ಉದಯಗಿರಿ ಗಲಭೆ: ಪೋಲೀಸರ ಕಾರ್ಯಕ್ಷಮತೆ ಶ್ಲಾಘನೀಯ – ಡಿಕೆ ಶಿವಕುಮಾರ್

Date:

spot_img

ಮೈಸೂರು: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಉದಯಗಿರಿ ಗಲಭೆಗೆ ಸಂಬಂಧಿಸಿದಂತೆ ಪೋಲೀಸರ ಮೇಲಿನ ತಪ್ಪು ಆರೋಪವನ್ನು ಖಂಡಿಸಿದರು. “ನಾನು ಉಪಮುಖ್ಯಮಂತ್ರಿಯಾಗಿ ಹೇಳುತ್ತಿದ್ದೇನೆ,ಉದಯಗಿರಿ ಗಲಭೆಯಲ್ಲಿ ಪೊಲೀಸ್ ಅಧಿಕಾರಿಗಳು ಯಾವ ತಪ್ಪು ಕೂಡ ಮಾಡಿಲ್ಲ. ಅವರು ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಟ್ಟುಕೊಂಡಿದ್ದಾರೆ. ಎಷ್ಟೇ ಗಾಯಗೊಂಡರೂ, ಅವರು ಸಮಯ ಪ್ರಜ್ಞೆಯಿಂದ ಕಾರ್ಯನಿರ್ವಹಿಸಿದ್ದಾರೆ” ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಸಚಿವ ಕೆ.ಎಸ್. ರಾಜಣ್ಣ ಅವರು “ಪೋಲೀಸರ ಕರ್ತವ್ಯ ಲೋಪವೇ ಗಲಭೆಗೆ ಕಾರಣ” ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ , ಡಿ.ಕೆ ಶಿವಕುಮಾರ್ ಅವರು “ಯಾರು ಏನು ಹೇಳಿದರೂ ಅದು ಮುಖ್ಯವಲ್ಲ. ನಾನು ಮಾಹಿತಿ ಪಡೆದಿದ್ದೇನೆ, ಗಲಭೆಯಲ್ಲಿ ಕಲ್ಲು ಎಸೆದವರು 14-15 ವರ್ಷದ ಹುಡುಗರು. ಅವರು ಹಿರಿಯರ ಮಾತನ್ನು ಕೂಡ ಕೇಳಲಿಲ್ಲ. ಗಲಭೆಯನ್ನು ಹಿರಿಯರು ಮತ್ತು ಮುಖಂಡರು ಶಾಂತಿಯುತವಾಗಿ ನಿಯಂತ್ರಿಸಿದ್ದಾರೆ” ಎಂದು ಡಿಕೆ ಶಿವಕುಮಾರ್ ಹೇಳಿದರು.

“ಪೋಲೀಸರಿಗೆ ಭದ್ರತೆ ಇತ್ತು ಆದರೆ ಅಲ್ಲಿದ್ದ ಜನರಿಗೆ ಭದ್ರತೆ ಇರಲಿಲ್ಲ. ಪೋಲೀಸರು ಗಲಭೆ ಮಾಡಿದವರನ್ನು ಪತ್ತೆಹಚ್ಚಿ ಅವರನ್ನು ಬಂಧಿಸುವ ಕ್ರಮ ಕೈಗೊಳ್ಳುತ್ತಿದ್ದಾರೆ” ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ