spot_img

ಡಿ. 29:ಜಿಲ್ಲಾ ಬ್ರಾಹ್ಮಣ ಮಹಾಸಭೆಯಿಂದ ಬೈಲೂರು ಮಹಿಷಮರ್ದಿನಿ ದೇಗುಲದಲ್ಲಿ ಕೋಟಿ ಗಾಯತ್ರಿ ಜಪ ಯಜ್ಞ ಕಾರ್ಯಕ್ರಮ

Date:

spot_img

ಉಡುಪಿ, ಡಿ.26: ಜಿಲ್ಲಾ ಬ್ರಾಹ್ಮಣ ಮಹಾಸಭಾ (ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಂಗ ಸಂಸ್ಥೆ ) ವತಿಯಿಂದ ಕೋಟಿ ಗಾಯತ್ರಿ ಜಪ ಯಜ್ಞವು ಡಿ. 29ರಂದು ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ದೇವಸ್ಥಾನದ ತಂತ್ರಿ ಕೆ.ಎಸ್‌. ಕೃಷ್ಣಮೂರ್ತಿ ತಂತ್ರಿ ಕೊರಂಗ್ರಪಾಡಿಯವರ ನೇತೃತ್ವದಲ್ಲಿ ದೇವಸ್ಥಾನದ ಅರ್ಚಕ ಕೆ. ವಾಸುದೇವ ಭಟ್ ಬೈಲೂರು, ಪರಿಷತ್ ಬಾಂಧವರ ಸಹಕಾರದೊಂದಿಗೆ ನಡೆಯಲಿದೆ.
ಡಿ. 28ರ ಬೆಳಗ್ಗೆ 8ರಿಂದ ತೋರಣ, ಉಗ್ರಾಣ ಮುಹೂರ್ತ, ದೇವನಾಂದಿ, ಕಲಶಾಭಿಷೇಕ, ಗಣಪತಿ ಹೋಮ, ಕೋಟಿ ಗಾಯತ್ರಿ ಜಪ ಯಜ್ಞದ ಪೂರ್ವಭಾವಿ ಶತಕುಂಡ ರಚನಾದಿ ಸಿದ್ಧತೆ, ಸಂಜೆ 6ಕ್ಕೆ ಅರಣಿ ಮಥನ, ಅಗ್ನಿ ಜನನ, ಕುಂಡ ಸಂಸ್ಕಾರ ಪ್ರಕ್ರಿಯೆ, ಡಿ. 29ರ ಬೆಳಗ್ಗೆ 6ರಿಂದ ಸಂಕಲ್ಪ ಪ್ರಕ್ರಿಯೆ, ಆಚಾರ್ಯಾದಿಋತ್ವಿಕ್ವರ್ಣಿ ಶತಕುಂಡದಲ್ಲಿ ಕೋಟಿ ಜಪಯಜ್ಞ ಪ್ರಾರಂಭ, 9ಕ್ಕೆ ಕೋಟಿ ಜಪ ಯಜ್ಞಪೂರ್ಣಹುತ್ರಿ 9.30ಕ್ಕೆಶ್ರೀ ಚಂಡಿಕಾಯಾಗ ಪೂರ್ಣಹುತಿ, 11.30ಕ್ಕೆ ಮಹಾಪೂಜೆ, ಪಲ್ಲಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ಜರಗಲಿದೆ. ಅಂದು ಬೆಳಗ್ಗೆ 10ಕ್ಕೆ ನಡೆಯಲಿರುವ ಸಭೆಯಲ್ಲಿ ಅದಮಾರು ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಚಿತ್ರಾಪುರ ಮಠದ ಶ್ರೀ ವಿದ್ವೇಂದ್ರತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಮಹಾಸಭಾ ಅಧ್ಯಕ್ಷ ಸಂದೀಪ್‌ ಕುಮಾರ್ ಮಂಜ ಅಧ್ಯಕ್ಷತೆ ವಹಿಸುವರು, ಅಷ್ಟಾವಧಾನಿ ಸುಬ್ರಹ್ಮಣ್ಯ ಭಟ್‌ ಗುಂಡಿಬೈಲು ಧಾರ್ಮಿಕ ಪ್ರವಚನ ನೀಡಲಿದ್ದಾರೆ. ಶ್ರೀ ಕ್ಷೇತ್ರ ಕಟೀಲು ಪಾರಂಪಾರಿಕ ಆರ್ಚಕ ಹರಿನಾರಾಯಣದಾಸ ಆಸ್ರಣ್ಣ ಕುಂದಾಪುರ, ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಮಾಜಿ ಶಾಸಕ ಕೆ. ರಘುಪತಿ ಭಟ್, ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಯು. ರಾಜೇಶ್ ಕಾರಂತ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷರಾದ ಬಿ.ಎಸ್. ರಾಘವೇಂದ್ರ ಭಟ್, ಕೃಷ್ಣಾನಂದ ಚಾತ್ರ, ಬೆಂಗಳೂರು ವಿಪ್ರತ್ರಯಿ ಪರಿಷತ್‌ ಅಧ್ಯಕ್ಷ ಎಸ್‌.ರಘುನಾಥ್, ತಾಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಮಂಜುನಾಥ ಉಪಾಧ್ಯಾಯ, ನಗರಸಭೆ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಜಿಲ್ಲಾ ಬ್ರಾಹ್ಮಣ ಮಹಾಸಭಾ ಮಹಿಳಾ ವಿಭಾಗದ ಅಧ್ಯಕ್ಷ ಕಾಂತಿ ರಾವ್ ಭಾಗವಹಿಸಲಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಇರುವತ್ತೂರು ಕೊಳಕೆ ಶಾಲಾ ವಿದ್ಯಾರ್ಥಿಗಳಿಗೆ ಆನಂದ್ ಸರ್ ಅಭಿಮಾನಿ ಶಿಷ್ಯರ ಬಳಗದಿಂದ ಕೊಡೆ, ಕಲಿಕಾ ಸಾಮಗ್ರಿ ವಿತರಣೆ

ಇರುವತ್ತೂರು ಕೊಳಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಆನಂದ್ ಸರ್ ಅಭಿಮಾನಿ ಶಿಷ್ಯರ ಬಳಗ, ಕುಂದಾಪುರ ವತಿಯಿಂದ ಸುಮಾರು ₹20,000 ಮೌಲ್ಯದ ಕೊಡೆಗಳು ಮತ್ತು ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.

ಪರಶುರಾಮ ಮೂರ್ತಿ ಬಗ್ಗೆ ಅಪಪ್ರಚಾರಗೈದ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮತ್ತು ಅವರ ತಂಡ ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು : ಸಂಧ್ಯಾ ರಮೇಶ್

ಪರಶುರಾಮ ಮೂರ್ತಿ ಬಗ್ಗೆ ಅಪಪ್ರಚಾರಗೈದ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮತ್ತು ಅವರ ತಂಡ ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು ಎಂದು ಸಂಧ್ಯಾ ರಮೇಶ್ ತಿಳಿಸಿದ್ದಾರೆ.

“ಬಿಜೆಪಿಗೆ ಧೈರ್ಯವಿದ್ದರೆ ದಲಿತರನ್ನು ಪ್ರಧಾನಿ ಮಾಡಿ”: ವಿಜಯೇಂದ್ರಗೆ ಸಿಎಂ ಸಿದ್ದರಾಮಯ್ಯ ಸವಾಲು!

ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವಂತೆ ಹೇಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು ನೀಡಿದ್ದಾರೆ.

ಫೋನ್ ಪಾಸ್‌ವರ್ಡ್ ನೀಡುವಂತೆ ಪತ್ನಿಗೆ ಒತ್ತಾಯಿಸುವಂತಿಲ್ಲ: ಛತ್ತೀಸ್‌ಗಢ ಹೈಕೋರ್ಟ್ ಮಹತ್ವದ ತೀರ್ಪು!

ಪತ್ನಿಯ ಮೊಬೈಲ್ ಫೋನ್ ಪಾಸ್‌ವರ್ಡ್ ಅಥವಾ ಬ್ಯಾಂಕ್ ಖಾತೆ ವಿವರಗಳನ್ನು ಹಂಚಿಕೊಳ್ಳುವಂತೆ ಒತ್ತಾಯಿಸುವುದು ಆಕೆಯ ಗೌಪ್ಯತೆಯ ಹಕ್ಕಿನ ಉಲ್ಲಂಘನೆ ಎಂದು ಛತ್ತೀಸ್‌ಗಢ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ