
ಉಡುಪಿ : ಉಡುಪಿ ಬನ್ನಂಜೆ ಜಯಲಕ್ಷ್ಮೀ ಸಿಲ್ಕ್ ಬಳಿ ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುವ ರೀತಿಯಲ್ಲಿ ಖಾಸಗಿ ಬಸ್ಸು ಚಲಾಯಿಸಿದ ಚಾಲಕನನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಶ್ರೀ ದುರ್ಗಾಂಬ ಖಾಸಗಿ ಬಸ್ ಒಂದನ್ನು ದೇವರಾಜ್ ಎಂಬ ಚಾಲಕ ಕರಾವಳಿ ಬೈಪಾಸ್ ಕಡೆಯಿಂದ ಉಡುಪಿಗೆ ಅತೀವೇಗವಾಗಿ ಚಲಾಯಿಸುತ್ತಿದ್ದ. ವೇಗ ನಿಯಂತ್ರಣ ತಪ್ಪಿದ ಪರಿಣಾಮ, ಬಸ್ ರಸ್ತೆಯ ಮಧ್ಯೆ ತಿರುಗಿ ನಿಂತು ಸಂಚಾರಕ್ಕೆ ತೊಂದರೆ ಉಂಟುಮಾಡಿತು. ಬಳಿಕ ಚಾಲಕನು ತಕ್ಷಣವೇ ಬಸ್ಸುಗಳನ್ನು ನಿಷಿದ್ಧ ದಿಕ್ಕಿನಲ್ಲಿ ಚಲಾಯಿಸಿ, ಉಡುಪಿಯತ್ತ ಸಾಗಿದ್ದಾನೆ.
ಬಸ್ಸಿನಲ್ಲಿ ಇದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂಬುವುದು ಸನಾಧಾನದ ವಿಷಯ. ಈ ದೃಶ್ಯವು ಸ್ಥಳೀಯರಿಂದ ಚಿತ್ರೀಕರಿಸಲ್ಪಟ್ಟು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ವೀಡಿಯೊ ಆಧರಿಸಿ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿತ ಚಾಲಕ ದೇವರಾಜ್ನನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಪ್ರಯಾಣಿಕರ ಜೀವ ಅಪಾಯಕ್ಕೆ ಕಾರಣವಾಗಬಹುದಾದ ಬಸ್ಸನ್ನು ಕೂಡ ವಶಕ್ಕೆ ಪಡೆದುಕೊಳ್ಳಲಾಗಿದೆ.
ಪೊಲೀಸರು ಇದೀಗ ಚಾಲಕನ ಡ್ರೈವಿಂಗ್ ಇತಿಹಾಸ ಹಾಗೂ ಘಟನೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.