ಕಳ್ಳ-ಪೊಲೀಸ್ ಆಟದ ವೇಳೆ ದುರ್ಘಟನೆ – ಗುಂಡೇಟಿನಿಂದ 3 ವರ್ಷದ ಮಗುವಿನ ದಾರುಣ ಅಂತ್ಯ!

Date:

spot_img

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೊಂದೇಮಾದಿಹಳ್ಳಿಯಲ್ಲಿ ನಡೆದ ಅಕಸ್ಮಿಕ ಗುಂಡಿನ ದಾಳಿ ದಾರುಣ ಅನಾಹುತಕ್ಕೆ ಕಾರಣವಾಗಿದೆ. 13 ವರ್ಷದ ಬಾಲಕನೊಬ್ಬ ಆಟವಾಡುವ ವೇಳೆ ಆಕಸ್ಮಿಕವಾಗಿ ತನ್ನ 3 ವರ್ಷದ ತಮ್ಮನ ಮೇಲೆ ಗುಂಡು ಹಾರಿಸಿ ಅವನ ಸಾವಿಗೆ ಕಾರಣನಾದ ಘಟನೆ ನಡೆದಿದೆ.

ಈ ದುರ್ಘಟನೆ ನಾಗಮಂಗಲದ ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿಯವರ ಕೋಳಿ ಫಾರಂನಲ್ಲಿ ನಡೆದಿದೆ. ಕೋಳಿಫಾರಂನ ಭದ್ರತೆಗೆ ಅಲ್ಲಿ ಒಂದು ಅಸಲಿ ಗನ್ ಇಡಲಾಗಿತ್ತು. ಪಶ್ಚಿಮ ಬಂಗಾಳ ಮೂಲದ ಕೂಲಿ ಕಾರ್ಮಿಕ ದಂಪತಿ ಶಶಾಂಕ್ ಮತ್ತು ಲಿಪಿಕ ಈ ಕೋಳಿಫಾರಂನಲ್ಲಿ ಕೆಲಸ ಮಾಡುತ್ತಿದ್ದು, ಅವರ ಪುತ್ರ 13 ವರ್ಷದ ಸುದೀಪ್ ದಾಸ್ ಮತ್ತು 3 ವರ್ಷದ ಮಗುವನ್ನು ಆಟವಾಡಲು ಬಿಟ್ಟು ಅವರು ಕೆಲಸಕ್ಕೆ ತೆರಳಿದ್ದರು.

ಸುದೀಪ್ ಫಾರಂನಲ್ಲಿ ಇದ್ದ ಗನ್ ತೆಗೆದುಕೊಂಡು “ಕಳ್ಳ-ಪೊಲೀಸ್” ಆಟವಾಡಲು ಮುಂದಾದಾಗ ಆಕಸ್ಮಿಕವಾಗಿ ಗುಂಡು ಹಾರಿ 3 ವರ್ಷದ ಮಗುವಿನ ಹೊಟ್ಟೆಗೆ ತಗುಲಿದೆ. ಇದರಿಂದ ಮಗುವಿನ ಹೊಟ್ಟೆ ಛಿದ್ರಗೊಂಡಿದ್ದು,ಕರುಳು ಹೊರಬಂದು ತೀವ್ರ ರಕ್ತಸ್ರಾವವಾಗತೊಡಗಿದೆ. ಬಾಲಕನ ತಾಯಿ ಲಿಪಿಕ ಕೂಡ ಈ ದಾಳಿಯಲ್ಲಿ ಗಾಯಗೊಂಡಿದ್ದಾರೆ.

ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಹೊಟ್ಟೆಯ ಗಾಯದಿಂದ ತೀವ್ರ ರಕ್ತಸ್ರಾವವಾಗಿ ಚಿಕಿತ್ಸೆ ಫಲಿಸದೆ ಮಗು ಮೃತಪಟ್ಟಿದೆ. ಈ ದುರ್ಘಟನೆಯು ಕುಟುಂಬದವರ ದುಃಖಕ್ಕೆ ಕಾರಣವಾಗಿದ್ದು, ಗ್ರಾಮಸ್ಥರೂ ಆಘಾತಗೊಂಡಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಕೋಳಿಫಾರಂನಲ್ಲಿದ್ದ ಗನ್ ಮಕ್ಕಳಿಗೆ ಹೇಗೆ ಲಭ್ಯವಾಯಿತು? ಅದನ್ನು ಭದ್ರವಾಗಿರಿಸಿರಲಿಲ್ಲವೇ ? ಎಂಬ ಬಗ್ಗೆ ತನಿಖೆ ಆರಂಭಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.