ತಿರುಪತಿ ತಿರುಮಲದಲ್ಲಿ ಭಕ್ತರಿಗೆ ಹೊಸ ರುಚಿ! ಅನ್ನ ಪ್ರಸಾದದಲ್ಲಿ ಮಸಾಲಾ ವಡಾ ಸೇರ್ಪಡೆ

Date:

spot_img

ತಿರುಪತಿ: ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಭಕ್ತರಿಗೆ ನೀಡುವ ಉಚಿತ ಅನ್ನ ಪ್ರಸಾದದಲ್ಲಿ ಹೊಸ ಐಟಂ ಸೇರಿದೆ. ಗುರುವಾರದಿಂದ ತಿರುಮಲದ ತಾರಿಗೊಂಡ ವೆಂಗಮಾಂಬ ಅನ್ನ ಪ್ರಸಾದಂ ಭವನದಲ್ಲಿ ಮಸಾಲಾ ವಡಾ ಸಹ ಭಕ್ತರಿಗೆ ಪೂರೈಸಲಾಗುತ್ತಿದೆ.

ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ಮತ್ತು ಅಧಿಕಾರಿಗಳು ಅಧಿಕೃತವಾಗಿ ಈ ಸೇವೆಗೆ ಚಾಲನೆ ನೀಡಿದ್ದು, ಬೆಳಗ್ಗೆ 10:30ರಿಂದ ಸಂಜೆ 4ರವರೆಗೆ ದಿನವೂ 35,000 ಮಸಾಲಾ ವಡೆಗಳನ್ನು ಭಕ್ತರಿಗೆ ವಿತರಿಸಲಾಗುವುದು. ಭವಿಷ್ಯದಲ್ಲಿ ಇದರ ಪ್ರಮಾಣವನ್ನು ಹೆಚ್ಚಿಸುವ ಯೋಜನೆಯೂ ಇದೆ.

ಈ ಹೊಸ ಸೇರ್ಪಡೆಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅನುಮೋದನೆ ನೀಡಿದ್ದು, ಭಕ್ತರಿಗೆ ಇನ್ನಷ್ಟು ವೈವಿಧ್ಯಮಯ ಅನ್ನ ಪ್ರಸಾದ ಒದಗಿಸಲು ಪ್ರಯತ್ನಿಸಲಾಗುತ್ತಿದೆ. 1985ರಲ್ಲಿ ಮಾಜಿ ಮುಖ್ಯಮಂತ್ರಿ ಎನ್.ಟಿ. ರಾಮರಾವ್ ಪ್ರಾರಂಭಿಸಿದ ನಿತ್ಯ ಅನ್ನದಾನ ದತ್ತಿ ಯೋಜನೆ ಇದೀಗ ಶ್ರೀ ವೆಂಕಟೇಶ್ವರ ಅನ್ನ ಪ್ರಸಾದಂ ಟ್ರಸ್ಟ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಭಕ್ತರ ದೇಣಿಗೆ ಮತ್ತು ಬ್ಯಾಂಕ್ ಬಡ್ಡಿಯ ನೆರವಿನಿಂದ ಉಚಿತ ಅನ್ನದಾನ ಸೇವೆ ನಿರ್ವಹಿಸಲಾಗುತ್ತಿದೆ.

ಪ್ರತಿ ವರ್ಷ ಹೊಸ ವರ್ಷ, ವೈಕುಂಠ ಏಕಾದಶಿ, ರಥಸಪ್ತಮಿ, ಗರುಡ ಸೇವೆ ಮುಂತಾದ ಶುಭ ಸಂದರ್ಭದಲ್ಲಿ 2 ಲಕ್ಷಕ್ಕೂ ಹೆಚ್ಚು ಭಕ್ತರಿಗೆ ಉಚಿತ ಊಟ ವ್ಯವಸ್ಥೆ ಕಲ್ಪಿಸಲಾಗುತ್ತದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.