spot_img

ಉಡುಪಿ: ಗೋಸಂರಕ್ಷಣೆಗಾಗಿ ವಿಶೇಷ ಉಪವಾಸ, ಪಾರಾಯಣ ಮತ್ತು ಜಪ ಅಭಿಯಾನಕ್ಕೆ ಪೇಜಾವರ ಶ್ರೀ ಗಳಿಂದ ಕರೆ

Date:

ಗೋವಿನ ಮೇಲಿನ ದೌರ್ಜನ್ಯ ಖಂಡಿಸಿ ಜ.25ರಂದು ಒಂದು ದಿನದ ಉಪವಾಸ ಸತ್ಯಾಗ್ರಹಕ್ಕೆ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಕರೆ ನೀಡಿದ್ದಾರೆ. ಜನವರಿ 23 ರಿಂದ 29 ರವರೆಗೆ ಕೋಟಿವಿಷ್ಣು ಸಹಸ್ರನಾಮ ಪಾರಾಯಣ ಹಾಗೂ ಶಿವ ಪಂಚಾಕ್ಷರ ಜಪ ಅಭಿಯಾನವನ್ನು ಹಮ್ಮಿಕೊಳ್ಳುವಂತೆ ಸ್ವಾಮೀಜಿಯವರು ಗಣ್ಯರು, ಭಕ್ತರು ಹಾಗೂ ಸಮಾಜದ ಜನತೆಗೆ ಮನವಿ ಮಾಡಿದ್ದಾರೆ.

ಗೋಸಂರಕ್ಷಣೆಯ ಅಗತ್ಯತೆ:
ಗೋವಿನ ಮೇಲಿನ ದೌರ್ಜನ್ಯ, ಹಿಂಸೆ ಮತ್ತು ಗೋಹತ್ಯೆಗಳು ಸಮಾಜದ ಪ್ರತಿಷ್ಠೆಗೆ ಧಕ್ಕೆ ತರುತ್ತವೆ.ಇವುಗಳಿಂದ ಭೂಮಿಯಲ್ಲಿ ಭಿಕ್ಷೆ, ಅಶಾಂತಿ, ಕ್ಷಾಮ ಉಂಟಾಗುತ್ತದೆ ಎಂದರು. ಗೋ ಸಂರಕ್ಷಣೆಗಾಗಿ ಹಿಂದೂ ಸಮಾಜ ಕೂಡಲೇ ಮುಂದಾಗಬೇಕು ಎಂದು ಒತ್ತಾಯಿಸಿದರು.

ಕೋಟಿ ಪಾರಾಯಣ ಅಭಿಯಾನ:
ಈ ಅಭಿಯಾನದ ಅಂಗವಾಗಿ ವಿಷ್ಣು ಸಹಸ್ರನಾಮ ಪಾರಾಯಣ ಹಾಗೂ ಶಿವ ಪಂಚಾಕ್ಷರ ಜಪದಲ್ಲಿ ಜಾತಿ, ಮತ ಭೇದವಿಲ್ಲದೆ ಎಲ್ಲ ಧರ್ಮೀಯರು ಪಾಲ್ಗೊಳ್ಳಬೇಕು. ಈ ಮೂಲಕ ಗೋವುಗಳ ರಕ್ಷಣೆಗಾಗಿ ಪ್ರಾರ್ಥಿಸಿ ಸಮಾಜದಲ್ಲಿ ಶಾಂತಿ ನೆಲೆಸಲು ಪ್ರಯತ್ನಿಸಬೇಕು.

ಅಭಿಯಾನದ ಅಂತಿಮ ದಿನ:
ಜನವರಿ 29 ರಂದು ನಾಡಿನಾದ್ಯಂತ ಮಠ, ಮಂದಿರ, ದೇವಸ್ಥಾನಗಳಲ್ಲಿ ಪಾರಾಯಣ ಯಜ್ಞಗಳನ್ನು ನಡೆಸುವ ಮೂಲಕ ಅಭಿಯಾನವನ್ನು ಮುಕ್ತಾಯಗೊಳಿಸಲಾಗುವುದು. ಈ ಅಭಿಯಾನದಲ್ಲಿ ಸಾಧು, ಸಂತರು, ಭಜನಾ ಮಂದಿರಗಳು, ಪಾರಾಯಣ ಮಂಡಳಿಗಳು ಹಾಗೂ ನಾಡಿನ ವಿವಿಧ ಸಂಘ ಸಂಸ್ಥೆಗಳು ಭಾಗವಹಿಸಬೇಕು ಹಾಗೂ ಪ್ರತಿ ಊರಿನ ಮಠಾಧೀಶರು ತಮ್ಮ ಶಿಷ್ಯರು ಹಾಗೂ ಅಭಿಮಾನಿಗಳನ್ನು ಪ್ರೇರೇಪಿಸಬೇಕು ಎಂದು ಶ್ರೀಗಳು ವಿನಂತಿಸಿದ್ದಾರೆ.

ಹಿಂಸೆಯನ್ನು ವಿರೋಧಿಸುವ ಸಂಕಲ್ಪ:
ಗೋಹತ್ಯೆ ಮತ್ತು ಗೋಹಿಂಸೆಯನ್ನು ಸಂಪೂರ್ಣವಾಗಿ ಕೊನೆಗಾಣಿಸಲು ಪ್ರತಿಯೊಬ್ಬ ಭಕ್ತರು ಈ ಅಭಿಯಾನವನ್ನು ಪ್ರೇರೇಪಿಸಬೇಕೆಂದು ಪೇಜಾವರ ಶ್ರೀಗಳು ಕರೆ ನೀಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಇನ್ಮುಂದೆ ಹಲಸಿನ ಬೀಜ ಬಿಸಾಡಬೇಡಿ! ಆರೋಗ್ಯಕ್ಕೆ ಬೆಟ್ಟದಷ್ಟು ಲಾಭ ನೀಡುವ ಗುಣವಿದೆ

ಈಗ ಹಲಸಿನ ಹಣ್ಣಿನ ಕಾಲ. ರುಚಿ ಮತ್ತು ಸುವಾಸನೆಯಿಂದ ಬಾಯಲ್ಲಿ ನೀರೂರಿಸುವ ಈ ಹಣ್ಣು ಆರೋಗ್ಯಕ್ಕೂ ಅಪಾರ ಲಾಭ ನೀಡುತ್ತದೆ. ಆದರೆ, ಬಹುಪಾಲು ಜನರು ಈ ಹಣ್ಣಿನ ಬೀಜಗಳನ್ನು ಉಪಯೋಗವಿಲ್ಲದ ಅಂಶವೆಂದು ಬಿಸಾಡುತ್ತಾರೆ. ಆದರೆ, ಆರೋಗ್ಯ ತಜ್ಞರ ಪ್ರಕಾರ, ಈ ಬೀಜಗಳಲ್ಲೂ ಅಮೂಲ್ಯ ಪೌಷ್ಟಿಕಾಂಶಗಳು ಅಡಗಿವೆ.

ಉಡುಪಿಯಲ್ಲಿ ಭೀಕರ ರಸ್ತೆ ಅಪಘಾತ: ಎಂ.ಬಿ.ಎ ವಿದ್ಯಾರ್ಥಿ ಹಾಗೂ ತಬಲ ವಾದಕ ಸಂಕೀರ್ತನ್ ದುರ್ಮರಣ

ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಕಿನ್ನಿಮುಲ್ಕಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಉಡುಪಿ: ಎರಡು ದಿನಗಳ ರೋಚಕ ಕಾರ್ಯಾಚರಣೆ ಬಳಿಕ ಒಂಟಿ ಸಲಗ ಸೆರೆ – ಗ್ರಾಮಸ್ಥರಿಗೆ ನಿಟ್ಟುಸಿರು!

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರ, ಕಮಲಶಿಲೆ ಹಾಗೂ ಹೊಸಂಗಡಿ ಭಾಗಗಳಲ್ಲಿ ಎರಡು ದಿನಗಳ ಕಾಲ ಆತಂಕ ಮೂಡಿಸಿದ್ದ ಒಂಟಿ ಕಾಡಾನೆ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದು, ಸಕ್ರೆಬೈಲಿಗೆ ಕಳುಹಿಸಲಾಗಿದೆ.

ಇರ್ವತ್ತೂರು ಕೊಳಕೆ ಶಾಲೆಯಲ್ಲಿ ಉಚಿತ ನೋಟ್ಸ್ ಪುಸ್ತಕ ವಿತರಣೆ

ಸುಮಾರು 15 ವರ್ಷಗಳಿಂದ ಇರ್ವತ್ತೂರು ಕೊಳಕೆ ಶಾಲೆಗೆ ಶಾಲಾ ಹೆಮ್ಮೆಯ ಹಳೆವಿದ್ಯಾರ್ಥಿ ನಿಕಟ ಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಉದಯ ಎಸ್ ಕೋಟ್ಯಾನ್ ಮತ್ತು ಮುಂಬೈ ಉದ್ಯಮಿ ವಿಠ್ಠಲ ಎಸ್ ಅಮೀನ್ ರವರು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ ನೀಡುತ್ತಿದ್ದು ,ಈ ಬಾರಿಯೂ ಕೊಡುಗೆ ನೀಡಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದಾರೆ.