
ಉಡುಪಿ, ಮೇ 27 : ಮುಂಗಾರು ಮಳೆಯ ಸಂದರ್ಭದಲ್ಲಿ ತುರ್ತು ಪರಿಸ್ಥಿತಿಗಳನ್ನು ಸಮರ್ಪಕವಾಗಿ ನಿರ್ವಹಿಸುವ ಉದ್ದೇಶದಿಂದ ಉಡುಪಿ ನಗರಸಭೆ ವ್ಯಾಪ್ತಿಯ ಎಲ್ಲ 35 ವಾರ್ಡ್ ಗಳಿಗೆ ವಿಶೇಷ ನೋಡೆಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ತುರ್ತು ಪರಿಸ್ಥಿತಿಗಳಲ್ಲಿ ಸಂಪರ್ಕಿಸಬಹುದಾದ ಪ್ರಮುಖ ದೂರವಾಣಿ ಸಂಖ್ಯೆಗಳು:
- ನಗರಸಭೆ ಸಹಾಯವಾಣಿ (ಕಂಟ್ರೋಲ್ ರೂಂ): 0820-2520306
- ಸಹಾಯಕ ಕಾರ್ಯಪಾಲಕ ಅಭಿಯಂತರ ದುರ್ಗಾಪ್ರಸಾದ್: 97419 43666
- ಪರಿಸರ ಅಭಿಯಂತ್ರಿ ಸ್ನೇಹಾ ಕೆ.ಎಸ್: 91643 97765
- ಕಚೇರಿ ವ್ಯವಸ್ಥಾಪಕ ನಾರಾಯಣ ಎಸ್.ಎಸ್: 94487 23833
- ಕಂದಾಯ ಅಧಿಕಾರಿ ಸಂತೋಷ್ ಎಸ್.ಡಿ: 94497 47209
- ಕಂಟ್ರೋಲ್ ರೂಂ ನೋಡೆಲ್ ಅಧಿಕಾರಿ ಕೆ.ದಿವಾಕರ್: 74830 26687
ಮಾಹಿತಿ ಹಸ್ತಾಂತರ:
ನಗರಸಭೆ ವ್ಯಾಪ್ತಿಯ ಸಾರ್ವಜನಿಕರು ಮಳೆಯ ಅತಿವೃಷ್ಟಿಯಿಂದ ಉಂಟಾಗಬಹುದಾದ ತುರ್ತು ಪರಿಸ್ಥಿತಿಗಳ ಸಂದರ್ಭದಲ್ಲಿ ಈ ಅಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ನೆರವನ್ನು ಪಡೆಯಬಹುದಾಗಿದೆ. ಯಾವುದೇ ತೊಂದರೆಗಳಿಗೆ ಕೂಡ ತ್ವರಿತ ಸ್ಪಂದನೆ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.