spot_img

ಉಡುಪಿ: ಗ್ರಾ.ಪಂ. ಉಪಚುನಾವಣೆ ಮತ ಎಣಿಕೆಗೆ ಸನ್ನದ್ಧತೆ : ನಿಷೇಧಾಜ್ಞೆ ಜಾರಿ !

Date:

ಉಡುಪಿ, ಮೇ 27 – ಉಡುಪಿ ಹಾಗೂ ಕಾಪು ತಾಲೂಕುಗಳಲ್ಲಿ ಗ್ರಾಮ ಪಂಚಾಯತ್ ಉಪಚುನಾವಣೆಗೆ ಸಂಬಂಧಿಸಿದಂತೆ ಮೇ 28ರಂದು ನಡೆಯಲಿರುವ ಮತ ಎಣಿಕೆ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯಾಗಿರುವ ಡಾ. ಕೆ. ವಿದ್ಯಾಕುಮಾರಿ ಅವರು ನಿಷೇಧಾಜ್ಞೆ ವಿಧಿಸಿರುವುದಾಗಿ ಪ್ರಕಟಣೆ ತಿಳಿಸಿದೆ.

ಮತ ಎಣಿಕೆ ನಡೆಯಲಿರುವ ಉಡುಪಿ ಹಾಗೂ ಕಾಪು ತಾಲೂಕು ಕಚೇರಿಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಮೇ 28ರ ಬೆಳಗ್ಗೆ 5 ಗಂಟೆಯಿಂದ ಮತ ಎಣಿಕೆ ಮುಗಿಯುವವರೆಗೆ ನಿಷೇಧಾಜ್ಞೆ ಜಾರಿಗೆ ಬರಲಿದೆ.

ನಿಷೇಧದ ಪ್ರಮುಖ ಅಂಶಗಳು:

  • ಸಾರ್ವಜನಿಕ ಸ್ಥಳಗಳಲ್ಲಿ 5ಕ್ಕೂ ಹೆಚ್ಚು ಮಂದಿ ಗುಂಪು ಸೇರುವುದು, ಮೆರವಣಿಗೆ, ಸಭೆ, ಶೋಷಣೆ ಕೂಗುವುದು ನಿಷಿದ್ಧ.
  • ಮತ ಎಣಿಕೆ ಕೇಂದ್ರದ 100 ಮೀಟರ್ ಒಳಗೆ ಮೊಬೈಲ್, ಕಾರ್ಡ್ಲೆಸ್, ಇತರ ಎಲೆಕ್ಟ್ರಾನಿಕ್ ಸಾಧನಗಳ ನಿಷೇಧ.
  • ಧ್ವನಿವರ್ಧಕ ಬಳಕೆ, ಪಟಾಕಿ ಸಿಡಿಸುವುದು, ವಿಜಯೋತ್ಸವ ಅಥವಾ ಕರಾಳೋತ್ಸವ ಆಚರಣೆ ನಿಷೇಧ.
  • ಮಾರಕಾಸ್ತ್ರ, ಸ್ಫೋಟಕ ವಸ್ತುಗಳು, ಆಯುಧಗಳನ್ನು ಬಳಸುವುದು ನಿಷಿದ್ಧ – ಇದು ಕಂಡುಬಂದರೆ ಪೊಲೀಸರ ವಶಕ್ಕೆ.
  • ಉಗ್ರ ಭಾಷಣ, ತೇಜೋವಧೆ ಮಾಡುವ ಚಿತ್ರ-ಪ್ರತಿಕೃತಿಗಳ ಪ್ರದರ್ಶನ, ಶಾಂತಿಗೆ ಭಂಗ ತರಬಹುದಾದ ಯಾವುದೇ ಕೃತ್ಯಗಳಿಗೆ ಕಟ್ಟೆಚ್ಚರ.

ಈ ನಿಷೇಧಾಜ್ಞೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35 ರ ಪ್ರಕಾರ ಜಾರಿಗೊಳಿಸಲಾಗಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಸ್ಪಷ್ಟಪಡಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕದಲ್ಲಿ ‘ಥಗ್ ಲೈಫ್’ ಬಿಡುಗಡೆಗೆ ತಡೆ: ಕಮಲ್ ಹಾಸನ್‌ಗೆ ಹೈಕೋರ್ಟ್ ಆದೇಶ

ನಟ ಕಮಲ್ ಹಾಸನ್ ಅಭಿನಯದ 'ಥಗ್ ಲೈಫ್' ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡದಂತೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದ್ದು, ವಿವಾದ ಇತ್ಯರ್ಥವಾಗುವವರೆಗೆ ಸಿನಿಮಾ ಬಿಡುಗಡೆಗೆ ಅವಕಾಶವಿಲ್ಲ ಎಂದು ಆದೇಶಿಸಿದೆ.

ಅತ್ರಾಡಿ ರಿಕ್ಷಾ ಚಾಲಕನಿಗೆ ಹಲ್ಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಶರತ್ತುಬದ್ಧ ಜಾಮೀನು

ಅತ್ರಾಡಿ ಶೇಡಿಗುಡ್ಡೆ ಬಳಿ ರಿಕ್ಷಾ ಚಾಲಕನಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಕೊರೊನಾ ಸೋಂಕಿನಿಂದ ಪೀಟರ್ ಮಥಾಯಸ್ ನಿಧನ: ತಹಶೀಲ್ದಾರ್ ಭೇಟಿನೀಡಿ ಸಾಂತ್ವನ

ಕಾಪು ತಾಲೂಕಿನ ಬೆಳ್ಳೆ ಗ್ರಾಮದ ನಿವಾಸಿ ಪೀಟರ್ ಮಥಾಯಸ್ (65) ಅವರು ಕೋವಿಡ್-19 ಪಾಸಿಟಿವ್ ದೃಢಪಟ್ಟ ಬಳಿಕ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಜೂನ್ 2 ರಂದು ನಿಧನರಾದರು.

ಯೂರಿಕ್ ಆಸಿಡ್ ನಿಯಂತ್ರಣಕ್ಕೆ ಹಸಿ ಪಪ್ಪಾಯಿ – ನೈಸರ್ಗಿಕ ಮನೆಮದ್ದು!

ಅಧಿಕ ಯೂರಿಕ್ ಆಮ್ಲ ಸಮಸ್ಯೆ ಇತ್ತೀಚೆಗೆ ಸಾಮಾನ್ಯವಾಗಿದ್ದು, ಇದು ತಡವಾಗಿ ಗೋಚರಿಸುವ ಸಮಸ್ಯೆಯಾಗಿರುವುದರಿಂದ ಹೆಚ್ಚು ಮಂದಿಗೆ ಆರೋಗ್ಯದಲ್ಲಿ ಕಿರಿಕಿರಿ ಉಂಟುಮಾಡುತ್ತಿದೆ. ಈಗ, ಈ ಸಮಸ್ಯೆಗೆ ಹಸಿ ಪಪ್ಪಾಯಿ ಉತ್ತಮ ಮನೆಮದ್ದಾಗಿದೆ.