ಗಂಗೊಳ್ಳಿ ಅಳಿವೆ ಬಳಿ ಮೀನುಗಾರಿಕಾ ದೋಣಿ ಮಗುಚಿ ಮೂವರು ಮೀನುಗಾರರು ನಾಪತ್ತೆ

Date:

spot_img

ಕುಂದಾಪುರ : ಮಂಗಳವಾರ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಗಂಗೊಳ್ಳಿ ಅಳಿವೆ ಪ್ರದೇಶದ ಹೊರಭಾಗದಲ್ಲಿ ಮಗುಚಿ ಬಿದ್ದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾಗಿದ್ದು, ಓರ್ವ ಮೀನುಗಾರನನ್ನು ರಕ್ಷಿಸಲಾಗಿದೆ.

ಗಂಗೊಳ್ಳಿಯ ಮೀನುಗಾರರಾದ ಸಿಪಾಯಿ ಸುರೇಶ್ ಖಾರ್ವಿ, ಜಗನ್ನಾಥ್ ಖಾರ್ವಿ ಮತ್ತು ಲೋಹಿತ್ ಖಾರ್ವಿ ನಾಪತ್ತೆಯಾದವರು. ದೋಣಿಯಲ್ಲಿದ್ದ ಸಂತೋಷ್ ಖಾರ್ವಿ ಎಂಬುವವರನ್ನು ಸ್ಥಳೀಯ ಮೀನುಗಾರರು ರಕ್ಷಿಸಿ ಅಪಾಯದಿಂದ ಪಾರು ಮಾಡಿದ್ದಾರೆ.

ಮೀನುಗಾರಿಕೆಗೆ ತೆರಳಿದ್ದ ಈ ಮೀನುಗಾರರು, ಸಮುದ್ರದಲ್ಲಿ ಭಾರಿ ತೂಫಾನ್ ಎದ್ದ ಕಾರಣ ಮೀನುಗಾರಿಕೆ ನಡೆಸದೆ ವಾಪಸ್ಸಾಗುತ್ತಿದ್ದಾಗ ಗಂಗೊಳ್ಳಿ ಅಳಿವೆಯ ಹೊರ ಭಾಗದಲ್ಲಿ ದೋಣಿ ಮಗುಚಿದೆ ಎಂದು ತಿಳಿದುಬಂದಿದೆ.

ಸ್ಥಳೀಯ ಮೀನುಗಾರರ ಸಹಕಾರದೊಂದಿಗೆ ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದ್ದರೂ, ಸತತ ಗಾಳಿ ಸಹಿತ ಭಾರಿ ಮಳೆಯಿಂದಾಗಿ ಸಮುದ್ರದಲ್ಲಿ ಅಬ್ಬರದ ಅಲೆಗಳು ಏಳುತ್ತಿವೆ. ಈ ಪ್ರತಿಕೂಲ ಹವಾಮಾನವು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ಸ್ಥಳೀಯ ಮೀನುಗಾರ ಮುಖಂಡ ರಾಮಪ್ಪ ಖಾರ್ವಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಯುವತಿ ಕೊಲೆ ಕೇಸ್: ಸುಳ್ಳು ಪೋಸ್ಟ್ ಹಾಕಿದ ಹರ್ಷ ಶೆಟ್ಟಿ ವಿರುದ್ಧ ಪ್ರಕರಣ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕರ್ನಾಟಕದಲ್ಲಿ ಇನ್‌ಫ್ಲುಯೆಂಜಾ ಜ್ವರದ ಭೀತಿ: ಆರೋಗ್ಯ ಇಲಾಖೆ ಅಲರ್ಟ್

ರಾಜ್ಯದಲ್ಲಿ ಹವಾಮಾನ ಬದಲಾವಣೆಯಿಂದಾಗಿ ಸಾಂಕ್ರಾಮಿಕ ಇನ್‌ಫ್ಲುಯೆಂಜಾ ಜ್ವರ ಹೆಚ್ಚಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರದಿಂದಿರಲು ಸೂಚನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ರೋಹಿತ್ ಶರ್ಮಾ ನಿವೃತ್ತಿ ವದಂತಿಗೆ ಬ್ರೇಕ್, ಲಾರ್ಡ್ಸ್‌ನಲ್ಲಿ ಶತಕದ ದಾಖಲೆ

ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿ ನಿವೃತ್ತಿ ವದಂತಿಗಳನ್ನು ತಳ್ಳಿಹಾಕಿದ ರೋಹಿತ್ ಶರ್ಮಾ. ಪೂರ್ಣ ಮಾಹಿತಿ ಇಲ್ಲಿದೆ ಓದಿ.