ಉಡುಪಿ ನಗರಸಭೆಯಲ್ಲಿ ಬನ್ನಂಜೆ ಡಿವೈಡರ್ ತೆರವು ವಿವಾದ: ಆಡಳಿತ-ವಿರೋಧ ಪಕ್ಷಗಳ ನಡುವೆ ತಾರಕಕ್ಕೇರಿದ ವಾಗ್ವಾದ

Date:

spot_img

ಉಡುಪಿ: ನಗರದ ಬನ್ನಂಜೆ ರಾಷ್ಟ್ರೀಯ ಹೆದ್ದಾರಿ 169 (ಎ) ರಸ್ತೆಯಲ್ಲಿ ಯೂಟರ್ನ್ ವಿಸ್ತರಣೆ ಮಾಡುವ ಸಲುವಾಗಿ ಡಿವೈಡರ್ ಅನ್ನು ತೆಗೆದುಹಾಕಿರುವ ವಿಚಾರವು ಉಡುಪಿ ನಗರಸಭೆಯ ಇತ್ತೀಚಿನ ಸಾಮಾನ್ಯ ಸಭೆಯಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಯಿತು. ಈ ನಿರ್ಧಾರದ ಸುತ್ತ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿದ್ದು, ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ತೀವ್ರ ಮಾತಿನ ಚಕಮಕಿಗೆ ಎಡೆಮಾಡಿಕೊಟ್ಟಿತು.

ಸಭೆಯುದ್ದಕ್ಕೂ ಬನ್ನಂಜೆ ಡಿವೈಡರ್ ಕುರಿತು ಚರ್ಚೆ ಮುಂಚೂಣಿಯಲ್ಲಿತ್ತು. ಸದಸ್ಯ ಟಿ.ಜಿ. ಹೆಗ್ಡೆ ಈ ವಿಷಯವನ್ನು ಪ್ರಸ್ತಾಪಿಸಿ, ಡಿವೈಡರ್ ಅನ್ನು ವಿಸ್ತರಿಸಲು ಅಗೆಯುವ ಕುರಿತು ನಗರಸಭೆಯ ಮೇಲೆ ಕೇಳಿಬಂದಿರುವ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ಆಗ್ರಹಿಸಿದರು. ವೆಬ್‌ಸೈಟ್‌ಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಈ ಕುರಿತು ವ್ಯಾಪಕವಾಗಿ ಚರ್ಚೆಯಾಗುತ್ತಿದೆ ಎಂದು ಅವರು ಗಮನ ಸೆಳೆದರು. “ಈ ನಿರ್ಧಾರದಲ್ಲಿ ನಗರಸಭೆಯ ಪಾತ್ರವಿದೆಯೇ? ಜನಪ್ರತಿನಿಧಿಗಳು ಇದರಲ್ಲಿ ಭಾಗಿಯಾಗಿದ್ದಾರೆಯೇ? ಡಿವೈಡರ್ ತೆಗೆದುಹಾಕಲು ಅನುಮತಿ ನೀಡಲಾಗಿತ್ತೇ? ಮತ್ತು ಇದನ್ನು ಯಾಕೆ ಒಡೆದು ಹಾಕಲಾಯಿತು?” ಎಂದು ಹೆಗ್ಡೆ ಪ್ರಶ್ನಿಸಿದರು.

ಅವರ ಹೇಳಿಕೆಗೆ ದನಿಗೂಡಿಸಿದ ಸದಸ್ಯೆ ಸವಿತಾ ಹರೀಶ್ ರಾಮ್, ನಗರಸಭೆಯ ನಾಮನಿರ್ದೇಶಿತ ಸದಸ್ಯ ಸುರೇಶ್ ಶೆಟ್ಟಿ ಬನ್ನಂಜೆ ಅವರು ನಗರಸಭೆಯ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿದರು. ಸುರೇಶ್ ಶೆಟ್ಟಿ ಅವರು ತಕ್ಷಣವೇ ಸಭೆಗೆ ಕ್ಷಮೆಯಾಚಿಸಬೇಕು ಎಂದು ಅವರು ಒತ್ತಾಯಿಸಿದರು.

ಸದಸ್ಯೆ ಸವಿತಾ ಹರೀಶ್ ರಾಮ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಸುರೇಶ್ ಶೆಟ್ಟಿ ಬನ್ನಂಜೆ, “ನಾನು ಯಾವುದೇ ಗೋಣಿ ಚೀಲದ ಆರೋಪವನ್ನು ಮಾಡಿಲ್ಲ. ಹಾಗಾಗಿ ನಾನು ಏಕೆ ಕ್ಷಮೆ ಕೇಳಬೇಕು?” ಎಂದು ತೀಕ್ಷ್ಣವಾಗಿ ಉತ್ತರಿಸಿದರು. ಶೆಟ್ಟಿ ಅವರ ಈ ಪ್ರತಿಕ್ರಿಯೆ ಆಡಳಿತ ಪಕ್ಷದ ಸದಸ್ಯರನ್ನು ಕೆರಳಿಸಿತು. ಅವರ ನಡುವೆ ತೀವ್ರ ವಾಗ್ವಾದ ನಡೆಯಿತು. ಪರಿಸ್ಥಿತಿ ತೀವ್ರಗೊಂಡಾಗ, ಆಡಳಿತ ಪಕ್ಷದ ಸದಸ್ಯರು ಸಭಾಂಗಣದ ಬಾವಿಗೆ ಇಳಿದು, ಸುರೇಶ್ ಶೆಟ್ಟಿ ಅವರ ಕ್ಷಮೆಯಾಚನೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ, ವಿರೋಧ ಪಕ್ಷದ ನಾಯಕ ರಮೇಶ್ ಕಾಂಚನ್ ಅವರು ಸುರೇಶ್ ಶೆಟ್ಟಿ ಬನ್ನಂಜೆ ಪರವಾಗಿ ಕ್ಷಮೆಯಾಚಿಸಿದರು. ಆದರೆ, ಆಡಳಿತ ಪಕ್ಷದ ಸದಸ್ಯರು ಇದರಿಂದ ತೃಪ್ತರಾಗಲಿಲ್ಲ. ಸುರೇಶ್ ಶೆಟ್ಟಿಯೇ ಖುದ್ದಾಗಿ ಕ್ಷಮೆಯಾಚಿಸಬೇಕು ಎಂದು ಅವರು ಪಟ್ಟು ಹಿಡಿದರು. ಇದರಿಂದ ಅಸಮಾಧಾನಗೊಂಡ ವಿರೋಧ ಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದರು. ಬಳಿಕ, ಹಿರಿಯ ಸದಸ್ಯೆ ಸುಮಿತ್ರಾ ನಾಯಕ್ ಅವರನ್ನು ಕಳುಹಿಸಿ ವಿರೋಧ ಪಕ್ಷದ ಸದಸ್ಯರನ್ನು ಸಮಾಧಾನಪಡಿಸಿ, ಅವರನ್ನು ಮತ್ತೆ ಸಭೆಗೆ ಕರೆತರಲಾಯಿತು. ಈ ಘಟನೆಯು ಉಡುಪಿ ನಗರಸಭೆಯಲ್ಲಿ ಪ್ರಮುಖ ವಿಷಯಗಳ ಕುರಿತಂತೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಇರುವ ಭಿನ್ನಾಭಿಪ್ರಾಯಗಳನ್ನು ಎತ್ತಿ ತೋರಿಸಿತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.