ಪರ್ಕಳದಲ್ಲಿ ₹3.5 ಕೋಟಿ ವೆಚ್ಚದ ನೂತನ ಮಾರುಕಟ್ಟೆ ಸಂಕೀರ್ಣಕ್ಕೆ ಶಿಲಾನ್ಯಾಸ: ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ

Date:

spot_img

ಉಡುಪಿ: ಉಡುಪಿ ನಗರಸಭೆಯ ಮಹತ್ವಾಕಾಂಕ್ಷೆಯ ಯೋಜನೆಯಾದ ಪರ್ಕಳ ಮಾರುಕಟ್ಟೆ ಸಂಕೀರ್ಣ ನಿರ್ಮಾಣ ಕಾಮಗಾರಿಗೆ ಇಂದು ಶಿಲಾನ್ಯಾಸ ನೆರವೇರಿಸಲಾಯಿತು. ಉಡುಪಿ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ ಅವರು ಸುಮಾರು ₹3.5 ಕೋಟಿ ಅಂದಾಜು ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಈ ಆಧುನಿಕ ಮಾರುಕಟ್ಟೆ ಸಂಕೀರ್ಣಕ್ಕೆ ಶಿಲಾನ್ಯಾಸ ನೆರವೇರಿಸಿದರು.

ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಶಾಸಕ ಯಶ್‌ಪಾಲ್ ಸುವರ್ಣ, ಈ ನೂತನ ಮಾರುಕಟ್ಟೆ ಸಂಕೀರ್ಣವು ತರಕಾರಿ ಮಾರುಕಟ್ಟೆ, ಮೀನು ಮಾರುಕಟ್ಟೆ, ಮಾಂಸದ ಅಂಗಡಿಗಳು, ನಿತ್ಯ ಮಾರುಕಟ್ಟೆ ಹಾಗೂ ವಿವಿಧ ಅಂಗಡಿ ಮಳಿಗೆಗಳನ್ನು ಒಳಗೊಂಡಿರಲಿದೆ ಎಂದು ತಿಳಿಸಿದರು. ಅಲ್ಲದೆ, ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆಯೊಂದಿಗೆ ನಿರ್ಮಾಣಗೊಳ್ಳಲಿರುವ ಈ ಮಾರುಕಟ್ಟೆಯು ಪರ್ಕಳ ಹಾಗೂ ಸುತ್ತಮುತ್ತಲಿನ ಪ್ರದೇಶದ ಜನತೆಗೆ ಅತ್ಯಂತ ಉಪಯುಕ್ತವಾಗಲಿದೆ ಎಂದು ಅವರು ಭರವಸೆ ನೀಡಿದರು. ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಲಭ್ಯವಾಗಿಸುವ ಗುರಿ ಹೊಂದಲಾಗಿದೆ ಎಂದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭಾ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾದ ಶ್ರೀಮತಿ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಸುಂದರ ಕಲ್ಮಾಡಿ, ನಗರಸಭೆ ಸದಸ್ಯರಾದ ಶ್ರೀಮತಿ ಸುಮಿತ್ರಾ ನಾಯಕ್, ಶ್ರೀ ಬಾಲಕೃಷ್ಣ ಶೆಟ್ಟಿ, ಶ್ರೀ ಮಂಜುನಾಥ ಮಣಿಪಾಲ, ಶ್ರೀಮತಿ ವಿಜಯಲಕ್ಷ್ಮೀ, ಶ್ರೀಮತಿ ಅಶ್ವಿನಿ, ನಗರಸಭೆ ಮಾಜಿ ಅಧ್ಯಕ್ಷರಾದ ಶ್ರೀ ದಿನಕರ ಶೆಟ್ಟಿ ಹೆರ್ಗ, ಹಸಿ ಮೀನು ಮಾರಾಟಗಾರ ಮಹಿಳೆಯರ ಸಂಘದ ಅಧ್ಯಕ್ಷರಾದ ಶ್ರೀಮತಿ ಬೇಬಿ ಎಚ್. ಸಾಲ್ಯಾನ್, ಮುಖಂಡರಾದ ಶ್ರೀ ದಿಲೀಪ್ ರಾಜ್ ಹೆಗ್ಡೆ, ಶ್ರೀ ದಿನೇಶ್ ಶೆಟ್ಟಿ, ಶ್ರೀ ದಿವಾಕರ ಶೆಟ್ಟಿ, ಶ್ರೀ ಪ್ರಕಾಶ್ ಶೆಟ್ಟಿ, ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ಶ್ರೀ ದುರ್ಗಾ ಪ್ರಸಾದ್, ಮೀನು ಮಾರಾಟಗಾರ ಮಹಿಳೆಯರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳದಲ್ಲಿ ಯುವತಿಗೆ ಹಲ್ಲೆ, ಜೀವ ಬೆದರಿಕೆ: ಯುವಕನ ವಿರುದ್ಧ ಪ್ರಕರಣ

ಕಾರ್ಕಳದಲ್ಲಿ 19 ವರ್ಷದ ಯುವತಿಗೆ ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪದಡಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಗ್ ಬಾಸ್ ಹೊಸ ಸೀಸನ್: 6 ಭಾಷೆಗಳಲ್ಲಿ ಶೋ, ಸೌರವ್ ಗಂಗೂಲಿ ಎಂಟ್ರಿ

ಜಿಯೋಸ್ಟಾರ್‌ನಿಂದ 6 ಭಾಷೆಗಳಲ್ಲಿ ಬಿಗ್ ಬಾಸ್ ಆರಂಭ. ಬಾಂಗ್ಲಾ ಆವೃತ್ತಿಗೆ ಸೌರವ್ ಗಂಗೂಲಿ ನಿರೂಪಕ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಲಾವಣ್ಯಾ ಕೊಲೆ ಪ್ರಕರಣ: ಆರೋಪಿ ಚೇತನ್ ಬಂಧನಕ್ಕೆ ಗಿರೀಶ್ ಧೈರ್ಯ

ಲಾವಣ್ಯಾ ಕೊಲೆ ಪ್ರಕರಣದ ಆರೋಪಿ ಚೇತನ್ ಬಂಧನಕ್ಕೆ ಸ್ಥಳೀಯ ಯುವಕ ಗಿರೀಶ್ ವಹಿಸಿದ ಸಾಹಸಮಯ ಪಾತ್ರದ ಸಂಪೂರ್ಣ ವಿವರ, ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ