spot_img

ಉಡುಪಿ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ – ಸ್ಥಳದಲ್ಲೇ ದುರ್ಮರಣ!

Date:

spot_img

ಉಡುಪಿ, ಫೆಬ್ರವರಿ.22: ಪರ್ಕಳ ಪೇಟೆಯ ಬಡಗುಬೆಟ್ಟು ತಿರುವಿನಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದ್ದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಶೇಡಿಗುಡ್ಡೆ ನಿವಾಸಿ ರಮೇಶ್ ನಾಯಕ್ (55) ಎಂದು ಗುರುತಿಸಲಾಗಿದೆ.


ಮಣಿಪಾಲದ ಜಿಸಿಸಿನಲ್ಲಿ ಕೆಲಸ ಮಾಡುತ್ತಿದ್ದ ರಮೇಶ್ ನಾಯಕ್, ಕಾರು ಇಳಿದು ಬೀಡ ತೆಗೆದುಕೊಳ್ಳಲು ಪಕ್ಕದ ಅಂಗಡಿಗೆ ಹೋಗುವಾಗ ಅಪಘಾತ ಸಂಭವಿಸಿದೆ.ಅತಿ ವೇಗದಲ್ಲಿದ್ದ ಕಾರು ಡಿಕ್ಕಿಯಾದ ರಭಸಕ್ಕೆ ಅವರು ಸುಮಾರು ದೂರ ಎಳೆದೊಯ್ಯಲ್ಪಟ್ಟು, ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಮಾರ್ಗದಲ್ಲಿ ನಿರಂತರ ಅಪಘಾತಗಳು ನಡೆಯುತ್ತಿದ್ದು, ಸೂಕ್ತ ಭದ್ರತಾ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

2025-27ರ ಅವಧಿಯ ಕಾರ್ಕಳ ತಾಲೂಕು ಬ್ರಾಹ್ಮಣ ಸಂಘದ ನೂತನ ಕಾರ್ಯಕಾರಿ ಸಮಿತಿಯ ರಚನೆ ಮತ್ತು ಅಧಿಕಾರ ಹಸ್ತಾಂತರ

2025-27ರ ಅವಧಿಗಾಗಿ ಕಾರ್ಕಳ ತಾಲೂಕು ಬ್ರಾಹ್ಮಣ ಸಂಘದ ನೂತನ ಕಾರ್ಯಕಾರಿ ಸಮಿತಿಯ ರಚನೆ ಮತ್ತು ಅಧಿಕಾರ ಹಸ್ತಾಂತರ ಪ್ರಕ್ರಿಯೆಯು 2025ರ ಜುಲೈ 20ರಂದು ನಡೆದ ಮಹಾಸಭೆಯಲ್ಲಿ ಯಶಸ್ವಿಯಾಗಿ ನೆರವೇರಿತು.

ಮುಂಬೈ ರೈಲು ಸ್ಫೋಟ ಪ್ರಕರಣ: 19 ವರ್ಷಗಳ ನಂತರ 12 ಆರೋಪಿಗಳನ್ನು ಖುಲಾಸೆಗೊಳಿಸಿದ ಹೈಕೋರ್ಟ್‌!

2006ರಲ್ಲಿ ಮುಂಬೈ ಉಪನಗರ ರೈಲ್ವೆ ಜಾಲವನ್ನು ಬೆಚ್ಚಿಬೀಳಿಸಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ (Mumbai Train Blast Case) ಶಿಕ್ಷೆಗೊಳಗಾದ ಎಲ್ಲಾ 12 ಆರೋಪಿಗಳನ್ನು ಬಾಂಬೆ ಹೈಕೋರ್ಟ್ ಸೋಮವಾರ ಖುಲಾಸೆಗೊಳಿಸಿದೆ.

ಇಂಡೋನೇಷ್ಯಾದಲ್ಲಿ ಭಯಾನಕ ಹಡಗು ಅಗ್ನಿ ಅವಘಡ: 280 ಪ್ರಯಾಣಿಕರ ಪೈಕಿ ಹಲವರು ನಾಪತ್ತೆ

ಇಂಡೋನೇಷ್ಯಾದ ಉತ್ತರ ಸುಲವೇಸಿಯಲ್ಲಿರುವ ತಾಲಿಸ್ ದ್ವೀಪದ ಸಮೀಪ 280 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕೆಎಂ ಬಾರ್ಸಿಲೋನಾ ವಿಎ (KM Barcelona VA) ಹಡಗಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ.

“ಬನ್ನಂಜೆ 90 ಉಡುಪಿ ನಮನ”: ಪುತ್ತಿಗೆ ಶ್ರೀಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿಯ ಅಭಿಮಾನಿಗಳ ವತಿಯಿಂದ ಆಗಸ್ಟ್ 3ರಂದು ಎಂಜಿಎಂ ಕಾಲೇಜಿನಲ್ಲಿ ನಡೆಯಲಿರುವ "ಬನ್ನಂಜೆ 90 ಉಡುಪಿ ನಮನ" ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಭಾನುವಾರ ಬಿಡುಗಡೆಗೊಳಿಸಿದರು.