spot_img

ಯುನಿಯನ್ ಬ್ಯಾಂಕ್ ಸಿಬ್ಬಂದಿ ಎಂದು ಕರೆ ಮಾಡಿ ಕೆ ವೈ ಸಿ ಅಪ್ಡೇಟ್ ನೆಪದಲ್ಲಿ ನಿವೃತ್ತ ನರ್ಸ್ ನ ಖಾತೆಯಿಂದ 5.19 ಲಕ್ಷ ರೂ ಎಗರಿಸಿರುವ ಪ್ರಕರಣ

Date:

spot_img

ಕಾರ್ಕಳ : ಯುನಿಯನ್ ಬ್ಯಾಂಕ್ ಹೆಸರಿನಲ್ಲಿ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬನು ಕೆವೈಸಿ ಅಪ್‌ಡೇಟ್ ಮಾಡುವ ನೆಪದಲ್ಲಿ ನಿವೃತ್ತ ನರ್ಸ್‌ರೊಬ್ಬರ ಖಾತೆಯಿಂದ ₹5.19 ಲಕ್ಷ ಎಗರಿಸಿರುವ ಪ್ರಕರಣ ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ಬೆಳಕಿಗೆ ಬಂದಿದೆ.

ಘಟನೆಯ ವಿವರ:
ಸಾಣೂರಿನ ಪ್ರೇಮಲತಾ (ವಯಸ್ಸು 58) ಎಂಬವರು ಯುನಿಯನ್ ಬ್ಯಾಂಕ್‌ನ ಗ್ರಾಹಕರಾಗಿದ್ದು, ನಿವೃತ್ತ ನರ್ಸ್ ಆಗಿದ್ದಾರೆ. ಜೂನ್ 26ರಂದು ಅವರು ರೈಲಿನಲ್ಲಿ ಮುಂಬೈಗೆ ಪ್ರಯಾಣಿಸುತ್ತಿದ್ದಾಗ, 7076260938 ಎಂಬ ನಂಬರಿನಿಂದ ಕರೆ ಬಂದಿದೆ . ಕರೆ ಮಾಡಿದ ವ್ಯಕ್ತಿ ತನ್ನನ್ನು ಕಾರ್ಕಳ ಸಾಣೂರು ಶಾಖೆಯ ಯುನಿಯನ್ ಬ್ಯಾಂಕ್ ಉದ್ಯೋಗಿಯೆಂದು ಪರಿಚಯಿಸಿಕೊಂಡು, “ನಿಮ್ಮ ಖಾತೆ ಕೆವೈಸಿ ಅಪ್‌ಡೇಟ್ ಆಗಿಲ್ಲ. ಡೆಬಿಟ್ ಕಾರ್ಡ್ ನಂಬರ್ ನೀಡಿ,” ಎಂದು ಕೇಳಿದ್ದ. ಅಧಿಕೃತ ಬ್ಯಾಂಕ್ ಕರೆ ಎಂದು ನಂಬಿದ ಪ್ರೇಮಲತಾ ತಮ್ಮ ಡೆಬಿಟ್ ಕಾರ್ಡ್ ವಿವರಗಳನ್ನು ನೀಡಿದ್ದರು. ಬಳಿಕ, ಅದೇ ವ್ಯಕ್ತಿ ಮತ್ತೆ ಕರೆ ಮಾಡಿ “ಅಪ್‌ಡೇಟ್ ಆಗಿದೆ” ಎಂದು ಭರವಸೆ ನೀಡಿದ್ದ. ಆದರೆ, ಅದೇ ದಿನ ರಾತ್ರಿ 8:18 ಕ್ಕೆ ಪ್ರೇಮಲತಾ ಅವರ ಖಾತೆಯಿಂದ ₹2,50,000 ಕಡಿತವಾಯಿತು. ಕೆಲ ನಿಮಿಷಗಳಲ್ಲಿ ಮತ್ತೊಂದು ₹2,50,000 ಮತ್ತು ನಂತರ ₹19,000 ಹಣವೂ ಕಡಿತವಾಗಿದೆ. ಒಟ್ಟು ₹5,19,000 ನಗದು ಅವರ ಖಾತೆಯಿಂದ ಪೋಲಾಗಿರುವುದು ಪತ್ತೆಯಾಗಿದೆ.

ಕಾನೂನು ಕ್ರಮ:
ಈ ಸಂಬಂಧ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸೈಬರ್ ಕ್ರೈಂ ವಿಭಾಗ ತನಿಖೆ ಆರಂಭಿಸಿದೆ. ಶೀಘ್ರದಲ್ಲಿ ಕರೆ ಮಾಡಿದ ವ್ಯಕ್ತಿಯ ಟ್ರಾನ್ಸಾಕ್ಷನ್ ಹಾದಿ ಹಾಗೂ ಬ್ಯಾಂಕ್ ದಾಖಲೆಗಳನ್ನು ಶೋಧಿಸಿ ಕ್ರಮ ಕೈಗೊಳ್ಳಲಾಗುತ್ತಿದೆ.

ಪೊಲೀಸರ ಎಚ್ಚರಿಕೆ:
ಸಾರ್ವಜನಿಕರು ಈ ರೀತಿಯ ಕರೆಗಳಿಗೆ ಸ್ಪಂದಿಸದೇ, ಯಾವುದೇ ಖಾತೆ ವಿವರಗಳನ್ನು ನೀಡಬಾರದು. ಯಾವುದೇ ಬ್ಯಾಂಕ್ ಉದ್ಯೋಗಿ ದೂರವಾಣಿ ಮೂಲಕ ಖಾತೆ ಸಂಖ್ಯೆ ಅಥವಾ ಕಾರ್ಡ್ ವಿವರ ಕೇಳುವುದಿಲ್ಲ ಎಂಬುದನ್ನು ಪೊಲೀಸ್ ಇಲಾಖೆ ಎಚ್ಚರಿಕೆಯ ರೂಪದಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಸದ್ಭಾವನಾ ದಿವಸ್

ಇಂದು ದೇಶಾದ್ಯಂತ ಶಾಂತಿ, ಸೌಹಾರ್ದತೆ ಮತ್ತು ರಾಷ್ಟ್ರೀಯ ಏಕತೆಯ ಮಹತ್ವವನ್ನು ಎತ್ತಿ ಹಿಡಿಯುವ ಸದ್ಭಾವನಾ ದಿವಸವನ್ನು ಆಚರಿಸಲಾಗುತ್ತದೆ

1995 ರ ನಂತರದ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳನ್ನು ಅನುದಾನಕ್ಕೆ ಒಳಪಡಿಸಲು ಗಮನ ಸೆಳೆಯುವ ಸೂಚನೆ ಮಂಡಿಸಿ ಯಶಸ್ವಿಯಾದ ವಿ ಪ ಸದಸ್ಯ ಶಶೀಲ್ ಜಿ ನಮೋಶಿ

1995 ರಿಂದ ಪ್ರಾರಂಭವಾದ ಕನ್ನಡ ಮಾಧ್ಯಮದ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡಬೇಕು ಎಂದು ಗಮನ ಸೆಳೆಯುವ ಸೂಚನೆ ಮಂಡಿಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಂದ ಅನುದಾನ ನೀಡುವ ಭರವಸೆ ಪಡೆಯುವಲ್ಲಿ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಯಶಸ್ವಿಯಾದರು.

ಸುಂಟರಗಾಳಿ ಮತ್ತು ಅತಿಯಾದ ಮಳೆಯಿಂದ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಆದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ವಿ ಸುನಿಲ್‌ ಕುಮಾರ್ ಮನವಿ‌

ಸುಂಟರಗಾಳಿ ಮತ್ತು ಅತಿಯಾದ ಮಳೆಯಿಂದ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಆದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ವಿ ಸುನಿಲ್‌ ಕುಮಾರ್ ಮನವಿ‌ ಮಾಡಿದ್ದಾರೆ.

ಹೈಪೊಗ್ಲಿಸಿಮಿಯಾ: ಹಠಾತ್ ರಕ್ತದ ಸಕ್ಕರೆ ಇಳಿಕೆ ಅತ್ಯಂತ ಅಪಾಯಕಾರಿ – ತಜ್ಞರ ಎಚ್ಚರಿಕೆ

ಇದ್ದಕ್ಕಿದ್ದಂತೆ ರಕ್ತದಲ್ಲಿ ಸಕ್ಕರೆಯ ಪ್ರಮಾಣ ನಿಯಮಿತ ಮಟ್ಟಕ್ಕಿಂತಲೂ ಕಡಿಮೆಯಾದರೆ ಅದು ಹೆಚ್ಚು ಅಪಾಯಕಾರಿ ಎನ್ನುತ್ತಾರೆ ಆರೋಗ್ಯ ತಜ್ಞರು.