spot_img

ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರ? ಉಡುಪಿಯಲ್ಲಿ ಆಟೋ ಚಾಲಕನ ಮೇಲೆ ತಲವಾರು ದಾಳಿ, ಇಬ್ಬರು ಬಂಧನ

Date:

spot_img

ಉಡುಪಿ, ಮೇ 2: ಮಂಗಳೂರು ಬಜಪೆ ತಾಲೂಕಿನ ಕಿನ್ನಿಪದವಿಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ನಂತರ, ಅದರ ಪ್ರತೀಕಾರವಾಗಿ ಉಡುಪಿಯ ಆತ್ರಾಡಿ ಪ್ರದೇಶದಲ್ಲಿ ಹತ್ಯೆಗೆ ಯತ್ನ ಪ್ರಕರಣ ನಡೆದಿದೆ. ಈ ಘಟನೆಯಿಂದ ಜಿಲ್ಲೆಯಲ್ಲಿ ಮತ್ತಷ್ಟು ಗಂಭೀರತೆ ಮೂಡಿರುವುದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.

ಮೇ 1ರ ರಾತ್ರಿ 11:15ರ ಸುಮಾರಿಗೆ ಆತ್ರಾಡಿಯ ಪೆಟ್ರೋಲ್ ಪಂಪ್ ಬಳಿ ಆಟೋ ಚಾಲಕನೊಬ್ಬರ ಮೇಲೆ ತಲವಾರಿನಿಂದ ದಾಳಿ ನಡೆದಿದೆ. ದಾಳಿಗೊಳಗಾದ ವ್ಯಕ್ತಿಯನ್ನು ಆತ್ರಾಡಿಯ ಅಬೂಬಕರ್ (50) ಎಂದು ಗುರುತಿಸಲಾಗಿದೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರು ಹಿರಿಯಡ್ಕ ಬೊಮ್ಮರಬೆಟ್ಟು ನಿವಾಸಿ ಸಂದೇಶ್ (31) ಮತ್ತು ಬಾಪೂಜಿ ದರ್ಖಾಸು ನಿವಾಸಿ ಸುಶಾಂತ್ (32) ಎಂದು ಗುರುತಿಸಲಾಗಿದೆ. ಅಬೂಬಕರ್ ಅವರು ಬಾಡಿಗೆ ನಿಮಿತ್ತ ಮದಗ ಕಡೆಗೆ ಆಟೋ ಓಡಿಸುತ್ತಿದ್ದಾಗ, ಇಬ್ಬರು ಬೈಕ್‌ನಲ್ಲಿ ಹಿಂಬಾಲಿಸುತ್ತಾ ರಿಕ್ಷಾವನ್ನು ಅಡ್ಡಗಟ್ಟಿ ದಾಳಿ ನಡೆಸಿದ್ದಾರೆ. ತಲವಾರು ಹಿಡಿದಿದ್ದ ಆರೋಪಿಗಳು “ಆಯನ್ ಕಡ್ಪು ಬುಡೊಚ್ಚಿ” (“ಅವನನ್ನು ಕೊಚ್ಚು, ಬಿಡಬೇಡ” ) ಎಂಬ ಉದ್ಧೇಶಿತ ಶಬ್ದಗಳನ್ನು ಬಳಸಿದ್ದಾರೆ ಎಂಬ ಮಾಹಿತಿ ದೊರಕಿದೆ.

ಶೇಡಿಗುಡ್ಡೆ ಬಳಿ ಆಟೋ ನಿಲ್ಲಿಸಿದ ಬಳಿಕ, ಆರೋಪಿಗಳಿಬ್ಬರಲ್ಲಿ ಒಬ್ಬರು ತಲವಾರಿನಿಂದ ತಲೆಗೆ ಹಲ್ಲೆ ಮಾಡಲು ಯತ್ನಿಸಿದ್ದು, ಮತ್ತೊಬ್ಬನು ಬಾಟಲಿಯಿಂದ ಆಟೋ ರಿಕ್ಷಾದ ಗ್ಲಾಸ್‌ಗೆ ಹೊಡೆದಿದ್ದಾನೆ. ಅಬೂಬಕರ್ ಅವರು ಯಾವುದೇ ಭೀಕರ ಗಾಯವಿಲ್ಲದಂತೆ ಸ್ಥಳದಿಂದ ಓಡಿ ತಪ್ಪಿಸಿಕೊಂಡಿದ್ದಾರೆ.

ಉಡುಪಿ ಎಸ್‌ಪಿ ಅರುಣ್ ಕುಮಾರ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಈ ದಾಳಿ ಬಜಪೆ ಹತ್ಯೆಗೆ ಪ್ರತೀಕಾರವಾಗಿದ್ದು ಆರೋಪಿಗಳು ತಪ್ಪು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪ್ರೋಟಾನ್‌ನಿಂದ ‘ಲುಮೋ’ AI ಚಾಟ್‌ಬಾಟ್ ಬಿಡುಗಡೆ

ಸುರಕ್ಷಿತ ಇಮೇಲ್ ಮತ್ತು ವಿಪಿಎನ್‌ ಸೇವೆಗಳಿಗೆ ಹೆಸರುವಾಸಿಯಾಗಿರುವ ಪ್ರೋಟಾನ್ ಕಂಪನಿಯು, ಹೊಸ ಎಐ ಚಾಟ್‌ಬಾಟ್ ಒಂದನ್ನು ಬಿಡುಗಡೆ ಮಾಡಿದೆ. ‘ಲುಮೋ’ (Lumo) ಎಂದು ಹೆಸರಿಸಲಾದ ಈ ಚಾಟ್‌ಬಾಟ್ ಅನ್ನು ಗೌಪ್ಯತೆಯನ್ನು ಪ್ರಥಮ ಆದ್ಯತೆಯಾಗಿಟ್ಟುಕೊಂಡು ವಿನ್ಯಾಸಗೊಳಿಸಲಾಗಿದೆ.

ಹುಲಿಕಲ್ ಘಾಟಿಯಲ್ಲಿ ಮತ್ತೊಮ್ಮೆ ಭಾರೀ ಕುಸಿತ; ಶೀಘ್ರವೇ ಬೃಹತ್ ವಾಹನಗಳ ಸಂಚಾರ ನಿಷೇಧ ಸಾಧ್ಯತೆ!

ರಾಜ್ಯದ ಪ್ರಮುಖ ಘಾಟ್‌ಗಳಲ್ಲಿ ಒಂದಾದ ಹುಲಿಕಲ್ ಘಾಟ್ (ಬಾಳೆಬರೆ) ರಸ್ತೆಯಲ್ಲಿ ಮತ್ತೆ ದೊಡ್ಡ ಪ್ರಮಾಣದ ಕುಸಿತ ಸಂಭವಿಸಿದ್ದು, ಇದು ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.

ಧರ್ಮಸ್ಥಳ ಪ್ರಕರಣ: 11ನೇ ಸ್ಥಳದಲ್ಲಿ ಶೋಧ ವಿಫಲ; 6ನೇ ಸ್ಥಳದ ಅಸ್ಥಿಪಂಜರ ಕೇಸ್ SITಗೆ ವರ್ಗಾವಣೆ!

ಹಲವಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಧರ್ಮಸ್ಥಳ ಪ್ರಕರಣದ ತನಿಖೆ ಮುಂದುವರೆದಿದೆ. ಆದರೆ, ಆಗಸ್ಟ್ 5ರಂದು ನಡೆಸಿದ ಶೋಧಕಾರ್ಯದಲ್ಲಿ ದೂರುದಾರರು ಗುರುತು ಮಾಡಿದ್ದ 11ನೇ ಸ್ಥಳದಲ್ಲಿ ಯಾವುದೇ ಕುರುಹು ಪತ್ತೆಯಾಗಿಲ್ಲ.

ಕಾಂಗ್ರೆಸ್ ಸಿದ್ಧಾಂತ ಜನರಿಗೆ ತಲುಪಿಸಿ: ಯಶಸ್ಸು ತಾತ್ಕಾಲಿಕವಲ್ಲ ಎಂದ ಕಿಮ್ಮನೆ ರತ್ನಾಕರ್

ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ನಿಲುವು ಮತ್ತು ವಿಚಾರಧಾರೆಗಳನ್ನು ಜನಸಾಮಾನ್ಯರಿಗೆ ಪರಿಣಾಮಕಾರಿಯಾಗಿ ತಲುಪಿಸುವಂತೆ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷ ಕಿಮ್ಮನೆ ರತ್ನಾಕರ್ ಅವರು ಕಾರ್ಯಕರ್ತರಿಗೆ ಕರೆ ನೀಡಿದರು.