ನಿವೃತ್ತ ಗ್ರಂಥಪಾಲಕ ಕೆ. ಗೋವಿಂದ ರಾವ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Date:

spot_img

ಕಾರ್ಕಳ : ಇತ್ತೀಚೆಗೆ ನಿಧನರಾದ ಕಾರ್ಕಳದ ಗ್ರಂಥಾಲಯದ ನಿವೃತ್ತ ಗ್ರಂಥಪಾಲಕ ಕೆ. ಗೋವಿಂದ ರಾವ್ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವು ಹಿರಿಯಂಗಡಿಯ ದುರ್ಗಾಪರಮೇಶ್ವರಿ ದೇವಳದ ಸಭಾಂಗಣದಲ್ಲಿ ಜರಗಿತು.

ನುಡಿನಮನ ಸಲ್ಲಿಸಿದ ಶಿಕ್ಷಕ ರಾಜೇಂದ್ರ ಭಟ್ ಕೆ ಅವರು ಗೋವಿಂದ ರಾವ್ ಅವರು ಕೇವಲ ಗ್ರಂಥಪಾಲಕ ಮಾತ್ರ ಆಗಿರದೇ ಗ್ರಂಥಾಲಯಕ್ಕೆ ಬಂದ ಹಿರಿಯ, ಕಿರಿಯ ಓದುಗರನ್ನು ಪ್ರೋತ್ಸಾಹಿಸುವ ಮತ್ತು ಮಾರ್ಗದರ್ಶನ ಮಾಡುವ ಕೆಲಸವನ್ನು ಮಾಡುತ್ತಿದ್ದರು. ನನ್ನ ಮತ್ತು ನನ್ನಂತಹ ನೂರಾರು ಓದುಗರ ಬಾಲ್ಯ, ಹದಿಹರೆಯ ಮತ್ತು ಯೌವ್ವನಗಳನ್ನು ಪುಸ್ತಕಗಳ ಓದಿನ ಮೂಲಕ ಶ್ರೀಮಂತಗೊಳಿಸಿದ ಕೀರ್ತಿಯು ಅವರಿಗೆ ಸಲ್ಲುತ್ತದೆ. ಅದೇ ರೀತಿ ಕಾರ್ಕಳದ ಗಾಂಧಿ ಮೈದಾನದ ವಿಸ್ತಾರವಾದ ಗ್ರಂಥಾಲಯದ ಕಟ್ಟಡ ನಿರ್ಮಾಣವಾಗಲು ಅವರು ಓದುಗರ ಮೂಲಕ ಕಾರ್ಡ್ ಚಳುವಳಿಯನ್ನು ಮಾಡಿದ್ದು ಪರೋಕ್ಷವಾಗಿ ಕಾರಣ ಆಗಿತ್ತು. ಹಾಗೆಯೇ ಅವಿಭಜಿತ ಕರಾವಳಿ ಜಿಲ್ಲೆಗಳ ಮಟ್ಟದ ಚೆಸ್ ಫೆಡರೇಶನ್ ಸ್ಥಾಪನೆ ಮಾಡಿ ಅಖಿಲಭಾರತ ಮಟ್ಟದ ಚೆಸ್ ಟೂರ್ನಿ ಸಂಘಟನೆ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.

ನಿವೃತ್ತ ಪ್ರಾಂಶುಪಾಲರಾದ ಮಿತ್ರಪ್ರಭಾ ಹೆಗ್ಡೆ ಅವರು ಮಾತಾಡಿ ನನಗೆ ಮತ್ತು ನನ್ನ ಕಾಲೇಜಿನ ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಬೇಕಾಗುವ ನೂರಾರು ಪುಸ್ತಕಗಳನ್ನು ಒದಗಿಸಿ ಅವರು ಮಹದುಪಕಾರ ಮಾಡಿದ್ದಾರೆ ಎಂದರು.

ಅದೇ ರೀತಿ ನಿವೃತ್ತ ಶಿಕ್ಷಕ ಮತ್ತು ಸಾಮಾಜಿಕ ಕಾರ್ಯಕರ್ತರಾದ ಬಿಪಿನಚಂದ್ರ ಪಾಲ್ ಅವರು ಮಾತಾಡಿ ತನ್ನ ಮತ್ತು ಗೋವಿಂದ ರಾಯರ ದೀರ್ಘಕಾಲದ ಒಡನಾಟವನ್ನು ಸ್ಮರಿಸಿ ಅವರು ನಿಜವಾದ ಅರ್ಥದಲ್ಲಿ ಒಬ್ಬ ಗ್ರಂಥ ಸೇವಕರಾಗಿದ್ದರು ಮತ್ತು ನನ್ನ ಪತ್ರಿಕೋದ್ಯಮಕ್ಕೆ ಬೇಕಾದ ಗ್ರಂಥಗಳನ್ನು ಹುಡುಕಿ ನನಗೆ ಕೊಡುತ್ತಿದ್ದರು ಎಂದರು.
ಕಾಂಗ್ರೆಸ್ ನಾಯಕರಾದ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರು ಮಾತನಾಡಿ ಗೋವಿಂದರಾಯರು ಇಂದಿನ ಸಮಾಜಕ್ಕೆ ಉನ್ನತವಾದ ಪರಂಪರೆಯನ್ನು ಬಿಟ್ಟು ಹೋಗಿದ್ದಾರೆ. ಅವರ ಜ್ಞಾನಸತ್ರವನ್ನು ಅವರ ಮಕ್ಕಳು ಕ್ಷಮಾ ರಾವ್, ಶುಭದ್ ರಾವ್, ಡಾಕ್ಟರ್ ಶರದ್ ರಾವ್ ಅವರು ಮುಂದುವರಿಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಎಂದರು. ಮಾಜಿ ಸಚಿವರು ಮತ್ತು ಪೂರ್ವ ಸಂಸದರಾದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಗೋವಿಂದರಾಯರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿದರು.

ಛತ್ರಪತಿ ಫೌಂಡೇಶನ್ ಅಧ್ಯಕ್ಷರಾದ ಗಿರೀಶ್ ರಾವ್ ಅವರು ಕಾರ್ಯಕ್ರಮ ನಿರ್ವಹಣೆ ಮಾಡಿ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬ್ರಹ್ಮಾಂಡದ ರಹಸ್ಯ ಭೇದಿಸಿದ ವಿಜ್ಞಾನಿಗಳು: ಆರಂಭಿಕ ಯುಗದಲ್ಲೇ ಬೃಹತ್ ಗೆಲಕ್ಸಿಗಳು ನಾಶವಾಗಲು ಕಾರಣ ಪತ್ತೆ

ಆರಂಭಿಕ ಬ್ರಹ್ಮಾಂಡದಲ್ಲಿ ಬೃಹತ್ ಗೆಲಕ್ಸಿಗಳು ಹೇಗೆ ನಾಶವಾದವು ಎಂಬ ರಹಸ್ಯವನ್ನು ಜೇಮ್ಸ್ ವೆಬ್ ಟೆಲಿಸ್ಕೋಪ್ (JWST) ಮತ್ತು ALMA ನೆರವಿನಿಂದ ವಿಜ್ಞಾನಿಗಳು ಪತ್ತೆಹಚ್ಚಿದ್ದಾರೆ.

ದಿನ ವಿಶೇಷ – ವಿಶ್ವ ರಕ್ತದಾನಿಗಳ ದಿನ

ವಿಶ್ವ ರಕ್ತದಾನಿಗಳ ದಿನದ ಮಹತ್ವ ಮತ್ತು ಜೂನ್ 14 ರಂದೇ ಇದನ್ನು ಏಕೆ ಆಚರಿಸಲಾಗುತ್ತದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ರಕ್ತದಾನ ಮಾಡಿ ಜೀವ ಉಳಿಸಿ!

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.