spot_img

ಅಂಬಲಪಾಡಿ ವಿಶು ಶೆಟ್ಟಿಯವರಿಂದ ಧಾರಾಕಾರ ಮಳೆಯಲ್ಲಿ ನೆನೆಯುತ್ತಾ ಕುಳಿತಿದ್ದ ಮಹಿಳೆಯ ರಕ್ಷಣೆ

Date:

ಉಡುಪಿ : ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ದೆಂದೂರ್ ಕಟ್ಟೆ ಬಳಿ ಮಾನಸಿಕ ಖಿನ್ನತೆಗೆ ಒಳಗಾದ ಮಹಿಳೆಯೊಬ್ಬರು ಧಾರಾಕಾರ ಮಳೆಯಲ್ಲಿ ನೆನೆಯುತ್ತಾ ರಸ್ತೆ ಬದಿಯಲ್ಲಿ ದೀರ್ಘ ಸಮಯ ಕುಳಿತಿದ್ದವರನ್ನು ಸ್ಥಳೀಯ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿಯವರು ತಕ್ಷಣ ಸ್ಪಂದಿಸಿ ರಕ್ಷಣೆ ಮಾಡಿರುವ ಮಾನವೀಯ ಘಟನೆ ಬೆಳಕಿಗೆ ಬಂದಿದೆ.

ಅಂದಾಜು 45 ವರ್ಷ ವಯಸ್ಸಿನ ಶಾಂತ ಎಂಬ ಹೆಸರನ್ನು ಮಾತ್ರ ಹೇಳಿರುವ ಮಹಿಳೆ, ತನ್ನ ವೈಯಕ್ತಿಕ ಸಮಸ್ಯೆಗಳ ಹಿನ್ನೆಲೆಯಲ್ಲಿ ಮನನೊಂದ ಸ್ಥಿತಿಯಲ್ಲಿ ಬೆಳಿಗ್ಗೆ ಸುಮಾರು 10 ಗಂಟೆ ಸುಮಾರಿಗೆ ರಸ್ತೆ ಬದಿಗೆ ಬಂದು ಕುಳಿತಿದ್ದಾರೆ. ಅಲ್ಲಿಂದ ಸಾಯಂಕಾಲದವರೆಗೆ ಮಳೆಯಲ್ಲಿ ನನೆಯುತ್ತಾ ಒಂದೇ ಕಡೆಯಲ್ಲಿ ಕುಳಿತಿರುವ ದೃಶ್ಯ ಕಂಡು ಸಾರ್ವಜನಿಕರಲ್ಲಿ ಆತಂಕ ಮೂಡಿತ್ತು.

ಈ ಕುರಿತು ಸ್ಥಳೀಯರಿಂದ ಮಾಹಿತಿ ಪಡೆದ ವಿಶು ಶೆಟ್ಟಿಯವರು ಸ್ಥಳಕ್ಕೆ ಧಾವಿಸಿದಾಗ, ಮಹಿಳೆ ಯಾವುದೇ ಸಹಕಾರ ನೀಡದೇ ತೀವ್ರ ಪ್ರತಿರೋಧ ವ್ಯಕ್ತಪಡಿಸಿದ್ದಾರೆ. “ನಾನು ಎಲ್ಲಿಗೂ ಹೋಗುವುದಿಲ್ಲ, ಬೆಳಿಗ್ಗೆಯಿಂದ ಊಟವಿಲ್ಲದೆ ಇಲ್ಲಿ ಮಳೆಯಲ್ಲೇ ಕುಳಿತಿದ್ದೇನೆ” ಎಂದು ಹೇಳಿದ್ದಾರೆ. ಕೊನೆಗೆ ವಿಶು ಶೆಟ್ಟಿ ಅವರು ಮಹಿಳೆಯೊಂದಿಗೆ ಮಾತನಾಡಿ ಅವರ ಮನವೊಲಿಸಿ , ಮಹಿಳೆಯನ್ನು ಸುರಕ್ಷಿತವಾಗಿ ‘ಸಖಿ ಸೆಂಟರ್’ಗೆ ದಾಖಲಿಸಿದ್ದಾರೆ.

ಈ ಸಂಬಂಧ ಕಾಪು ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ. ಮಹಿಳೆಯು ಯಾವುದೇ ಸ್ಪಷ್ಟ ವಿಳಾಸ ಅಥವಾ ಕುಟುಂಬದ ವಿವರಗಳನ್ನು ನೀಡದಿರುವುದರಿಂದ, ಅವರ ಸಂಬಂಧಿಕರು ‘ಸಖಿ ಸೆಂಟರ್’ ಅಥವಾ ಕಾಪು ಠಾಣೆಯನ್ನು ತಕ್ಷಣ ಸಂಪರ್ಕಿಸಬೇಕೆಂದು ವಿಶು ಶೆಟ್ಟಿ ಮನವಿ ಮಾಡಿದ್ದಾರೆ.

ಈ ಘಟನೆಯು ಸಾರ್ವಜನಿಕರಲ್ಲಿ ಮಾನವೀಯ ಮೌಲ್ಯಗಳ ಪ್ರತಿಫಲನವಾಗಿ ಮೆಚ್ಚುಗೆ ಪಡೆಯುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಹಮದಾಬಾದ್ ವಿಮಾನ ದುರಂತಕ್ಕೆ ವಿಷಾದ ವ್ಯಕ್ತ ಪಡಿಸಿದ ಉದಯ ಶೆಟ್ಟಿ ಮುನಿಯಾಲು

ಅಹಮದಾಬಾದ್ ವಿಮಾನ ದುರಂತದಲ್ಲಿ ಸಾವೀಗೀಡಾದವರ ಆತ್ಮಕ್ಕೆ ಶಾಂತಿ ದೊರಕಲಿ, ಮೃತರ ಕುಟುಂಬ ವರ್ಗಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ತಿಳಿಸಿದ್ದಾರೆ.

ಶೀರೂರು ಮಠದ ಪರ್ಯಾಯದ ಸಾಂಪ್ರದಾಯಿಕ ಕಟ್ಟಿಗೆ ಮುಹೂರ್ತ ಹಾಗೂ ಪೇಜಾವರ ಮಠದ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಪ್ರಹ್ಲಾದ್ ಜೋಶಿ ಹಾಗೂ ಬಿ ಎಲ್ ಸಂತೋಷ್ ರವರಿಗೆ ಆಹ್ವಾನ

ಶೀರೂರು ಮಠದ ಪರ್ಯಾಯದ ಸಾಂಪ್ರದಾಯಿಕ ಕಟ್ಟಿಗೆ ಮುಹೂರ್ತ ಹಾಗೂ ಪೇಜಾವರ ಮಠದ ಚಾತುರ್ಮಾಸ್ಯಕಾರ್ಯಕ್ರಮಕ್ಕೆ ಪ್ರಹ್ಲಾದ್ ಜೋಶಿ ಹಾಗೂ ಬಿ ಎಲ್ ಸಂತೋಷ್ ರವರಿಗೆ ಆಹ್ವಾನ ನೀಡಲಾಯಿತು.

ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಂಘಟನಾ ಸಭೆ

ಬ್ಲಾಕ್ ಕಾಂಗ್ರೆಸ್ ಕಾರ್ಕಳ ಇದರ ಆಶ್ರಯದಲ್ಲಿ ಪಕ್ಷ ಸಂಘಟನೆಯ ಪ್ರಯುಕ್ತ ವಿವಿಧ ಘಟಕಗಳ ಅಧ್ಯಕ್ಷರು, ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ವಲಯ ಉಸ್ತುವಾರಿಗಳ ಸಭೆಯು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದರಾವ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಹಮದಾಬಾದ್ ವಿಮಾನ ದುರಂತ: ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ !

ಪ್ರಧಾನಿ ನರೇಂದ್ರ ಮೋದಿ ಜೂನ್ 13ರಂದು ಬೆಳಿಗ್ಗೆ 9 ಗಂಟೆಗೆ ಅಹಮದಾಬಾದ್ ತಲುಪಿದ್ದು, ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.