spot_img

ಕ್ಷಮೆ ಕೇಳದಿದ್ದರೆ ‘ಥಗ್ ಲೈಫ್’ ಕರ್ನಾಟಕದಲ್ಲಿ ಪ್ರದರ್ಶನಕ್ಕೆ ಅವಕಾಶವಿಲ್ಲ – ಕೆಎಫ್‌ಸಿಸಿ ಸ್ಪಷ್ಟನೆ!

Date:

ಬೆಂಗಳೂರು: ತಮ್ಮ ವಿವಾದಿತ ಹೇಳಿಕೆಯ ಕುರಿತು ಕ್ಷಮೆ ಕೇಳದೇ ಇದ್ದರೆ ನಟ ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಸಿನಿಮಾ ರಾಜ್ಯದಲ್ಲಿ ಬಿಡುಗಡೆಗೆ ಅವಕಾಶವಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (KFCC) ಪ್ರಕಟಿಸಿದೆ.

ಸೋಮವಾರ ಕನ್ನಡಪರ ಸಂಘಟನೆಗಳ ಮನವಿಯನ್ನು ಸ್ವೀಕರಿಸಿದ ನಂತರ KFCC ಅಧ್ಯಕ್ಷ ಎಂ. ನರಸಿಂಹಲು ಮಾತನಾಡಿ, “ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳುವುದಿಲ್ಲ” ಎಂಬ ಕಮಲ್ ಹಾಸನ್ ಹೇಳಿಕೆ ಖಂಡನೀಯವಾಗಿದೆ ಎಂದು ಹೇಳಿದ್ದಾರೆ. “ಅವರು ಕ್ಷಮೆ ಕೇಳದೇ ಇದ್ದರೆ ಚಿತ್ರದ ಬಿಡುಗಡೆಯ ಪ್ರಶ್ನೆಯೇ ಇಲ್ಲ” ಎಂದು ತೀವ್ರವಾಗಿ ಸ್ಪಷ್ಟಪಡಿಸಿದ್ದಾರೆ.

ಸಿನಿಮಾ ವಿತರಕರು ಬೇರೆ ಚಿತ್ರಗಳ ಪ್ರದರ್ಶನಕ್ಕೆ ತಯಾರಿ ನಡೆಸುತ್ತಿದ್ದಾರೆ. “ಕ್ಷಮೆ ಕೇಳಿದರೂ ಕೂಡ ತಕ್ಷಣದಲ್ಲಿ ಬಿಡುಗಡೆಗೆ ಅನುಮತಿ ಸಿಗದು,” ಎಂದು ತಿಳಿಸಿರುವ ಮಂಡಳಿ, ದೂರು ನೀಡಿದ ಕನ್ನಡ ಸಂಘಟನೆಗಳೊಂದಿಗೆ ಚರ್ಚೆ ನಡೆಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದೆ.

ಈ ವೇಳೆ ಚಿತ್ರ ನಿರ್ಮಾಪಕ ಸಾ.ರಾ. ಗೋವಿಂದು ಕೂಡ ಪ್ರತಿಕ್ರಿಯಿಸಿ, “ನಮ್ಮ ಕಲಾವಿದರ ಸಂಘಗಳು ನಾಡಿನ ಗೌರವ ಉಳಿಸಬೇಕು. ಇದು ನಮ್ಮ ಸ್ವಾಭಿಮಾನದ ವಿಷಯ. ಕಮಲ್ ಹಾಸನ್ ಚಿತ್ರ ಬಿಡುಗಡೆಗೆ ಅವಕಾಶವಿಲ್ಲ,” ಎಂದು ಹೇಳಿದ್ದಾರೆ.

ಕಮಲ್ ಹಾಸನ್ ಈ ವೇಳೆ ದುಬೈನಲ್ಲಿ ಇದ್ದು, ಜೂನ್ 3ರಂದು ಚೆನ್ನೈಗೆ ಮರಳಲಿದ್ದಾರೆ ಎನ್ನಲಾಗಿದೆ. ‘ಥಗ್ ಲೈಫ್’ ಚಿತ್ರದ ವಿತರಕರು ಕೂಡ KFCCಗೆ ಮಧ್ಯಾಹ್ನದವರೆಗೆ ಸಮಯ ಕೋರಿದ್ದಾರೆ. ಆದರೆ “ನಾವು ಕಮಲ್ ಹಾಸನ್‌ಗಾಗಿ ಕಾಯುತ್ತಿಲ್ಲ,” ಎಂಬುದಾಗಿ ಮಂಡಳಿ ತಿಳಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಲ್ಲಿ11 ಮಂದಿ ಮೃತ್ಯು : ಸಿಎಂ ಸಿದ್ದರಾಮಯ್ಯರವರಿಂದ ₹10 ಲಕ್ಷ ಪರಿಹಾರ ಘೋಷಣೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದು, ಸಿದ್ದರಾಮಯ್ಯಮೃತಪಟ್ಟ 11 ಮಂದಿ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.

“ಇನ್ನು ಕೆಲದಿನ ಸಾಮಾಜಿಕ ಜಾಲತಾಣದಿಂದ ದೂರವಿರುತ್ತೇನೆ” : ಅಭಿಮಾನಿಗಳಿಗೆ ಶಾಕ್ ಕೊಟ್ಟ ಶೋಭಾ ಶೆಟ್ಟಿ

ಬಿಗ್ ಬಾಸ್ ಖ್ಯಾತಿಯ ನಟಿ ಹಾಗೂ ಕನ್ನಡ-ತೆಲುಗು ಚಿತ್ರರಂಗದಲ್ಲಿ ಚಿರಪರಿಚಿತರಾದ ಶೋಭಾ ಶೆಟ್ಟಿ ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ “ನಾನು ಕೆಲವು ದಿನಗಳವರೆಗೆ ಸಾಮಾಜಿಕ ಜಾಲತಾಣದಿಂದ ದೂರವಿರುತ್ತೇನೆ” ಎಂಬ ಪೋಸ್ಟ್ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.

ಆರ್‌ಸಿಬಿ ವಿಜಯೋತ್ಸವ ದುರಂತ: ಕಾಲ್ತುಳಿತದಲ್ಲಿ 11 ಅಭಿಮಾನಿಗಳ ಸಾವು – ವಿರಾಟ್ ಕೊಹ್ಲಿ ಹಾಗೂ ಆರ್‌ಸಿಬಿಯಿಂದ ಸಂತಾಪ

ಆರ್‌ಸಿಬಿ ವಿಜಯೋತ್ಸವ ದುರಂತದ ಕುರಿತು ಪ್ರತಿಕ್ರಿಯಿಸಿರುವ ಆರ್‌ಸಿಬಿ ತಾರೆ ವಿರಾಟ್ ಕೊಹ್ಲಿ, ಇನ್‌ಸ್ಟಾಗ್ರಾಮ್‌ನಲ್ಲಿ ಶೋಕದ ಭಾವನೆ ಹಂಚಿಕೊಂಡಿದ್ದು, “ಈ ದುಃಖದ ಸುದ್ದಿ ಕೇಳಿ ನಾನು ಶಬ್ದವಿಲ್ಲದವನಾಗಿದ್ದೇನೆ. ಹೃದಯ ಒಡೆದುಹೋಗಿದೆ” ಎಂದು ಬರೆದುಕೊಂಡಿದ್ದಾರೆ.

ಅಕ್ರಮ ಕ್ರಿಕೆಟ್ ಬೆಟ್ಟಿಂಗ್: ಶಿರಿಯಾರ ಮತ್ತು ಹಾರ್ದಳ್ಳಿ ನಿವಾಸಿಗಳಿಬ್ಬರ ಬಂಧನ

ಕ್ರಿಕೆಟ್ ಬೆಟ್ಟಿಂಗ್ ಅಕ್ರಮಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕೋಟ ಪೊಲೀಸರು ಜೂನ್ 3ರಂದು ರಾತ್ರಿ 10 ಗಂಟೆಗೆ ಸಾಬರಕಟ್ಟೆ ರಿಕ್ಷಾ ನಿಲ್ದಾಣದ ಬಳಿ ಬಂಧಿಸಿದ್ದಾರೆ.