spot_img

ಕರ್ನಾಟಕದಲ್ಲಿ ‘ಥಗ್ ಲೈಫ್’ ಬಿಡುಗಡೆಗೆ ತಡೆ: ಕಮಲ್ ಹಾಸನ್‌ಗೆ ಹೈಕೋರ್ಟ್ ಆದೇಶ

Date:

ಬೆಂಗಳೂರು: ನಟ ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡದಂತೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದ್ದು, ವಿವಾದ ಇತ್ಯರ್ಥವಾಗುವವರೆಗೆ ಸಿನಿಮಾ ಬಿಡುಗಡೆಗೆ ಅವಕಾಶವಿಲ್ಲ ಎಂದು ಆದೇಶಿಸಿದೆ.

ಚಿತ್ರದ ಬಿಡುಗಡೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ರಿಟ್ ಅರ್ಜಿಯ ವಿಚಾರಣೆ ಜೂನ್ 3ರಂದು ಹೈಕೋರ್ಟ್ ಏಕಸದಸ್ಯ ಪೀಠದ ಮುಂದೆ ನಡೆಯಿತು. ವಿಚಾರಣೆ ವೇಳೆ, ನ್ಯಾಯಮೂರ್ತಿಗಳು ಮಧ್ಯಾಹ್ನ 2.30ರ ತನಕ ವಕೀಲರಿಗೆ ನಿಲುವು ಸ್ಪಷ್ಟಪಡಿಸಲು ಗಡುವು ನೀಡಿದ್ದರು. ಇದೀಗ ಕೋರ್ಟ್ ರಾಜ್ಯ ಸರ್ಕಾರದ ಅಡ್ವೊಕೆಟ್ ಜನರಲ್‌ಗೆ ಸೂಚನೆ ನೀಡಿ, ಮುಂದಿನ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿದೆ.

ಚಿತ್ರ ನಿರ್ಮಾಪಕರ ಪರ ವಕೀಲರಾದ ಧ್ಯಾನ್ ಚಿನ್ನಪ್ಪ ಅವರು, ಕಮಲ್ ಹಾಸನ್ ಫಿಲ್ಮ್ ಚೇಂಬರ್‌ಗೆ ಬರೆದ ಪತ್ರವನ್ನು ನ್ಯಾಯಾಧೀಶರ ಮುಂದೆ ಓದಿದ್ದರು. ಆದರೆ ಪತ್ರದಲ್ಲಿ ‘ಒಂದು ಪದ’ ಸೇರಬೇಕೆಂಬುದು ಮುಖ್ಯವಾಗಿದೆ ಎಂದು ನ್ಯಾಯಾಲಯ ತಿಳಿಸಿದ್ದು, “ಅವರು ಕ್ಷಮೆ ಕೇಳಿದರೆ ಎಲ್ಲಾ ಸರಿಯಾಗಬಹುದು” ಎಂಬ ಮಾತುಗಳನ್ನು ನ್ಯಾಯಾಧೀಶರಾದ ನಾಗಪ್ರಸನ್ನ ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಚಿನ್ನಪ್ಪ ಅವರು, ಕಲಾವಿದನ ದೃಷ್ಟಿಕೋಣದಿಂದ ಪತ್ರ ಬರೆದಿದ್ದು, ಯಾವುದೇ ದುರುದ್ದೇಶ ಅವರಿಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

“ಜನರ ಭಾವನೆಗೆ ತುತ್ತಾಗುವಂಥ ವಿಚಾರಗಳಲ್ಲಿ ಎಚ್ಚರತೆ ಅಗತ್ಯ. ಕಮಲ್ ಹಾಸನ್ ಆಗಲಿ, ಯಾರೇ ಆಗಲಿ, ಜನರ ಭಾವನೆಗೆ ಧಕ್ಕೆ ಉಂಟುಮಾಡಬಾರದು” ಎಂದು ನ್ಯಾಯಾಲಯ ತೀವ್ರವಾಗಿ ಎಚ್ಚರಿಕೆ ನೀಡಿದೆ.

ಚಿತ್ರದ ನಿರ್ಮಾಪಕರು ಕೂಡ, ವಿಚಾರಣೆ ಅಂತಿಮವಾಗುವವರೆಗೆ ‘ಥಗ್ ಲೈಫ್’ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಮಾಡುವುದಿಲ್ಲ ಎಂಬ ತೀರ್ಮಾನಕ್ಕೆ ಬಂದಿದ್ದು, ನ್ಯಾಯಾಲಯದ ಸಲಹೆಯಂತೆ ವಿಚಾರಣೆ ಪೂರ್ಣವಾಗುವವರೆಗೆ ತಾಳ್ಮೆಯಿಂದ ನಡೆದುಕೊಳ್ಳಲು ನಿರ್ಧರಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

“ಇನ್ನು ಕೆಲದಿನ ಸಾಮಾಜಿಕ ಜಾಲತಾಣದಿಂದ ದೂರವಿರುತ್ತೇನೆ” : ಅಭಿಮಾನಿಗಳಿಗೆ ಶಾಕ್ ಕೊಟ್ಟ ಶೋಭಾ ಶೆಟ್ಟಿ

ಬಿಗ್ ಬಾಸ್ ಖ್ಯಾತಿಯ ನಟಿ ಹಾಗೂ ಕನ್ನಡ-ತೆಲುಗು ಚಿತ್ರರಂಗದಲ್ಲಿ ಚಿರಪರಿಚಿತರಾದ ಶೋಭಾ ಶೆಟ್ಟಿ ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ “ನಾನು ಕೆಲವು ದಿನಗಳವರೆಗೆ ಸಾಮಾಜಿಕ ಜಾಲತಾಣದಿಂದ ದೂರವಿರುತ್ತೇನೆ” ಎಂಬ ಪೋಸ್ಟ್ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.

ಆರ್‌ಸಿಬಿ ವಿಜಯೋತ್ಸವ ದುರಂತ: ಕಾಲ್ತುಳಿತದಲ್ಲಿ 11 ಅಭಿಮಾನಿಗಳ ಸಾವು – ವಿರಾಟ್ ಕೊಹ್ಲಿ ಹಾಗೂ ಆರ್‌ಸಿಬಿಯಿಂದ ಸಂತಾಪ

ಆರ್‌ಸಿಬಿ ವಿಜಯೋತ್ಸವ ದುರಂತದ ಕುರಿತು ಪ್ರತಿಕ್ರಿಯಿಸಿರುವ ಆರ್‌ಸಿಬಿ ತಾರೆ ವಿರಾಟ್ ಕೊಹ್ಲಿ, ಇನ್‌ಸ್ಟಾಗ್ರಾಮ್‌ನಲ್ಲಿ ಶೋಕದ ಭಾವನೆ ಹಂಚಿಕೊಂಡಿದ್ದು, “ಈ ದುಃಖದ ಸುದ್ದಿ ಕೇಳಿ ನಾನು ಶಬ್ದವಿಲ್ಲದವನಾಗಿದ್ದೇನೆ. ಹೃದಯ ಒಡೆದುಹೋಗಿದೆ” ಎಂದು ಬರೆದುಕೊಂಡಿದ್ದಾರೆ.

ಅಕ್ರಮ ಕ್ರಿಕೆಟ್ ಬೆಟ್ಟಿಂಗ್: ಶಿರಿಯಾರ ಮತ್ತು ಹಾರ್ದಳ್ಳಿ ನಿವಾಸಿಗಳಿಬ್ಬರ ಬಂಧನ

ಕ್ರಿಕೆಟ್ ಬೆಟ್ಟಿಂಗ್ ಅಕ್ರಮಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕೋಟ ಪೊಲೀಸರು ಜೂನ್ 3ರಂದು ರಾತ್ರಿ 10 ಗಂಟೆಗೆ ಸಾಬರಕಟ್ಟೆ ರಿಕ್ಷಾ ನಿಲ್ದಾಣದ ಬಳಿ ಬಂಧಿಸಿದ್ದಾರೆ.

ದಿನ ವಿಶೇಷ – ವಿಶ್ವ ಪರಿಸರ ದಿನ

ಜೂನ್ 5ರಂದು ಆಚರಿಸಲಾಗುತ್ತದೆ. ಪರಿಸರ ಸಂರಕ್ಷಣೆ, ಪರಿಸರ ಬದಲಾವಣೆಯ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ಕ್ರಮಗಳನ್ನು ಪ್ರೋತ್ಸಾಹಿಸುವುದು ಇದರ ಮುಖ್ಯ ಉದ್ದೇಶ. ಯುನೈಟೆಡ್ ನೇಷನ್ಸ್ ಎನ್ವಿರಾನ್ಮೆಂಟ್ ಪ್ರೋಗ್ರಾಂ (UNEP) ಈ ದಿನವನ್ನು ನಡೆಸುತ್ತದೆ.