ಉಡುಪಿ ಸಮಾಧಾನ ಮಹೋತ್ಸವಕ್ಕೆ ಹಿಂಜಾವೇ ವಿರೋಧ: 38 ಮಂದಿ ಪ್ರತಿಭಟನಾಕಾರರ ವಿರುದ್ಧ ಎಫ್‌ಐಆರ್

Date:

spot_img

ಉಡುಪಿ: ನಗರದ ಕ್ರಿಶ್ಚಿಯನ್ ಪಿಯು ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ “ಸಮಾಧಾನ ಮಹೋತ್ಸವ” ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಹಿಂದೂ ಜಾಗರಣ ವೇದಿಕೆಯ 38 ಮಂದಿ ಕಾರ್ಯಕರ್ತರ ವಿರುದ್ಧ ಉಡುಪಿ ನಗರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಮಾರ್ಚ್ 20 ರಿಂದ 22 ರವರೆಗೆ ನಡೆಯಲಿರುವ ಈ ಧಾರ್ಮಿಕ ಕಾರ್ಯಕ್ರಮಕ್ಕೆ ವ್ಯಾಪಕ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಫೆಲೋಶಿಪ್ ಆಫ್ ಉಡುಪಿ ಡಿಸ್ಟ್ರಿಕ್ಟ್ ಚರ್ಚ್ ವತಿಯಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಪ್ರಖ್ಯಾತ ಭಾಷಣಕಾರ ಮೋಹನ್ ಸಿ. ಲಾಜರಸ್ ಅವರು ಭಾಗವಹಿಸುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಹಿಂದೂ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ, ಆಯೋಜಕರು ಮುನ್ನೆಚ್ಚರಿಕೆಯಾಗಿ ಹೈಕೋರ್ಟ್‌ನಿಂದ ರಕ್ಷಣೆ ಪಡೆದಿದ್ದರು. ಮಾರ್ಚ್ 20 ರಂದು ಸಂಜೆ ಶ್ರೀಕಾಂತ ಶೆಟ್ಟಿ ನೇತೃತ್ವದ ತಂಡವು ಗೋವಿಂದ ಕಲ್ಯಾಣಮಂಟಪದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ, ಕಾರ್ಯಕ್ರಮದ ಸ್ಥಳಕ್ಕೆ ನುಗ್ಗಲು ಯತ್ನಿಸಿತು. ಮತಾಂತರದ ಆರೋಪ ಹೊರಿಸಿದ ಪ್ರತಿಭಟನಾಕಾರರನ್ನು ತಡೆದ ಪೊಲೀಸರು, ಹೈಕೋರ್ಟ್ ಆದೇಶ ಉಲ್ಲಂಘಿಸದಂತೆ ಸೂಚಿಸಿದರು. ಆದರೂ ಎಚ್ಚರಿಕೆ ಮೀರಿ ವರ್ತಿಸಿದ ಮಹೇಶ್ ಶೆಣೈ, ಶ್ರೀಕಾಂತ ಶೆಟ್ಟಿ, ಸಂತೋಷ್, ಉಮೇಶ್ ನಾಯ್ಕ್ ಸೇರಿದಂತೆ ಒಟ್ಟು 38 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರ ವಿರುದ್ಧ ಅಕ್ರಮ ಕೂಟ ಹಾಗೂ ಶಾಂತಿ ಭಂಗದ ಪ್ರಯತ್ನದಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.