ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ (ರಿ) ಸಂಸ್ಥೆಯ ವಾರ್ಷಿಕ ಮಹಾಸಭೆ : ಸನ್ಮಾನ ಕಾರ್ಯಕ್ರಮ

Date:

spot_img

ಉಡುಪಿ: ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ (ರಿ) ಇದರ ವಾರ್ಷಿಕ ಮಹಾಸಭೆ ಹಾಗೂ ಸಾಧಕರಿಗೆ ಹಮ್ಮಿಕೊಳ್ಳಲಾದ ವಿಶೇಷ ಸನ್ಮಾನ ಕಾರ್ಯಕ್ರಮವು ನಗರದ ಮಥುರಾ ಕನ್ಫರ್ಟ್ಸ್ ಸಭಾಂಗಣದಲ್ಲಿ ವೈಭವದಿಂದ ಜರುಗಿತು. ಸಮಾಜದ ಪ್ರಮುಖರು ಹಾಗೂ ಸಂಘಟನೆಯ ಪದಾಧಿಕಾರಿಗಳ ಸಮ್ಮುಖದಲ್ಲಿ ಈ ವಾರ್ಷಿಕ ಸಭೆಯು ಯಶಸ್ವಿಯಾಗಿ ನಡೆಯಿತು.

ಈ ವಿಶೇಷ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಾದ ಕುಂದಾಪುರ ತಾಲೂಕಿನ ಶಂಕರ್ ರಾವ್ ಕಾಳವರ, ಕಾರ್ಕಳ ತಾಲೂಕಿನ ವಿಶ್ವನಾಥ್ ಭಟ್ ಕೌಡೂರು ಹಾಗೂ ಮೈಸೂರಿನ ‘ಕಲಿಯುಗದ ಶ್ರವಣ ಕುಮಾರ’ ಎಂದೇ ಖ್ಯಾತಿ ಪಡೆದಿರುವ ಕೃಷ್ಣ ಕುಮಾರ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ಕಾರ್ಯ ಕ್ರಮದ ಅಧ್ಯಕ್ಷತೆಯನ್ನು ಸಂದೀಪ್ ಮಂಜ ನಿರ್ವಹಿಸಿದರು. ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ ಕೃಷ್ಣಮೂರ್ತಿ ಆಚಾರ್ಯ , ರಾಜ್ಯ ಉಪಾಧ್ಯಕ್ಷರಾದ ಕೃಷ್ಣಾನಂದ ಛಾತ್ರ ಉಪಸ್ಥಿತರಿದ್ದರು. ಗೌರವಾಧ್ಯಕ್ಷರಾದ ವೈ ಸುಧಾಕರ್ ಭಟ್ ಕಾರ್ಕಳ ಸ್ವಾಗತಿಸಿದರು,ಕಾರ್ಯದರ್ಶಿಗಳಾದ ಗಣೇಶ್ ರಾವ್ ಕುಂಭಾಸಿ ವರದಿ ವಾಚನ ಮಾಡಿದರು ,ಮಾಧವ ಭಟ್ ಕಾರ್ಕಳ ಆಯವ್ಯಯ ಮಂಡಿಸಿದರು.

ಸಭೆಯಲ್ಲಿ ಮಹಿಳಾ ಅಧ್ಯಕ್ಷೆ ಕಾಂತಿ ರಾವ್,ಯುವ ವಿಪ್ರವೇದಿಕೆಯ ಅಧ್ಯಕ್ಷೆ ಪವಿತ್ರ ಅಡಿಗ, ತಾಲೂಕಿನ ಅಧ್ಯಕ್ಷರುಗಳು ಉಪಸ್ಥಿತರಿದ್ದರು. ಜಯರಾಮ್ ಆಚಾರ್ಯ ಅವರು ಕಾರ್ಯಕ್ರಮ ನಿರೂಪಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.