spot_img

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಹಿಂದೂಗಳ ನರಮೇಧ, ಭಯೋತ್ಪಾದನೆ ಧರ್ಮಾಧಾರಿತ ಎಂಬುದನ್ನು ಸಾಬೀತುಪಡಿಸಿದೆ : ಕಿಶೋರ್ ಕುಮಾರ್ ಕುಂದಾಪುರ

Date:

spot_img

ಕಾಶ್ಮೀರದ ಪಹಲ್ಗಾಮ್ ನ ಬೈಸರನ್ ಹುಲ್ಲುಗಾವಲಿನಲ್ಲಿ ಹಿಂದೂಗಳನ್ನು ಗುರಿಯಾಗಿಸಿ ದಾಳಿ ನಡೆಸಿರುವ ಉಗ್ರರು ಕೇವಲ ಧರ್ಮ ಕೇಳಿ ರಕ್ತದೋಕುಳಿ ಹರಿಸಿರುವುದು ಭಯೋತ್ಪಾದನೆ ಧರ್ಮಾಧಾರಿತ ಎಂಬುದನ್ನು ಜಗಜ್ಜಾಹೀರುಗೊಳಿಸಿದೆ. ಉಗ್ರರ ನಿರ್ಲಜ್ಜ, ಹೇಡಿತನದ ಪೈಶಾಚಿಕ ಕೃತ್ಯ ಸರ್ವತೃ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.

ಪಾಕ್ ಬೆಂಬಲಿತ ಟಿಆರ್ಎಫ್ ಉಗ್ರರ ದಾಳಿಯಲ್ಲಿ ಮೃತರಾಗಿರುವ ಕರ್ನಾಟಕದ ಮಂಜುನಾಥ್ ರಾವ್, ಭರತ್ ಭೂಷಣ್ ಸಹಿತ 28 ಅಮಾಯಕ ಪ್ರವಾಸಿಗರ ಕಗ್ಗೊಲೆಗೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ ಎಂದು ಅವರು ತಿಳಿಸಿದ್ದಾರೆ.

ಈ ಬೀಭತ್ಸ್ಯ ಘಟನೆಗೆ ದೇಶಾದ್ಯoತ ಸಾರ್ವತ್ರಿಕ ಖಂಡನೆ ವ್ಯಕ್ತವಾಗಿದ್ದು ಕೇಂದ್ರ ಸರಕಾರ, ಅಟ್ಟಹಾಸ ಮೆರೆದ ಉಗ್ರರನ್ನು ಬೇಟೆಯಾಡಿ ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತು ಹಾಕುವ ನಿಟ್ಟಿನಲ್ಲಿ ದಿಟ್ಟ ನಿರ್ಧಾರ ಕೈಗೊಳ್ಳಲಿದೆ ಎಂಬ ಸಂಪೂರ್ಣ ವಿಶ್ವಾಸವಿದೆ.

ಸಮಾಜದಲ್ಲಿ ತುಷ್ಟೀಕರಣ, ವಿಭಜಕ ನೀತಿ ತಾಂಡವವಾಡುತ್ತಿರುವ ಕಾಲಘಟ್ಟದಲ್ಲಿ ವಿಚಲಿತರಾಗಿರುವ ಹಿಂದೂ ಧರ್ಮೀಯರಿಗೆ ಇಂತಹ ಪೈಶಾಚಿಕ ಘಟನೆ ಎಚ್ಚರಿಕೆಯ ಕರೆಗಂಟೆಯಾಗಿದೆ.

ರಾಜ್ಯ ಸರಕಾರ ಕೇವಲ ರಾಜಕೀಯ ಕಾರಣಕ್ಕಾಗಿ ಕೇಂದ್ರ ಸರಕಾರದತ್ತ ಬೊಟ್ಟು ಮಾಡದೆ ದೇಶದ ಏಕತೆ ಮತ್ತು ದೇಶವಾಸಿಗಳ ಸುರಕ್ಷತೆಗಾಗಿ ಎಲ್ಲ ಸ್ತರಗಳಲ್ಲಿ ಗುರುತರವಾದ ಜವಾಬ್ದಾರಿಯನ್ನು ನಿರ್ವಹಿಸುವುದು ಇಂದಿನ ಅಗತ್ಯತೆಯಾಗಿದೆ.

ವಿಶ್ವದಾದ್ಯoತ ಭಯೋತ್ಪಾದನೆಯ ವಿರುದ್ಧ ಸಮರ ಸಾರಿರುವ ಮಹಾನ್ ರಾಷ್ಟ್ರಗಳು ಇಂದು ಈ ಪಿಡುಗಿನ ಮೂಲೋತ್ಪಾಟನೆಗೆ ಭಾರತದ ಜೊತೆ ಕೈಜೋಡಿಸಿರುವ ಸನ್ನಿವೇಶದಲ್ಲಿ ರಾಜ್ಯ ಸರಕಾರ ಭಯೋತ್ಪಾದಕ ದಾಳಿಯಲ್ಲಿ ಮೃತರಾಗಿರುವ ಈರ್ವರು ಕನ್ನಡಿಗರ ಕುಟುಂಬಕ್ಕೆ ಸೂಕ್ತ ರಕ್ಷಣೆ ಮತ್ತು ಪರಿಹಾರವನ್ನು ನೀಡುವ ಮೂಲಕ ಅವರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯ ಮೂಲಕ ಸರಕಾರವನ್ನು ಅಗ್ರಹಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಾಜ್ಯದ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್: ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ, ಸಂಚಾರ ಸ್ಥಗಿತ

ರಾಜ್ಯದಾದ್ಯಂತ ಮುಂಗಾರು ಮಳೆಯ ಅಬ್ಬರ ತೀವ್ರಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ

ಅಮೆರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ಟೇಕ್‌ಆಫ್ ವೇಳೆ ಅಗ್ನಿ ಅವಘಡ: 179 ಮಂದಿ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷಿತ ಸ್ಥಳಾಂತರ

ಡೆನ್ವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕನ್ ಏರ್‌ಲೈನ್ಸ್‌ನ ವಿಮಾನವೊಂದರ ಟೇಕ್‌ಆಫ್ ಪ್ರಯತ್ನದ ಸಂದರ್ಭದಲ್ಲಿ ಪ್ರಮುಖ ಚಕ್ರಗಳ ಬಳಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಭಾರಿ ಆತಂಕಕ್ಕೆ ಕಾರಣವಾಗಿದೆ

ಧರ್ಮಸ್ಥಳ ಪ್ರಕರಣ: ಅನಾಮಿಕ ದೂರುದಾರನ ಮರು ವಿಚಾರಣೆ – ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರಿಂದ ನೇತೃತ್ವ

ರಾಜ್ಯಾದ್ಯಂತ ತೀವ್ರ ಸದ್ದು ಮಾಡುತ್ತಿರುವ ಧರ್ಮಸ್ಥಳ ಅನಾಮಿಕ ದೂರು ಪ್ರಕರಣದ ತನಿಖೆಯು ಮಹತ್ವದ ಘಟ್ಟ ತಲುಪಿದೆ.

ಸೀತಾ ನದಿಯ ಉಕ್ಕಿ ಹರಿಯುವಿಕೆ: ಹೆಬ್ರಿ-ಆಗುಂಬೆ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿ

ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸೀತಾ ನದಿಯು ತುಂಬಿ ಹರಿಯುತ್ತಿದ್ದು, ಹೆಬ್ರಿಯಿಂದ ಆಗುಂಬೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ