spot_img

ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದದಲ್ಲಿ ಮಹಿಳೆಯೊರ್ವರ ಮನೆಗೆ ಗೋ ಕಳ್ಳರು ನುಗ್ಗಿ ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಸಿ ಗೋ ಕಳ್ಳತನ ನಡೆಸಿರುವುದು ಅತ್ಯಂತ ಖಂಡನೀಯ : ರಾಕೇಶ್‌ ಶೆಟ್ಟಿ ಅಧ್ಯಕ್ಷರು ಯುವಮೋರ್ಚಾ ಕಾರ್ಕಳ

Date:

spot_img
spot_img
rakesh-shetty

ಕಾರ್ಕಳ : ಗೋ ಕಳ್ಳರ ಅಟ್ಟಹಾಸ ಮಿತಿ ಮೀರುತ್ತಿದೆ. ಹೈನುಗಾರಿಕೆ ನಡೆಸಿ ಜೀವ ನಡೆಸುತ್ತಿರುವ ಮಹಿಳೆಯ ಮನೆಯ ಹಟ್ಟಿಯಿಂದಲೇ ದನಗಳ ಕಳ್ಳತನ ನಡೆದಿದೆ. ಮಾತ್ರವಲ್ಲದೆ ಮಹಿಳೆಗೆ ಮಾರಕಾಸ್ತ್ರದಿಂದ ಬೆದರಿಸಿರುವುದು ಅತಂಕಕಾರಿ ಘಟನೆ. ಈ ರೀತಿ ಪೋಲಿಸರ ಭಯವಿಲ್ಲದೆ ಕಳ್ಳತನ ನಡೆಯುವುದನ್ನು ನೋಡಿದರೆ ಪೊಲೀಸ್ ಇಲಾಖೆ ಸಂಪೂರ್ಣವಾಗಿ ವಿಫಲವಾದ ಹಾಗೆ ತೋರುತ್ತಿದೆ. ಈ ರೀತಿಯ ಘಟನೆಗಳಿಂದ ಜನಸಾಮಾನ್ಯರು ಆತಂಕದಲ್ಲಿದ್ದು ಪೊಲೀಸ್ ಇಲಾಖೆಯ ಮೇಲೆ ನಂಬಿಕೆ ಕಳೆದುಕೊಂಡಂತಿದೆ ಪರೋಕ್ಷವಾಗಿ ಪೊಲೀಸ್ ಇಲಾಖೆ ಬೆಂಬಲ ಈ ದುಷ್ಕರ್ಮಿಗಳಿಗೆ ಸಿಗುತ್ತಿದೆಯೋ ಎನ್ನುವ ಮಾತುಗಳು ಕೂಡ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿವೆ.

ಈ ರೀತಿಯ ಪ್ರಕರಣ ಕಾರ್ಕಳದಲ್ಲಿ ನಡೆಯುತ್ತಿರುವುದು ಇದೇ ಮೊದಲಲ್ಲ ಆದರೆ ಪೋಲಿಸ್‌ ಇಲಾಖೆ ದನಗಳ್ಳರ ದುಷ್ಕೃತ್ಯಗಳಿಗೆ ಕಡಿವಾಣ ಹಾಕಲು ಸಂಪೂರ್ಣ ವಿಫಲರಾಗಿದ್ದಾರೆ. ಒಂದು ರೀತಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಓಲೈಕೆ ನೀತಿಯು ಗೋ ಕಳ್ಳರಿಗೆ ವರದಾನ ಆದಂತಿದೆ.ಈ ದುಷ್ಕೃತ್ಯದ ಹಿಂದಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸದಿದ್ದಲ್ಲಿ ಸಮಸ್ತ ಹಿಂದೂ ಸಮಾಜ ತಮ್ಮ ರಕ್ಷಣೆಗೆ ಬೀದಿಗಿಳಿದು ಪೊಲೀಸ್ ಠಾಣೆಯ ಮುಂದೆಯೇ ಪ್ರತಿಭಟಿಸುವ ಸಮಯ ಬರಬಹುದು ಎಂದು ಕಾರ್ಕಳ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾದ ರಾಕೇಶ್‌ ಶೆಟ್ಟಿ ಕುಕ್ಕುಂದೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ನಿಧನಕ್ಕೆ ದಿನಕರ ಶೆಟ್ಟಿ ಪಳ್ಳಿ ಸಂತಾಪ

ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (48) ಅವರ ಆತ್ಮಹತ್ಯೆಯ ದುರಂತ ಸಾವಿನ ವಿಷಯ ತಿಳಿದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷರಾದ ದಿನಕರ ಶೆಟ್ಟಿ, ಪಳ್ಳಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಪಾಸ್‌ಪೋರ್ಟ್‌ ವಿಷಯಕ್ಕೆ ಜಗಳ: ಮಗಳ ಎದುರೇ ಹೆಂಡತಿಯನ್ನು ಗುಂಡಿಟ್ಟು ಕೊಂದ ಪತಿ

ಪಾಸ್‌ಪೋರ್ಟ್ ವಿಚಾರವಾಗಿ ನಡೆದ ಜಗಳದಲ್ಲಿ ಪತಿಯೋರ್ವ ತನ್ನ ಮಗಳ ಎದುರೇ ಪತ್ನಿಯನ್ನು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಮಂಗಳವಾರ (ಅ. 14) ಬೆಳಗ್ಗೆ ನಡೆದಿದೆ.

ಜಿಟೆಕ್ಸ್ ಗ್ಲೋಬಲ್ 2025: ವೀಸಾ ಉಲ್ಲಂಘನೆ ಪತ್ತೆಗೆ ಎ.ಐ. ಶಸ್ತ್ರ ಸಜ್ಜಿತ ಸ್ಮಾರ್ಟ್ ಕಾರುಗಳು – ದುಬೈಯಿಂದ ತಂತ್ರಜ್ಞಾನದ ಹೊಸ ದಾಪುಗಾಲು

ದುಬೈನಲ್ಲಿ ನಡೆಯುತ್ತಿರುವ ಜಗತ್ತಿನ ಅತಿದೊಡ್ಡ ತಂತ್ರಜ್ಞಾನ ಪ್ರದರ್ಶನವಾದ ಜಿಟೆಕ್ಸ್ ಗ್ಲೋಬಲ್ 2025 ಮತ್ತೊಮ್ಮೆ ವಿಶ್ವದ ಗಮನವನ್ನು ಸೆಳೆದಿದೆ

ಭಾರತದಲ್ಲಿ AI ಹಬ್‌: $15 ಬಿಲಿಯನ್ ಹೂಡಿಕೆಗೆ ಮುಂದಾದ ಗೂಗಲ್; ಪ್ರಧಾನಿ ಮೋದಿಗೆ ಮಾಹಿತಿ ನೀಡಿದ ಸುಂದರ್ ಪಿಚೈ

ಟೆಕ್ ದೈತ್ಯ ಗೂಗಲ್‌ ಸಂಸ್ಥೆಯ ಮುಖ್ಯಸ್ಥ ಸುಂದರ್ ಪಿಚೈ ಅವರು ಮಂಗಳವಾರ (ಅ. 14) ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೃತಕ ಬುದ್ಧಿಮತ್ತೆ (AI) ಕುರಿತು ಮಹತ್ವದ ಮಾತುಕತೆ ನಡೆಸಿದರು.