ್ಟಾಗಬಹುದೇ ಎಂಬ ಪ್ರಶ್ನೆ ಹುಟ್ಟಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಿಂದೂಗಳೇ “ಒಂದೇ ದೇಗುಲ, ಒಂದೇ ಬಾವಿ, ಒಂದೇ ಸ್ಮಶಾನ” ತತ್ವದೊಂದಿಗೆ ಜಾತಿ ಭೇದಕ್ಕೆ ತೆರೆ ಹಾಕೋಣ: ಭಾಗವತ್ ಕರೆ

ಅಲಿಗಢದಲ್ಲಿ ಮೋಹನ್ ಭಾಗವತ್ ರವರು , “ಒಂದೇ ದೇಗುಲ, ಒಂದೇ ಬಾವಿ, ಒಂದೇ ಸ್ಮಶಾನ” ತತ್ವದಿಂದ ಜಾತಿ ಭೇದ ನಿವಾರಿಸೋಣ” ಎಂದರು.

“ಮುಂದಿನ ಚುನಾವಣೆಯಲ್ಲಿ ತುಳುನಾಡಿನಿಂದ ಕನಿಷ್ಠ ಹತ್ತು ಕಾಂಗ್ರೆಸ್ ಶಾಸಕರು ಆಯ್ಕೆಯಾಗಲಿದ್ದಾರೆ.” : ಡಿಕೆ ಶಿವಕುಮಾರ್

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಭಾನುವಾರ ನಡೆದ "ಸರಕಾರದ ನಡೆ, ಕಾರ್ಯಕರ್ತರ ಕಡೆ" ಎಂಬ ಕಾರ್ಯಕರ್ತರ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿದರು.

ಉಜಿರೆಯಲ್ಲಿ ಅಕ್ರಮ ಕೂಟ, ಶಾಂತಿ ಭಂಗ: ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು!

ಉಜಿರೆಯಲ್ಲಿ ಶಾಂತಿ ಭಂಗ ಆರೋಪಕ್ಕೆ ಮಹೇಶ್ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು.

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್!

ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಭಾರೀ ಮಳೆಯ ಸಂಭವವಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.