spot_img

ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ! ತಂದೆ-ಮಗ ಸಾವು, ತಾಯಿ ಸ್ಥಿತಿ ಗಂಭೀರ

Date:

ತೆಕ್ಕಟ್ಟೆ: ಕುಂದಾಪುರ ತಾಲ್ಲೂಕಿನ ತೆಕ್ಕಟ್ಟೆ ಬಳಿ ಒಂದು ಬಡ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಮೇ 15ರಂದು ನಡೆದಿದೆ. ತಂದೆ ಮತ್ತು ಮಗ ಸಾವನ್ನಪ್ಪಿ, ತಾಯಿಯ ಸ್ಥಿತಿ ಗಂಭೀರವಾಗಿದೆ.

ಮೃತರನ್ನು ಅಂಕದಕಟ್ಟೆ ಪೆಟ್ರೋಲ್ ಬಂಕ್‌ನ ಉದ್ಯೋಗಿ ಮಾಧವ ದೇವಾಡಿಗ (56) ಮತ್ತು ಅವರ ಪುತ್ರ ಪ್ರಸಾದ್ ದೇವಾಡಿಗ (22) ಎಂದು ಗುರುತಿಸಲಾಗಿದೆ. ತಾಯಿ ತಾರಾ ದೇವಾಡಿಗ ಆತ್ಮಹತ್ಯೆ ಯತ್ನಿಸಿದ್ದು, ಅವರನ್ನು ತಕ್ಷಣವೇ ಸ್ಥಳೀಯರು ಹಾಗೂ ಕೋಟದ ಜೀವನ್ ಮಿತ್ರ ನಾಗರಾಜ್ ಅವರ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತು. ಅವರ ಸ್ಥಿತಿ ಗಂಭೀರವಾಗಿದೆ.

ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲಾಗಿದ್ದು, ಕುಂದಾಪುರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮೃತ ದೇಹಗಳನ್ನು ಮೇಲಕ್ಕೆತ್ತಿದರು. ಕೋಟ ಪೊಲೀಸ್ ಠಾಣೆಯ ಸಿಬ್ಬಂದಿ ಮತ್ತು ಠಾಣಾಧಿಕಾರಿ ರಾಘವೇಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳೀಯರಾದ ಸಂತೋಷ್ ಶೆಟ್ಟಿ, ಶ್ರೀನಾಥ್ ಶೆಟ್ಟಿ ಮತ್ತು ಇತರರು ತಾಯಿ ತಾರಾ ದೇವಾಡಿಗರನ್ನು ರಕ್ಷಿಸಲು ಧಾವಿಸಿದ್ದರು. ಘಟನಾ ಸ್ಥಳಕ್ಕೆ ಮಲ್ಯಾಡಿ ಶಿವರಾಮ ಶೆಟ್ಟಿ, ಪುರಸಭೆ ಸದಸ್ಯ ಗಿರೀಶ್ ದೇವಾಡಿಗ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಆಗಮಿಸಿದ್ದರು.

ಮನೆಯಲ್ಲೊಂದು ಡೆತ್ ನೋಟ್ ಪತ್ತೆಯಾಗಿದ್ದು, ಹೆಚ್ಚಿದ ಸಾಲದ ಭಾರವೇ ಆತ್ಮಹತ್ಯೆಗೆ ಕಾರಣವಾಗಿದ್ದು, “ಮರ್ಯಾದೆಗೆ ಅಂಜಿ ” ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂಬ ಅರ್ಥದ ಬಗ್ಗೆಯೂ ಸೂಚನೆಗಳಿವೆ.

ಘಟನೆ ಇಡೀ ಗ್ರಾಮದ ಹೃದಯ ತಟ್ಟಿದ್ದು, ಸ್ಥಳದಲ್ಲಿ ಮೌನ ಮಡುಗಟ್ಟಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಮರಾಠರು ಪೋರ್ಚುಗೀಸರನ್ನು ಸೋಲಿಸಿದ ದಿನ.

ಭಾರತದ ಸಮರ್ಥ ರಾಜವಂಶದಲ್ಲಿ ಮರಾಠರು ಬಹಳ ಪ್ರಸಿದ್ಧರಾಗಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ಸರ್ವೆ ಅಧಿಕಾರಿಯ ಮನೆಗೆ ದಾಳಿ

ಲೋಕಾಯುಕ್ತದ (ಲೋಕಾಯುಕ್ತ) ಅಧಿಕಾರಿಗಳು ಸರ್ವೆ ಮೇಲ್ವಿಚಾರಕ ಮಂಜುನಾಥ್ ಅವರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.

ಬ್ರಾಹ್ಮಿ ಸೊಪ್ಪಿನ ಅಚ್ಚುಕಟ್ಟಾದ ಲಾಭಗಳು !

ಬ್ರಾಹ್ಮಿ ಅಥವಾ ಒಂದೆಲಗ ಎಂದೇ ಪರಿಚಿತವಾಗಿರುವ ಈ ಔಷಧೀಯ ಸಸ್ಯವು ಹಳೆಯ ಕಾಲದಿಂದಲೂ ಆಯುರ್ವೇದದಲ್ಲಿ ಮೌಲ್ಯವಂತವಾಗಿದೆ.

ಕಾರ್ಕಳದ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ವೇಳೆ ಸಾವು: ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶ

ಶಸ್ತ್ರಚಿಕಿತ್ಸೆ ವೇಳೆ ರಕ್ತಸ್ರಾವವಾಗಿ 54 ವರ್ಷದ ಮಹಿಳೆ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿದ ಕುಟುಂಬಸ್ಥರು ಕಾರ್ಕಳದ ಸ್ಪಂದನ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.