
ಕಾಪು: ಕಟಪಾಡಿಯ ಮಟ್ಟು ಬೀಚ್ನಲ್ಲಿ ಸಮುದ್ರಕ್ಕೆ ಇಳಿದಿದ್ದ ಆರು ವಿದ್ಯಾರ್ಥಿಗಳ ತಂಡದಲ್ಲಿ ಒಬ್ಬ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮಧ್ಯಪ್ರದೇಶ ಮೂಲದ, ಮಣಿಪಾಲದ ಕಾಲೇಜೊಂದರ 18 ವರ್ಷದ ವಿದ್ಯಾರ್ಥಿ ವೀರೂರುಲ್ಕರ್ ಎಂದು ಗುರುತಿಸಲಾಗಿದೆ.
ಮಣಿಪಾಲದ ಈ ಆರು ವಿದ್ಯಾರ್ಥಿಗಳ ತಂಡ ಮಟ್ಟು ಬೀಚ್ನಲ್ಲಿ ಮೋಜು ಮಸ್ತಿಯಲ್ಲಿ ತೊಡಗಿ, ಈಜಲು ಸಮುದ್ರಕ್ಕೆ ಇಳಿದಿದ್ದರು. ಈ ವೇಳೆ ಸ್ಥಳೀಯರು ಅಪಾಯದ ಬಗ್ಗೆ ಎಚ್ಚರಿಕೆ ನೀಡಿದ್ದರೂ ವಿದ್ಯಾರ್ಥಿಗಳು ಅದನ್ನು ನಿರ್ಲಕ್ಷಿಸಿ ಆಟವಾಡುತ್ತಿದ್ದರು ಎಂದು ಹೇಳಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರಾದ ಆರ್ಯನ್, ಪ್ರವೀಣ್ ಮತ್ತಿತರರು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.



































