ಕೆಪಿಎಸ್ ಹಿರಿಯಡ್ಕದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಶ್ರೀ ದಾಮೋಧರ ಶರ್ಮರವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

Date:

spot_img

ಉಡುಪಿ: ಉಡುಪಿ ಜಿಲ್ಲೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್), ಹಿರಿಯಡ್ಕದಲ್ಲಿ ಸೆಪ್ಟೆಂಬರ್ 9, 2025 ರ ಮಂಗಳವಾರದಂದು ಶಿಕ್ಷಕರ ದಿನಾಚರಣೆ – 2025 ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಪೂರ್ವಾಹ್ನ 10 ಗಂಟೆಗೆ ಪ್ರಾರಂಭವಾಗಲಿದೆ.

ಖ್ಯಾತ ವಾಗ್ಮಿಗಳಿಂದ ವಿಶೇಷ ಉಪನ್ಯಾಸ

ಈ ಕಾರ್ಯಕ್ರಮದ ಪ್ರಮುಖ ಭಾಗವಾಗಿ, ಖ್ಯಾತ ವಾಗ್ಮಿಗಳಾದ ಶ್ರೀ ದಾಮೋದರ ಶರ್ಮ ಬಾರ್ಕೂರು ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಶಾಲೆಯ ಪ್ರಾಂಶುಪಾಲರಾದ ಶ್ರೀ ಮಂಜುನಾಥ ಭಟ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಂತಿ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷರಾದ ಶ್ರೀ ಕುಯಿಲಾಡಿ ಸುರೇಶ ನಾಯಕ, ಉಪಪ್ರಾಂಶುಪಾಲರಾದ ಶ್ರೀ ಪ್ರಕಾಶ ಪ್ರಭು, ಎಸ್.ಡಿ.ಎಂ.ಸಿ ಸಂಚಾಲಕರಾದ ಡಾ.ಎನ್.ಎಸ್.ಶೆಟ್ಟಿ, ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಶ್ರೀ ಬಿ.ಎಲ್.ವಿಶ್ವಾಸ್, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ರೇವತಿ ಮತ್ತು ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಶ್ರೀನಿವಾಸ್ ರಾವ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿರಲಿದ್ದಾರೆ.

ಗೌರವ ಶಿಕ್ಷಕರಿಗೆ ಸನ್ಮಾನ

ಕಾರ್ಯಕ್ರಮದಲ್ಲಿ ದಾನಿಗಳ ಸಹಕಾರದೊಂದಿಗೆ ಅತಿಥಿ ಉಪನ್ಯಾಸಕರು, ಗೌರವ ಶಿಕ್ಷಕರು, ಕಛೇರಿ ಹಾಗೂ ಅಡುಗೆ ಸಿಬ್ಬಂದಿಗಳನ್ನು ಸನ್ಮಾನಿಸಿ ಗೌರವಿಸಲಾಗುವುದು. ಈ ಕಾರ್ಯಕ್ರಮಕ್ಕೆ ಪ್ರಾಂಶುಪಾಲರು ಮತ್ತು ಉಪಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕರು ಮತ್ತು ಸಿಬ್ಬಂದಿವರ್ಗ, ಹಳೆ ವಿದ್ಯಾರ್ಥಿ ಸಂಘ, ಉಪಾಧ್ಯಕ್ಷರು ಮತ್ತು ಸರ್ವಸದಸ್ಯರು ಶಾಲಾಭಿವೃದ್ಧಿ ಸಮಿತಿ ಮತ್ತು ಮೇಲುಸ್ತುವಾರಿ ಸಮಿತಿ, ಅಮೃತ ಮಹೋತ್ಸವ ಸಮಿತಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಎಲ್ಲರಿಗೂ ಆದರದ ಸ್ವಾಗತ ಕೋರಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಪ್ರ ಸ್ವಉದ್ಯಮ ಯೋಜನೆ: 2 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ವಉದ್ಯೋಗಕ್ಕೆ ಬಡ್ಡಿ ರಹಿತ/ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ. ಅರ್ಜಿ ಸಲ್ಲಿಸಲು 31-08-2026 ಕೊನೆ ದಿನ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.