ಮೋದಿ ಭೇಟಿ ವೇಳೆ ಫ್ಲೆಕ್ಸ್ ಅಬ್ಬರ; ಸ್ವಪಕ್ಷದ ಆಡಳಿತವಿರುವ ನಗರ ಪಾಲಿಕೆಯಿಂದಲೇ ಬಿಜೆಪಿಗೆ ಪೊಲೀಸ್ ಕೇಸ್!

Date:

spot_img

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರ ಕೇರಳ ಭೇಟಿಯ ಸಂದರ್ಭದಲ್ಲಿ ನಗರದ ಸೌಂದರ್ಯಕ್ಕೆ ಧಕ್ಕೆ ತಂದ ಹಾಗೂ ಪಾದಚಾರಿಗಳ ಹಾದಿಗೆ ಅಡ್ಡಿಪಡಿಸಿದ ಕಾರಣಕ್ಕೆ ಸ್ವಪಕ್ಷದ ಆಡಳಿತವಿರುವ ಮಹಾನಗರ ಪಾಲಿಕೆಯೇ ಬಿಜೆಪಿಗೆ ಬರೆ ಎಳೆದಿದೆ. ಪಾದಚಾರಿ ಮಾರ್ಗಗಳಲ್ಲಿ ಕಾನೂನುಬಾಹಿರವಾಗಿ ಬ್ಯಾನರ್ ಹಾಗೂ ಫ್ಲೆಕ್ಸ್ ಅಳವಡಿಸಿದ ಆರೋಪದ ಮೇಲೆ ತಿರುವನಂತಪುರಂ ಕಾರ್ಪೊರೇಷನ್ ಬಿಜೆಪಿಗೆ ಬರೋಬ್ಬರಿ 19.7 ಲಕ್ಷ ರೂ. ದಂಡ ವಿಧಿಸಿದೆ.

ಕೇರಳ ಹೈಕೋರ್ಟ್‌ನ ಕಟ್ಟುನಿಟ್ಟಿನ ಆದೇಶಗಳನ್ನು ಗಾಳಿಗೆ ತೂರಿ, ನಗರದ ಪಾಲಯಂ ಜಂಕ್ಷನ್‌ನಿಂದ ಪುಲಿಮೂಡು ಜಂಕ್ಷನ್‌ವರೆಗಿನ ಫುಟ್‌ಪಾತ್‌ಗಳಲ್ಲಿ ದೊಡ್ಡ ಮಟ್ಟದ ಪ್ರಚಾರ ಫಲಕಗಳನ್ನು ಹಾಕಲಾಗಿತ್ತು. ಇದರಿಂದ ಸಾರ್ವಜನಿಕ ಸಂಚಾರಕ್ಕೆ ತೀವ್ರ ತೊಂದರೆಯುಂಟಾದ ಬಗ್ಗೆ ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಗಿಳಿದ ಪಾಲಿಕೆ ಅಧಿಕಾರಿಗಳು, ನಿಯಮ ಉಲ್ಲಂಘನೆಗಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಕರಮಣ ಜಯನ್ ಅವರ ವಿರುದ್ಧ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಶುಕ್ರವಾರ ಪ್ರಧಾನಿಯವರ ರೋಡ್ ಶೋ ಮತ್ತು ಸಾರ್ವಜನಿಕ ಸಭೆ ಮುಗಿದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 223 ಹಾಗೂ 285 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ವಿಶೇಷವೆಂದರೆ, ತಿರುವನಂತಪುರಂ ಪಾಲಿಕೆಯಲ್ಲಿ ಸದ್ಯ ಬಿಜೆಪಿಯೇ ಅಧಿಕಾರದಲ್ಲಿದ್ದು, ಕಾನೂನು ಪಾಲನೆ ವಿಷಯದಲ್ಲಿ ಯಾವುದೇ ಮುಲಾಜಿಲ್ಲದೆ ದಂಡ ವಿಧಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಮೆರಿಕ-ಇರಾನ್ ಯುದ್ಧ: ಪಾಕಿಸ್ತಾನದಿಂದ ಶಾಂತಿ ಯತ್ನ

ಅಮೆರಿಕ ಮತ್ತು ಇರಾನ್ ನಡುವೆ ಯುದ್ಧ 10ನೇ ದಿನಕ್ಕೆ ಕಾಲಿಟ್ಟಿದ್ದು, ಶಾಂತಿ ಒಪ್ಪಂದಕ್ಕೆ ಪಾಕಿಸ್ತಾನದ ಮೂಲಕ ಪ್ರಯತ್ನ ಸಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ತೈಲ ಬೆಲೆ ಭಾರಿ ಏರಿಕೆ: ಇರಾನ್ ಅಮೆರಿಕ ಸಂಘರ್ಷದ ಪ್ರಭಾವ

ಮಧ್ಯಪ್ರಾಚ್ಯ ಯುದ್ಧದಿಂದಾಗಿ ಕಚ್ಚಾ ತೈಲ ದರದಲ್ಲಿ ಭಾರಿ ಏರಿಕೆ ಕಂಡಿದೆ. ಭಾರತಕ್ಕೆ ಇಂಧನ ಬಿಕ್ಕಟ್ಟಿನ ಭೀತಿ ಎದುರಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.