spot_img

ಪೋಲೀಸರ ಮನೆಗೆ ಕಳ್ಳರ ದಾಳಿ : ಚಿನ್ನಾಭರಣ ಮತ್ತು ನಗದು ಕಳವು

Date:

ದಾವಣಗೆರೆ ನಗರದ ಬಡಾವಣೆಯಲ್ಲಿ ಪೊಲೀಸ್‌ ಹೆಡ್‌ಕಾನ್ಸ್ಟೇಬಲ್‌ ಜಯನಾಯ್ಕ್‌ ಎಸ್‌.ಎಲ್. ಅವರ ನಿವಾಸದಲ್ಲಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.

ಮಾ.29 ರಂದು ಯುಗಾದಿ ಹಬ್ಬದ ಹಿನ್ನೆಲೆ ಕುಟುಂಬದವರು ಊರಿಗೆ ಹೋಗಿದ್ದ ವೇಳೆ, ಜಯನಾಯ್ಕ್‌ ಮನೆಗೆ ಬೀಗ ಹಾಕಿ ರಾತ್ರಿ ಪಾಳಿಗೆ ಹಾಜರಾಗಿದ್ದರು. ಮರುದಿನ ಬೆಳಗ್ಗೆ 9.30ರ ವೇಳೆಗೆ ಮನೆಗೆ ಮರಳಿದಾಗ, ಮನೆಯ ಗೇಟ್ ಹಾಗೂ ಬಾಗಿಲಿನ ಇಂಟರ್‌ಲಾಕ್ ಮುರಿದುಕೊಂಡು ಕಳ್ಳರು ಒಳನುಗ್ಗಿರುವುದು ಗಮನಕ್ಕೆ ಬಂದಿದೆ.

ಈ ಕಳ್ಳತನದಲ್ಲಿ ಸುಮಾರು 60.5 ಗ್ರಾಂ ತೂಕದ ಚಿನ್ನಾಭರಣ (ಸರ, ಉಂಗುರ, ಬ್ರಾಸ್ಲೆಟ್, ಕಿವಿ ಓಲೆ) ಹಾಗೂ ರೂ. 5,000 ನಗದು ಕಳವುಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಸಿರು ದ್ರಾಕ್ಷಿಯ 6 ಮಹತ್ವದ ಆರೋಗ್ಯ ಲಾಭಗಳು!

ಸಿಹಿ ಮತ್ತು ಸ್ವಲ್ಪ ಹುಳಿ ರುಚಿಯೊಂದಿಗೆ, ದ್ರಾಕ್ಷಿ ಹಣ್ಣು ಆರೋಗ್ಯಕ್ಕೆ ಅತ್ಯಂತ ಲಾಭದಾಯಕವೆಂಬುದು ತಜ್ಞರ ಅಭಿಪ್ರಾಯ. ಪೌಷ್ಟಿಕತೆಯಿಂದ ಸಮೃದ್ಧವಾಗಿರುವ ಈ ಹಣ್ಣು ದೇಹದ ವಿವಿಧ ಅಂಗಾಂಗಗಳಿಗೆ ಬಲ ನೀಡುತ್ತಿದ್ದು, ಹಲವಾರು ಆರೋಗ್ಯ ಸಮಸ್ಯೆಗಳನ್ನು ತಡೆಯುವಲ್ಲಿ ಸಹಕಾರಿ.

ಆರ್‌ಸಿಬಿ ಕಪ್ ಗೆದ್ದ ಖುಷಿಯಲ್ಲಿ ಟ್ವೀಟ್‌ ಮಾಡಿದ ವಿಜಯ್ ಮಲ್ಯಗೆ ಎಸ್‌ಬಿಐ ತಿರುಗುಬಾಣ

ಆರ್‌ಸಿಬಿ ಕಪ್ ಗೆದ್ದ ಖುಷಿಯಲ್ಲಿ ಟ್ವೀಟ್‌ ಮಾಡಿದ ವಿಜಯ್ ಮಲ್ಯಗೆ ಎಸ್‌ಬಿಐ ನಗುಮುಖದ ಇಮೋಜಿಯೊಂದಿಗೆ ಪ್ರತಿಕ್ರಿಯಿಸಿದೆ.

ಬೆವರಿಲ್ಲದೇ ಲಕ್ಷಾಂತರ ರೂಪಾಯಿ ಗಳಿಕೆ: ಮುಂಬೈನ ಆಟೋ ಚಾಲಕನ ಸ್ಮಾರ್ಟ್ ಐಡಿಯಾ

ಹೆಚ್ಚುವರಿ ಶ್ರಮವಿಲ್ಲದೇ ದುಡ್ಡು ಗಳಿಸುವವರ ಕಥೆಗಳು ಅಪರೂಪ, ಆದರೆ ಮುಂಬೈನ ಆಟೋ ಚಾಲಕನೊಬ್ಬ ತನ್ನ ಚತುರತನದಿಂದ ದಿನಕ್ಕೆ ಸಾವಿರಾರು ರೂ. ಗಳಿಸುತ್ತಿರುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗ್ರಾಮ ಪಂಚಾಯತ್ ವ್ಯಾಪ್ತಿಗೂ ರೆರಾ ಕಡ್ಡಾಯ

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿಯೂ ಬಡಾವಣೆ ಅನುಮೋದನೆಗೆ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (ರೆರಾ) ನೋಂದಣಿಯನ್ನು ಕಡ್ಡಾಯಗೊಳಿಸಿ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.