spot_img

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮ

Date:

ಉಡುಪಿ : ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮವು ಅಧ್ಯಕ್ಷರಾದ ಶ್ರೀಯುತ ಎಮ್ ಕೆ ದಿನೇಶ್ ಮೂಡಬಿದ್ರಿಯವರ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸುದರ ಮುಖೇನ ಉದ್ಯಾವರ ನಿತ್ಯಾನಂದ ಸಭಾಂಗಣದಲ್ಲಿ ನಡೆಯಿತು. ಸಂಘದ ಕಾರ್ಯದರ್ಶಿಯವರಾದ ಶ್ರೀಯುತ ಗಿರೀಶ್ ಮಲ್ಪೆಯವರು ಸ್ವಾಗತಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಮುಖ್ಯ ಅತಿಥಿ ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ ಗೌರವಾಧ್ಯಕ್ಷರಾದ ಶ್ರೀಯುತ ದಾಮೋದರ ಪೈ ಕುಂದಾಪುರರವರು ಮಹಾಸಭೆಯ ಪ್ರಾಮುಖ್ಯತೆಯ ಹಾಗೂ ಸಂಘಟನೆಯ ಬಗ್ಗೆ ವಿವರಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿಯವರಾದ ಶ್ರೀಯುತ ಗಿರೀಶ್ ಮೖಂದನ್ ಮಲ್ಪೆ ವರದಿವಾಚನ ಮಾಡಿದರು.ಸಂಘಟನಾ ಕಾರ್ಯದರ್ಶಿಯವರಾದ ಶ್ರೀಯುತ ಸುನೀಲ್ ಕುಮಾರ್ ಬ್ರಹ್ಮಾವರರವರು ಲೆಕ್ಕಪತ್ರ ಮಂಡನೆ ಮಾಡಿದರು.

ಭಾರತಮಾತೆಗೆ ಪುಷ್ಪಾರ್ಚನೆ ಮಾಡುತ್ತಾ, ಸಂಘದ ಸದಸ್ಯರ ಜೊತೆಗೆ ಸಹಮಾಲಕಿಯರಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀಮತಿ ಸುಜಾತಾ ಹರೀಶ್ ಹೆಬ್ರಿ, ಶ್ರೀಮತಿ ಶುಭ ದಾಮೋದರ ಪೈ ಕುಂದಾಪುರ, ಶ್ರೀಮತಿ ವೀಣಾ ಸಂತೋಷ್ ಮೂಡಬಿದ್ರಿ, ಶ್ರೀಮತಿ ಅನಿತಾ ಗಿರೀಶ್ ಮಲ್ಪೆ ಇವರನ್ನು ಸನ್ಮಾನಿಸಲಾಯಿತು. ಸಂಘದ ಯುನಿಟ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿಸೖನರ್ ಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಶ್ರೀಯುತ ಸಂಜಯ್ ಕುಂದಾಪುರ, ಶ್ರೀಯುತ ರಾಕೇಶ್ ಸುವರ್ಣ ಬೊಳ್ಜೆ, ಶ್ರೀಯುತ ಶಶಿಕಾಂತ ಶೆಟ್ಟಿ ಕಡೆಕಾರ್ ಇವರನ್ನು ಗುರುತಿಸಿ ಸನ್ಮಾನಿಸಲಾಯಿತು.

ಈ ಸಂಧರ್ಭದಲ್ಲಿ ಹೊಸ ಸದಸ್ಯರನ್ನು ಸಂಘಕ್ಕೆ ಸೇರ್ಪಡೆಗೊಳಿಸಲಾಯಿತು.ಅನಾರೋಗ್ಯಕ್ಕೆ ಓಳಪಟ್ಟ ಶ್ರೀಯುತ ರಾಘವೇಂದ್ರ ಉಡುಪಿಯವರಿಗೆ ರೂ. 25000/.ನೀಡಲಾಯಿತು.

ಅತಿಥಿಗಳಾಗಿ ಸಂಘದ ಮಾಜಿ ಅಧ್ಯಕ್ಷರಾದ ಶ್ರೀಯುತ ಶ್ರೀನಿವಾಸ ಕುಂದರ್ ಕೋಟೇಶ್ವರ, ಉಡುಪಿ ಜಿಲ್ಲಾ ಸೖನೇಜ್ ಅಸೋಸಿಯೇಶನ್ ರಿ. ಉಡುಪಿ ಇದರ ಅಧ್ಯಕ್ಷರಾದ ಶ್ರೀಯುತ ರಾಜೇಶ್ ಕುಮಾರ್ ಅಂಬಾಡಿ ಉಪಸ್ಥಿತರಿದ್ದರು. 2025-27 ನೇ ಸಾಲಿನ ಅಧ್ಯಕ್ಷರಾಗಿ ಶ್ರೀಯುತ ಸಂತೋಷ್ ಕುಮಾರ್ ಮೂಡಬಿದ್ರಿ ನೇತ್ರತ್ವದಲ್ಲಿ 15 ಸದಸ್ಯರ ತಂಡವನ್ನು ರಚಿಸಲಾಯಿತು.

ಶ್ರೀಯುತ ಪ್ರಸನ್ನ ಅಜೆಕಾರ್ ಕಾರ್ಯಕ್ರಮ ನಿರೂಪಿಸಿದರು, ಶ್ರೀಯುತ ಗಿರೀಶ್ ಧನ್ಯವಾದವನ್ನು ತಿಳಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.