spot_img

ಉಡುಪಿ ಜಿಲ್ಲೆಗೆ ಮೊದಲ ವಿದ್ಯುತ್ ಚಿತಾಗಾರ: ಕೋಟೇಶ್ವರ ಹಿಂದೂ ರುದ್ರಭೂಮಿಯಲ್ಲಿ ನೂತನ ಸೌಲಭ್ಯ ಉದ್ಘಾಟನೆ

Date:

spot_img

ಕುಂದಾಪುರ: ಉಡುಪಿ ಜಿಲ್ಲೆಯ ಮೊದಲ ವಿದ್ಯುತ್ ಚಿತಾಗಾರವು ಕುಂದಾಪುರ ತಾಲೂಕಿನ ಕೋಟೇಶ್ವರದ ಹಿಂದೂ ರುದ್ರಭೂಮಿಯಲ್ಲಿ ನಿರ್ಮಾಣಗೊಂಡಿದ್ದು, ಶನಿವಾರ ಅದ್ದೂರಿಯಾಗಿ ಲೋಕಾರ್ಪಣೆಗೊಂಡಿತು. ಸುಮಾರು ₹1 ಕೋಟಿ ವೆಚ್ಚದಲ್ಲಿ ನಿರ್ಮಿತ ಈ ಸೌಲಭ್ಯ, ಮಳೆಗಾಲದಲ್ಲಿ ಅಥವಾ ಕಟ್ಟಿಗೆ ಕೊರತೆಯಿಂದ ಶವದ ದಹನದಲ್ಲಿ ಉಂಟಾಗುವ ಅಡಚಣೆಗಳಿಗೆ ಪರಿಹಾರವಾಗಲಿದೆ.

ಈ ನೂತನ ಸೌಲಭ್ಯವನ್ನು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಉದ್ಘಾಟಿಸಿದರು. ಅವರು ಮಾತನಾಡುತ್ತಾ, “ಇಂತಹ ಸದುದ್ದೇಶದ ಯೋಜನೆಗಳಿಗೆ ಅನುದಾನ ನೀಡಿದಾಗ ಜನಪ್ರತಿನಿಧಿಗಳಾಗಿ ನಮಗೆ ತೃಪ್ತಿ ಹಾಗೂ ಧನ್ಯತೆ ಎನ್ನಿಸುತ್ತದೆ” ಎಂದು ಹೇಳಿದರು.

ಈ ಯೋಜನೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಉಡುಪಿ ಜಿಲ್ಲಾ ಪಂಚಾಯತ್, ಕುಂದಾಪುರ ತಾಲೂಕು ಪಂಚಾಯತ್, ಕೋಟೇಶ್ವರ ಗ್ರಾಮ ಪಂಚಾಯತ್, ಶಾಸಕರ ಪ್ರದೇಶಾಭಿವೃದ್ಧಿ ನಿಧಿ, ಧಾರ್ಮಿಕ ದತ್ತಿ ಇಲಾಖೆ ಮತ್ತು ಸ್ಥಳೀಯ ಸಂಸ್ಥೆಗಳ ಸಹಕಾರದಿಂದ ರೂಪುಗೊಂಡಿದೆ. ಸುಮಾರು ₹96 ಲಕ್ಷ ವೆಚ್ಚದಲ್ಲಿ ಚಿತಾಗಾರ ನಿರ್ಮಾಣಗೊಂಡಿದ್ದು, ನವೀಕೃತ ತಾಂತ್ರಿಕ ವ್ಯವಸ್ಥೆಗಳೊಂದಿಗೆ ಸುಸಜ್ಜಿತವಾಗಿದೆ.

100 ವರ್ಷಗಳ ಇತಿಹಾಸಕ್ಕೆ ಹೊಸ ತಿರುವು
ಕೋಟೇಶ್ವರ ಹಿಂದೂ ರುದ್ರಭೂಮಿಯು ಕಳೆದ ನೂರಾರು ವರ್ಷಗಳಿಂದ ಶವ ಸಂಸ್ಕಾರ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತಿದ್ದು, ಈಗ ಆಧುನಿಕ ಸೌಲಭ್ಯದಿಂದ ಹೊಸ ರೂಪ ಪಡೆದುಕೊಂಡಿದೆ. ಹಿರಿಯ ರಾಜಕೀಯ ನಾಯಕ ಪ್ರತಾಪಚಂದ್ರ ಶೆಟ್ಟಿ ಅವರ ಮುಂದಾಳತ್ವದಲ್ಲಿ ಈ ಯೋಜನೆ ಯಥಾರ್ಥವಾಗಿದ್ದು, ಸಾರ್ವಜನಿಕರಿಗೆ ಉಪಯುಕ್ತವಾಗಲಿದೆ.

ಬಾಲ್ಯದಿಂದ ಬಂಧವಿರುವ ಸ್ಥಳಕ್ಕೆ ಕೊಡುಗೆ ನೀಡಿದ ಸಂತೋಷ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅವರು, “ಕೋಟೇಶ್ವರ ನನ್ನ ಬಾಲ್ಯದ ನೆನೆಪುಗಳಿಗೆ ನಿಕಟವಾಗಿರುವ ಸ್ಥಳ. ಇಲ್ಲಿ ಆಧುನಿಕ ಚಿತಾಗಾರ ಸ್ಥಾಪನೆಯಾದದ್ದು ಸಂತೋಷದ ಸಂಗತಿ. “ಈ ಚಿತಾಗಾರದ ಉಪಯೋಗ ಜಿಲ್ಲೆಯ ಇತರ ಭಾಗಗಳಾದ ಬೈಂದೂರು, ಬ್ರಹ್ಮಾವರ ಪ್ರದೇಶಗಳಲ್ಲೂ ಹೆಚ್ಚಾಗಬೇಕು. ಜನರಲ್ಲಿ ಅರಿವು ಮೂಡಿಸಿದಾಗ ಮಾತ್ರ ಸದುಪಯೋಗ ಸಾಧ್ಯ” ಎಂದು ಅಭಿಪ್ರಾಯಪಟ್ಟರು.

ಸನ್ಮಾನ, ಸಹಭಾಗಿತ್ವ ಮತ್ತು ಉಪಸ್ಥಿತಿ
ಕಾರ್ಯಕ್ರಮದ ಸಂದರ್ಭದಲ್ಲಿ ಯೋಜನೆಗೆ ಶ್ರಮಿಸಿದ ಗಣೇಶ ಎಂ. ಕಾಮತ್, ರಂಗನಾಥ ಭಟ್, ಸುರೇಂದ್ರ ಮಾರ್ಕೋಡು, ಕೆದೂರು ಸದಾನಂದ ಶೆಟ್ಟಿ, ಅಭಿಯಂತರ ಮಹೇಶ್, ತಾಂತ್ರಿಕ ನಿರ್ವಹಣೆಗಾರ ನಾಗರಾಜ್ ಬೆಂಗಳೂರು, ವಿಠಲದಾಸ ಭಟ್, ರಾಜಶೇಖರ ಶೆಟ್ಟಿ, ಕೆ.ಜಿ.ವೈದ್ಯ, ಗುರುರಾಜ್ ರಾವ್ ಮತ್ತು ರತ್ನಾಕರ ಕಾಮತ್ ಅವರನ್ನು ಸನ್ಮಾನಿಸಲಾಯಿತು.

ಈ ವೇಳೆ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ, ಕೋಟೇಶ್ವರ ಗ್ರಾಪಂ ಅಧ್ಯಕ್ಷೆ ರಾಗಿಣಿ ದೇವಾಡಿಗ, ಉಪಾಧ್ಯಕ್ಷೆ ಆಶಾ, ಬೀಜಾಡಿ ಗ್ರಾಪಂ ಅಧ್ಯಕ್ಷ ಪ್ರಕಾಶ ಪೂಜಾರಿ, ಗೋಪಾಡಿ ಗ್ರಾಪಂ ಅಧ್ಯಕ್ಷ ಸುರೇಶ ಶೆಟ್ಟಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಜಯರತ್ನ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ದಿನೇಶ ಹೆಗ್ಡೆ ಮೊಳಹಳ್ಳಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ ಕ್ರಾಸ್ಟೊ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪಿಡಿಒ ದಿನೇಶ್ ನಾಯ್ಕ್ ಸ್ವಾಗತಿಸಿದರು, ರಾಜಶೇಖರ ಶೆಟ್ಟಿ ಪ್ರಾಸ್ತಾವಿಕ ಭಾಷಣ ಮಾಡಿದರು. ಪತ್ರಕರ್ತ ಚಂದ್ರಶೇಖರ ಬೀಜಾಡಿ ನಿರ್ವಹಣೆ ಹಮ್ಮಿಕೊಂಡಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಇನ್ನೋನೆಕ್ಸ್ಟ್ ಏರಿಯನ್ ಭಾರತ್ ಅಸ್ಟ್ರಾನೋಮಿ ಎಕ್ಸ್‌ಪೋ 1.0ಬಾಹ್ಯಾಕಾಶದ ಕೌತುಕ ಕಂಡು ಬೆರಗಾದ ವಿದ್ಯಾರ್ಥಿಗಳು

ಇನ್ನೋನೆಕ್ಸ್ಟ್ ಮೈಂಡ್ ಪ್ರೈವೇಟ್ ಲಿಮಿಟೆಡ್ (ಏರಿಯನ್ ಭಾರತ್) ಆಶ್ರಯದಲ್ಲಿ ಗುರುವಾರ ನಡೆದ ಆಸ್ಟ್ರಾನೊಮಿ ಎಕ್ಸ್‌ಪೋ 1.0ರ ಆವೃತ್ತಿ ನಗರದ ಮಂತ್ರಿ ಮಾಲ್‌ನ ಐನಾಕ್ಸ್‌ ಚಿತ್ರಮಂದಿರಲ್ಲಿ ಗುರುವಾರ ಉದ್ಘಾಟನೆಗೊಂಡಿತು.

ರೋಬೋಟ್ ‘ಶುವಾಂಗ್ ಶುವಾಂಗ್’ ಪದವಿ ಪಡೆದ ವಿಚಿತ್ರ ಘಟನೆ: ಚೀನಾದಲ್ಲಿ ತಾಂತ್ರಿಕ ಕ್ರಾಂತಿ!

ಚೀನಾದ ಫುಜಿಯನ್ ಪ್ರಾಂತ್ಯದ ಶುವಾನ್ಶಿ ಹೈಸ್ಕೂಲ್‌ನಲ್ಲಿ ನಡೆದ ಪದವಿ ಪ್ರದಾನ ಸಮಾರಂಭವೊಂದು ವಿಶಿಷ್ಟ ಘಟನೆಗೆ ಸಾಕ್ಷಿಯಾಗಿದೆ. "ಶುವಾಂಗ್ ಶುವಾಂಗ್" ಹೆಸರಿನ ಮಾನವಾಕಾರದ ರೋಬೋಟ್ ಒಂದು ಸಮಾರಂಭದಲ್ಲಿ ಭಾಗವಹಿಸಿ, ವೇದಿಕೆಗೆ ನಡೆದು, ಶಿಕ್ಷಕರಿಂದ ಕೈಚಲಾವಣೆ ಮೂಲಕ ಪ್ರಮಾಣಪತ್ರ ಸ್ವೀಕರಿಸಿತು.

ಹಲಸಿನ ಹಣ್ಣು ತಿಂದು ಬ್ರೀಥಲೈಸರ್‌ನಲ್ಲಿ ಫೇಲ್: ಕೇರಳದಲ್ಲಿ ಅಚ್ಚರಿಯ ಘಟನೆ!

ಮದ್ಯಪಾನ ಮಾಡದಿದ್ದರೂ, ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಮೂವರು ಬಸ್ ಚಾಲಕರು ಬ್ರೀಥಲೈಸರ್ ಪರೀಕ್ಷೆಯಲ್ಲಿ ವಿಫಲರಾಗಿ, ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಾಗಿರುವ ವಿಚಿತ್ರ ಘಟನೆ ವರದಿಯಾಗಿದೆ.

ದಿನ ವಿಶೇಷ – ವಿಶ್ವ ಐವಿಎಫ್ ದಿನ

ಈ ದಿನವು ಸಂತಾನೋತ್ಪತ್ತಿ ವಿಜ್ಞಾನದಲ್ಲಿನ ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ ಮತ್ತು ಬಂಜೆತನದಿಂದ ಬಳಲುತ್ತಿರುವ ಅಸಂಖ್ಯಾತ ದಂಪತಿಗಳಿಗೆ ಆಶಯದ ದಾರಿಯನ್ನು ತೆರೆದ ಐವಿಎಫ್ ತಂತ್ರಜ್ಞಾನದ ಪ್ರಗತಿಯನ್ನು ಸ್ಮರಿಸುತ್ತದೆ