

ವಿಜೇತ ವಿಶೇಷ ಶಾಲಾ ಗೌರವಾಧ್ಯಕ್ಷರು ಹಾಗೂ ಉದ್ಯಮಿಗಳು ಮತ್ತು ಬಂಟ್ಸ್ ಕ್ರೆಡಿಟ್ ಕೋಪರೇಟಿವ್ ಸೊಸೈಟಿ ಅಧ್ಯಕ್ಷರಾದ ಶ್ರೀ ಉದಯ್ ಶೆಟ್ಟಿ ಮುನಿಯಾಲು ಇವರ 52ನೇ ವರ್ಷದ ಹುಟ್ಟುಹಬ್ಬವನ್ನು ವಿಜೇತ ವಿಶೇಷ ಶಾಲಾ ಮಕ್ಕಳೊಂದಿಗೆ ಆಚರಿಸಲಾಯಿತು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಇನ್ನಾ, ಸಂತೋಷ್ ದೇವಾಡಿಗ, ಕಿಶೋರ್ ಬೋಳ, ಯೋಗೀಶ್ ಮೂಲ್ಯ,ಉದ್ಯಮಿಗಳಾದ ರಿತೇಶ್ ಹಾಗೂ ಉದಯ್ ಶೆಟ್ಟಿ ಅಭಿಮಾನಿ ಬಳಗದ ಪದಾಧಿಕಾರಿಗಳು ವಿಜೇತ ಶಾಲಾ ಮಕ್ಕಳಿಗೆ ವಿಶೇಷ ಭೋಜನವನ್ನು ಏರ್ಪಡಿಸುವ ಮೂಲಕ ಹುಟ್ಟು ಹಬ್ಬದ ಕಾರ್ಯಕ್ರಮವನ್ನು ಆಯೋಜಿಸಿದರು.
ಈ ಸಂದರ್ಭದಲ್ಲಿ ಶ್ರೀಮತಿ ನಮಿತಾ ಉದಯ್ ಶೆಟ್ಟಿ, , ಕಾಂಗ್ರೇಸ್ ವಕ್ತಾರರು ಪ್ರದೀಪ್ ಬೇಲಾಡಿ, ಗ್ರಾಮೀಣ ಸಮಿತಿ ಅಧ್ಯಕ್ಷರಾದ ಸುದರ್ಶನ್, ಹೆಬ್ರಿ ಬ್ಲಾಕ್ ಅಧ್ಯಕ್ಷರಾದ ಗೋಪಿನಾಥ್ ಭಟ್, ಮಹಿಳಾ ಕಾಂಗ್ರೇಸ್ ಅಧ್ಯಕ್ಷರಾದ ಭಾನು ಭಾಸ್ಕರ್, ಡೇರಲ್ ಹಾಗೂ ಉದಯ್ ಶೆಟ್ಟಿ ಮುನಿಯಾಲು ಇವರ ಅಭಿಮಾನ ಬಳಗದ ಸದಸ್ಯರು ಉಪಸ್ಥಿತರಿದ್ದರು.
