spot_img

ತುಮಕೂರು: ಒಟಿಪಿ ಹೇಳದಿದ್ದರೂ ನಿವೃತ್ತ ನೌಕರನ ಖಾತೆಯಿಂದ ₹17 ಲಕ್ಷ ಮಾಯ; ಹೊಸ ಮಾದರಿಯ ಸೈಬರ್‌ ವಂಚನೆ!

Date:

spot_img
cyber

ತುಮಕೂರು: ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೊಸ ರೂಪ ಪಡೆದುಕೊಳ್ಳುತ್ತಿದ್ದು, ತುಮಕೂರಿನಲ್ಲಿ ನಿವೃತ್ತ ರೇಷ್ಮೆ ಇಲಾಖೆ ನೌಕರರೊಬ್ಬರು ಇದಕ್ಕೆ ಬಲಿಯಾಗಿದ್ದಾರೆ. ಯಾವುದೇ ಒಟಿಪಿ (OTP) ಹೇಳದಿದ್ದರೂ, ಅಥವಾ ಯಾರೊಂದಿಗೂ ಬ್ಯಾಂಕ್ ಖಾತೆಯ ವಿವರ ಹಂಚಿಕೊಳ್ಳದಿದ್ದರೂ, ಅವರ ಖಾತೆಯಿಂದ ಬರೋಬ್ಬರಿ ₹17 ಲಕ್ಷ ಹಣ ಬೇರೆ ಖಾತೆಗಳಿಗೆ ವರ್ಗಾವಣೆಯಾಗಿದೆ.

ಸೈಬರ್ ವಂಚನೆಗೊಳಗಾದ ನಿವೃತ್ತ ನೌಕರನ ಹೆಸರು ಸಿ.ಇ. ನಾಗರಾಜು. ಜುಲೈ 31ರ ಮಧ್ಯರಾತ್ರಿ 12.17ರಿಂದ 1 ಗಂಟೆಯವರೆಗೆ ಅವರ ಮೊಬೈಲ್‌ಗೆ ಹಣ ವರ್ಗಾವಣೆಯ ಕುರಿತು ನಿರಂತರವಾಗಿ ಮೆಸೇಜ್‌ಗಳು ಬರಲಾರಂಭಿಸಿವೆ. ನಿದ್ದೆಯಿಂದ ಎಚ್ಚರಗೊಂಡು ಮೊಬೈಲ್ ಪರಿಶೀಲಿಸಿದಾಗ, ತಮ್ಮ ಖಾತೆಯಿಂದ ದೊಡ್ಡ ಮೊತ್ತದ ಹಣ ಮಾಯವಾಗಿರುವುದು ಅವರ ಗಮನಕ್ಕೆ ಬಂದಿದೆ.

ವಂಚಕರು ನಾಗರಾಜು ಅವರ ಖಾತೆಯಿಂದ ₹5 ಲಕ್ಷ, ₹50 ಸಾವಿರ, ₹98 ಸಾವಿರ ಹೀಗೆ ಸುಮಾರು 6 ಬಾರಿ ಹಣವನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಿದ್ದಾರೆ. ತಕ್ಷಣವೇ ಬ್ಯಾಂಕಿನ ಸಹಾಯವಾಣಿಯನ್ನು ಸಂಪರ್ಕಿಸಿ ಮಾಹಿತಿ ಪಡೆದ ನಾಗರಾಜು, ವಂಚಕರನ್ನು ಪತ್ತೆ ಹಚ್ಚಿ, ಹಣ ವಾಪಸ್‌ ಕೊಡಿಸುವಂತೆ ಕೋರಿ ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಲಿಂಕ್ ಕಳುಹಿಸಿ ವಂಚಿಸುವುದು, ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಬೆದರಿಸುವುದು, ಪಾರ್ಟ್ ಟೈಮ್ ಕೆಲಸದ ಆಮಿಷವೊಡ್ಡುವಂತಹ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿದ್ದವು. ಆದರೆ ಈಗ ಯಾವುದೇ ಒಟಿಪಿ ಬರದಿದ್ದರೂ ಅಥವಾ ಅದನ್ನು ಹಂಚಿಕೊಳ್ಳದಿದ್ದರೂ ಹಣ ಕಡಿತಗೊಳ್ಳುತ್ತಿರುವ ಈ ಹೊಸ ಮಾದರಿಯ ವಂಚನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹುಲಿಕಲ್ ಘಾಟಿಯಲ್ಲಿ ಮತ್ತೊಮ್ಮೆ ಭಾರೀ ಕುಸಿತ; ಶೀಘ್ರವೇ ಬೃಹತ್ ವಾಹನಗಳ ಸಂಚಾರ ನಿಷೇಧ ಸಾಧ್ಯತೆ!

ರಾಜ್ಯದ ಪ್ರಮುಖ ಘಾಟ್‌ಗಳಲ್ಲಿ ಒಂದಾದ ಹುಲಿಕಲ್ ಘಾಟ್ (ಬಾಳೆಬರೆ) ರಸ್ತೆಯಲ್ಲಿ ಮತ್ತೆ ದೊಡ್ಡ ಪ್ರಮಾಣದ ಕುಸಿತ ಸಂಭವಿಸಿದ್ದು, ಇದು ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.

ಧರ್ಮಸ್ಥಳ ಪ್ರಕರಣ: 11ನೇ ಸ್ಥಳದಲ್ಲಿ ಶೋಧ ವಿಫಲ; 6ನೇ ಸ್ಥಳದ ಅಸ್ಥಿಪಂಜರ ಕೇಸ್ SITಗೆ ವರ್ಗಾವಣೆ!

ಹಲವಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಧರ್ಮಸ್ಥಳ ಪ್ರಕರಣದ ತನಿಖೆ ಮುಂದುವರೆದಿದೆ. ಆದರೆ, ಆಗಸ್ಟ್ 5ರಂದು ನಡೆಸಿದ ಶೋಧಕಾರ್ಯದಲ್ಲಿ ದೂರುದಾರರು ಗುರುತು ಮಾಡಿದ್ದ 11ನೇ ಸ್ಥಳದಲ್ಲಿ ಯಾವುದೇ ಕುರುಹು ಪತ್ತೆಯಾಗಿಲ್ಲ.

ಕಾಂಗ್ರೆಸ್ ಸಿದ್ಧಾಂತ ಜನರಿಗೆ ತಲುಪಿಸಿ: ಯಶಸ್ಸು ತಾತ್ಕಾಲಿಕವಲ್ಲ ಎಂದ ಕಿಮ್ಮನೆ ರತ್ನಾಕರ್

ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ನಿಲುವು ಮತ್ತು ವಿಚಾರಧಾರೆಗಳನ್ನು ಜನಸಾಮಾನ್ಯರಿಗೆ ಪರಿಣಾಮಕಾರಿಯಾಗಿ ತಲುಪಿಸುವಂತೆ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷ ಕಿಮ್ಮನೆ ರತ್ನಾಕರ್ ಅವರು ಕಾರ್ಯಕರ್ತರಿಗೆ ಕರೆ ನೀಡಿದರು.

ಧರ್ಮಸ್ಥಳ ತನಿಖೆಗೆ ‘GPR’ ಬಳಸುವಂತೆ ಸರ್ಕಾರಕ್ಕೆ ನಟ ಚೇತನ್ ಮನವಿ

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದಾರೆ ಎನ್ನಲಾದ ಪ್ರಕರಣದ ತನಿಖೆಗಾಗಿ SIT ನಡೆಸುತ್ತಿರುವ ಶೋಧಕಾರ್ಯಕ್ಕೆ ಗ್ರೌಂಡ್ ಪೆನಿಟ್ರೇಟಿಂಗ್ ರಾಡಾರ್ (GPR) ಮತ್ತು ಇತರ ಆಧುನಿಕ ತಂತ್ರಜ್ಞಾನಗಳನ್ನು ಬಳಸುವಂತೆ ನಟ ಮತ್ತು ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸಾ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.