spot_img

ಉಡುಪಿ: ಕೆಳಪರ್ಕಳ ರಸ್ತೆ ದುರಸ್ತಿ ಕಾರ್ಯ ಸೆ. 15ರಿಂದ ಆರಂಭ: ಪರ್ಯಾಯ ಸಂಚಾರ ವ್ಯವಸ್ಥೆ

Date:

ಉಡುಪಿ: ಮಣಿಪಾಲ-ಪರ್ಕಳ ನಡುವಿನ ರಾಷ್ಟ್ರೀಯ ಹೆದ್ದಾರಿ 169ಎ ಯಲ್ಲಿ ಸಂಪೂರ್ಣ ಹದಗೆಟ್ಟಿರುವ ಕೆಳಪರ್ಕಳ ರಸ್ತೆಯ ಡಾಮರು ಕಾಮಗಾರಿಯು ಸೆಪ್ಟೆಂಬರ್ 15, ಸೋಮವಾರದಿಂದಲೇ ಆರಂಭವಾಗಲಿದೆ. ಈ ಕುರಿತು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಶಾಸಕ ಯಶ್‌ಪಾಲ್ ಸುವರ್ಣ ಅವರು ರಾ.ಹೆದ್ದಾರಿ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿದ್ದಾರೆ.

ಶುಕ್ರವಾರ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಂಸದರು, ಕಾಮಗಾರಿಯನ್ನು ಒಂದು ವಾರದೊಳಗೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು. ವಿಶೇಷ ಅನುದಾನದೊಂದಿಗೆ ಕೈಗೊಂಡಿರುವ ಈ ಕಾಮಗಾರಿಯು ವೈಜ್ಞಾನಿಕ ರೀತಿಯಲ್ಲಿ ನಡೆಯಲಿದೆ ಎಂದು ಶಾಸಕ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ.

ರಸ್ತೆ ಕಾಮಗಾರಿ ನಡೆಯುವ ಸಂದರ್ಭದಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗುವುದು ಎಂದು ತಿಳಿಸಲಾಗಿದ್ದು, ಈ ಕುರಿತು ಪೊಲೀಸ್ ಇಲಾಖೆ ಪ್ರತ್ಯೇಕ ಅಧಿಸೂಚನೆ ಹೊರಡಿಸಲಿದೆ. ರಸ್ತೆ ದುರಸ್ತಿ ಕಾರ್ಯಕ್ಕೆ ಸಾರ್ವಜನಿಕರು ಸಹಕರಿಸುವಂತೆ ಜನಪ್ರತಿನಿಧಿಗಳು ಮನವಿ ಮಾಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಾಗಲಕಾಯಿ ಬೀಜ: ಔಷಧೀಯ ಗುಣಗಳಿಂದ ಕೂಡಿದ ಸೂಪರ್‌ಫುಡ್‌; ಆದರೆ ಅತಿಯಾದರೆ ಅಮೃತವೂ ವಿಷ

ಹಾಗಲಕಾಯಿ - ಹಾಗಲಕಾಯಿ ಕೇವಲ ಮಧುಮೇಹಿಗಳಿಗೆ ಮಾತ್ರವಲ್ಲ, ಅದರ ಬೀಜಗಳಲ್ಲಿಯೂ ಹಲವಾರು...

ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಆಸ್ತಿ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕಾರ್ಕಳದ ಕಾಂಗ್ರೆಸ್ ಕಚೇರಿಗೆ ಶುಕ್ರವಾರ ಭೇಟಿ ನೀಡಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಶತಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದಿನ ವಿಶೇಷ – ಹಿಂದಿ ದಿವಸ

ಭಾರತದ ಸಾಂಸ್ಕೃತಿಕ ಮತ್ತು ಭಾಷಿಕ ವೈವಿಧ್ಯತೆಯ ಏಕತೆಯ ಪ್ರತೀಕವಾಗಿ ಹಿಂದಿ ಭಾಷೆಗೆ ಗೌರವ ಸಲ್ಲಿಸುವ ದಿನವೇ ಹಿಂದಿ ದಿವಸ.

ಕಲ್ಯಾಣ ಕರ್ನಾಟಕದ ಪಿಯುಸಿ ಫಲಿತಾಂಶ ಸುಧಾರಣೆಗಾಗಿ ನಾವು ಕಂಕಣ ಬದ್ಧರಾಗಿ ಕೆಲಸ ಮಾಡೋಣ : ಶಶೀಲ್ ಜಿ ನಮೋಶಿ

ಸರಳತೆ ಕಾರಣದಿಂದಲೇ ಶಿಕ್ಷಕರು ಸಮಾಜದಲ್ಲಿ ಗೌರವದ ಸ್ಥಾನ ಪಡೆದುಕೊಂಡಿದ್ದಾರೆ. ಶಿಕ್ಷಕರ ಪರಿಶ್ರಮ ವಿದ್ಯಾರ್ಥಿಗಳ ಏಳಿಗೆಯಲ್ಲಿ ಅಡಗಿದೆ ಎಂದು ವಿಧಾನ ಪರಿಷತ್ ಸದಸ್ಯರು ಹಾಗೂ ಎನ್ ಪಿ ಎಸ್ ಸಂಸ್ಥೆಯ ಅಧ್ಯಕ್ಷರಾದ ಶಶೀಲ್ ಜಿ ನಮೋಶಿ ಹೇಳಿದರು.