spot_img

ಉಡುಪಿ ಶೀರೂರು ಪರ್ಯಾಯ: ಕಟ್ಟಿಗೆ ಮುಹೂರ್ತ ಸಂಪನ್ನ

Date:

spot_img

ಉಡುಪಿ : ಶ್ರೀಕೃಷ್ಣ ಮಠದಲ್ಲಿ ಮುಂದಿನ ಪರ್ಯಾಯ ಮಹೋತ್ಸವಕ್ಕೆ ಸಿದ್ಧತೆಗಳು ಪ್ರಾರಂಭವಾಗಿದ್ದು, ಮೊದಲ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿರುವ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪರ್ಯಾಯದ ಪೂರ್ವಭಾವಿ ಧಾರ್ಮಿಕ ವಿಧಿಯಾದ “ಕಟ್ಟಿಗೆ ಮುಹೂರ್ತವು” ಇಂದು ಉಡುಪಿ ಶ್ರೀಕೃಷ್ಣ ಮಠದ ಪರಿಸರದಲ್ಲಿ ವಿಜೃಂಭಣೆಯಿಂದ ನಡೆಯಿತು.

ಈ ಶುಭ ಸಂದರ್ಭದಲ್ಲಿ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಜೊತೆಗೆ, ಪ್ರಸ್ತುತ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ಕಿರಿಯ ಯತಿ ಶ್ರೀ ಸುಶೀಂದ್ರ ತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.

ಶೀರೂರು ಮಠದ ದಿವಾನರಾದ ಡಾ. ಉದಯಕುಮಾರ ಸರಳತ್ತಾಯ ಅವರ ನೇತೃತ್ವದಲ್ಲಿ, ಪುರೋಹಿತ ಗಿರಿರಾಜ ಉಪಾಧ್ಯಾಯರು ಶೀರೂರು ಮಠದ ಶ್ರೀ ವಿಠ್ಠಲ ದೇವರು, ಶ್ರೀ ಚಂದ್ರೇಶ್ವರ ದೇವರು, ಶ್ರೀ ಅನಂತೇಶ್ವರ ದೇವರು, ಮತ್ತು ಶ್ರೀ ಕೃಷ್ಣ ಮುಖ್ಯಪ್ರಾಣ ದೇವರಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಧಾರ್ಮಿಕ ವಿಧಿವಿಧಾನಗಳು ಪ್ರಾರಂಭವಾದವು. ನಂತರ, ಮಠದ ಕಲ್ಸಂಕ ಲಕ್ಷ್ಮೀ ತೋಟದಿಂದ ಕಟ್ಟಿಗೆಯನ್ನು ಎತ್ತಿನಗಾಡಿ, ಕೈಗಾಡಿ ಮತ್ತು ಭಕ್ತರು ಕೈಯಲ್ಲಿ ಹೊತ್ತು ಮೆರವಣಿಗೆಯಲ್ಲಿ ತಂದರು. ಬಳಿಕ, ಮಧ್ವ ಸರೋವರದ ಈಶಾನ್ಯ ಭಾಗದ ನಿಗದಿತ ಸ್ಥಳದಲ್ಲಿ ಪೂಜಾ ಕಾರ್ಯಗಳನ್ನು ನೆರವೇರಿಸಿ, ಪ್ರಾರ್ಥನೆ ಸಲ್ಲಿಸಿ, ಕಟ್ಟಿಗೆ ರಥ ನಿರ್ಮಾಣ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು.

ಪರ್ಯಾಯ ಸ್ವಾಗತ ಸಮಿತಿ ಕಚೇರಿಯನ್ನು ಶೀರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶಪಾಲ್ ಸುವರ್ಣ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಮಾಜಿ ಶಾಸಕ ರಘುಪತಿ ಭಟ್, ಉಡುಪಿ ನಗರಸಭಾಧ್ಯಕ್ಷ ಪ್ರಭಾಕರ ಪೂಜಾರಿ, ಮಟ್ಟಾರು ರತ್ನಾಕರ ಹೆಗ್ಡೆ, ಮಠದ ಪಾರುಪತ್ಯಗಾರ ಶ್ರೀಶ ಭಟ್ ಕಡೆಕಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಪರ್ಯಾಯ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಿ ರಾಜರ್ಷಿ ವೀರೇಂದ್ರ ಹೆಗ್ಗಡೆಯವರನ್ನು ನೇಮಿಸಲಾಯಿತು. ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರನ್ನು ಅಧ್ಯಕ್ಷರಾಗಿ, ಕಟೀಲು ದೇವಳದ ಅರ್ಚಕ ಗೋಪಾಲಕೃಷ್ಣ ಅಸ್ರಣ್ಣ, ಬೆಂಗಳೂರಿನ ಸಂಸದ ತೇಜಸ್ವಿ ಸೂರ್ಯ, ಮಣಿಪಾಲದ ಉದ್ಯಮಿ ರಂಜನ್ ಪೈ ಅವರನ್ನು ಕಾರ್ಯಾಧ್ಯಕ್ಷರಾಗಿ ಹಾಗೂ ಮಟ್ಟಾರು ರತ್ನಾಕರ ಹೆಗ್ಡೆಯವರನ್ನು ಪ್ರಧಾನ ಕಾರ್ಯಾಧ್ಯಕ್ಷರಾಗಿ ನೇಮಿಸಲಾಯಿತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಜಪಾನ್‌ನಿಂದ ಇಂಟರ್ನೆಟ್ ವೇಗದಲ್ಲಿ ವಿಶ್ವ ದಾಖಲೆ: 1.02 Pbps ವೇಗ, ಒಂದೇ ಸೆಕೆಂಡಿನಲ್ಲಿ ನೆಟ್‌ಫ್ಲಿಕ್ಸ್ ಡೌನ್‌ಲೋಡ್!

ಡಿಜಿಟಲ್ ಜಗತ್ತಿನಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿರುವ ಜಪಾನ್, ಇಂಟರ್ನೆಟ್ ವೇಗದಲ್ಲಿ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

ಊಟವಾದ ತಕ್ಷಣ ನಿದ್ದೆ ಮಾಡುತ್ತೀರಾ? ಎಚ್ಚರ! ಈ ಅಭ್ಯಾಸ ಆರೋಗ್ಯಕ್ಕೆ ಅತಿ ಅಪಾಯಕಾರಿ!

ರಾತ್ರಿ ಊಟ ಮಾಡಿದ ತಕ್ಷಣ ಮಲಗುವುದು ಅನೇಕರ ಅಭ್ಯಾಸ. ಆದರೆ, ಈ ಅಭ್ಯಾಸವು ಆರೋಗ್ಯಕ್ಕೆ ಅತಿ ಅಪಾಯಕಾರಿ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ.

ದಿನ ವಿಶೇಷ – ಯುವ ಜನರ ಕೌಶಲ್ಯ ದಿನಾಚರಣೆ

ಈ ದಿನವನ್ನು ಯುವಕರ ಕೌಶಲ್ಯ ವಿಕಾಸ, ಉದ್ಯೋಗ ಅವಕಾಶಗಳು ಮತ್ತು ಸಮರ್ಥ ಜಾಗತಿಕ ನಾಗರಿಕರಾಗಿ ಬೆಳೆಯುವ ಪ್ರಾಮುಖ್ಯತೆಯನ್ನು ಹೈಲೈಟ್ ಮಾಡಲು ಯುನೈಟೆಡ್ ನೇಷನ್ಸ್ ಸಂಸ್ಥೆ 2004ರಲ್ಲಿ ಘೋಷಿಸಿತು.

ಶಿರಾಡಿಘಾಟ್‌ನಲ್ಲಿ ಜಲಪಾತಕ್ಕೆ ಉರುಳಿದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪ್ರಸಿದ್ಧ ಶಿರಾಡಿಘಾಟ್‌ನಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಜಲಪಾತವೊಂದರ ಬಳಿ ನಿಲ್ಲಿಸಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಜಲಪಾತಕ್ಕೆ ಉರುಳಿಬಿದ್ದಿದೆ.