ಉಡುಪಿಯಲ್ಲಿ ಪುಷ್ಪ ಲೋಕದ ಅನಾವರಣ: ಈ ಬಾರಿ ಸಾಲುಮರದ ತಿಮ್ಮಕ್ಕನ ಜೀವನ ಸಾಧನೆಯೇ ಮುಖ್ಯ ಆಕರ್ಷಣೆ!

Date:

spot_img

ಉಡುಪಿ: ಜಿಲ್ಲೆಯ ಪ್ರಕೃತಿ ಪ್ರೇಮಿಗಳು ಮತ್ತು ಸಾರ್ವಜನಿಕರಿಗಾಗಿ ಗಣರಾಜ್ಯೋತ್ಸವದ ಸಂಭ್ರಮದ ಅಂಗವಾಗಿ ವಿಶೇಷ ‘ಫಲಪುಷ್ಪ ಪ್ರದರ್ಶನ-2026’ ಆಯೋಜನೆಗೊಂಡಿದೆ. ಈ ಬಾರಿಯ ಪ್ರದರ್ಶನವು ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಅವರ ಜೀವನಗಾಥೆ ಮತ್ತು ಪರಿಸರ ಕಾಳಜಿಯ ಪರಿಕಲ್ಪನೆಯನ್ನು ಆಧರಿಸಿರುವುದು ವಿಶೇಷವಾಗಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಜಂಟಿ ಆಶ್ರಯದಲ್ಲಿ ಜನವರಿ 26 ರಿಂದ 28 ರವರೆಗೆ ನಗರದ ದೊಡ್ಡಣಗುಡ್ಡೆಯ ತೋಟಗಾರಿಕೆ ಇಲಾಖೆಯ ಪುಷ್ಪ ಹರಾಜು ಕೇಂದ್ರದ ಆವರಣದಲ್ಲಿ ಈ ಬೃಹತ್ ಪ್ರದರ್ಶನ ನಡೆಯಲಿದೆ. ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜನವರಿ 26 ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರು ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ. ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಮೇಳದಲ್ಲಿ ಪ್ರಮುಖವಾಗಿ 26 ವಿವಿಧ ತಳಿಗಳ ಸುಮಾರು 7000 ಕ್ಕೂ ಹೆಚ್ಚು ಪುಷ್ಪ ಗಿಡಗಳನ್ನು ಪ್ರದರ್ಶಿಸಲಾಗುತ್ತಿದೆ. ಪೆಟೂನಿಯ, ಸೆಲೋಷಿಯಾ, ಸೇವಂತಿಗೆ, ಗುಲಾಬಿ, ಮತ್ತು ಚೈನಾ ಅಸ್ಟರ್ ಸೇರಿದಂತೆ ಮನಮೋಹಕ ಹೂವುಗಳ ವಿನ್ಯಾಸ ಇಲ್ಲಿರಲಿದೆ. ಸಾಲುಮರದ ತಿಮ್ಮಕ್ಕ ಅವರ ಸಾಧನೆಯನ್ನು ಬಿಂಬಿಸುವ ಹೂವಿನ ಕಲಾಕೃತಿಗಳು, ತೆಂಗಿನ ಗರಿಯ ಜಾನೂರ್ ಆರ್ಟ್, ಮತ್ತು ಮಕ್ಕಳಿಗಾಗಿ ಡೊರೆಮಾನ್ ಹಾಗೂ ಮಶ್ರೂಮ್ ಮಾದರಿಗಳು ಆಕರ್ಷಣೀಯವಾಗಿರಲಿವೆ. ಕೃಷಿ ಆಸಕ್ತರಿಗಾಗಿ ಮೈಕ್ರೋ-ಗ್ರೀನ್ಸ್ ಪ್ರಾತ್ಯಕ್ಷತೆ ಮತ್ತು ಕೃಷಿ ಯಂತ್ರೋಪಕರಣಗಳ ಮಳಿಗೆಗಳೂ ಇರಲಿವೆ. ಸಾರ್ವಜನಿಕರಿಗೆ ಪ್ರತಿದಿನ ಬೆಳಿಗ್ಗೆ 10 ರಿಂದ ರಾತ್ರಿ 8 ಗಂಟೆಯವರೆಗೆ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.