spot_img

ಡಾ. ವೀರೇಂದ್ರ ಹೆಗ್ಡೆ ಆಶೀರ್ವಾದದೊಂದಿಗೆ ಪರಿಸರ ಸಂರಕ್ಷಣೆ ಕುರಿತು ಮಾಹಿತಿ ಶಿಬಿರ

Date:

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಉಡುಪಿ ಇದರ ಪರಮ ಪೂಜ್ಯ ಡಾ!ಡಿ.ವೀರೇಂದ್ರ ಹೆಗ್ಡೆಯವರ ಹಾಗೂ ಮಾತೃಶ್ರೀ ಹೇಮಾವತಿಯ್ಮರವರ ಶುಭಾಶೀರ್ವಾದಗಳೊಂದಿಗೆ ಹಿರಿಯಡಕ ವಲಯದ “ಕರ್ನಾಟಕ ಪಬ್ಲಿಕ್ ಸ್ಕೂಲ್” ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಪರಿಸರ ಮಾಹಿತಿ” ಹಾಗೂ ಶಾಲಾ ಮಕ್ಕಳಿಗೆ ಪರಿಸರದ ಬಗ್ಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
‌‌

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಉಡುಪಿ ತಾಲೂಕು ಕೃಷಿ ಅಧಿಕಾರಿಯಾದ ಶ್ರೀ ಮಂಜುನಾಥರವರ ಪ್ರಾಸ್ತಾವಿಕ ಹಾಗೂ ನಿರೂಪಣೆಯೊಂದಿಗೆ ಪ್ರಾರಂಭಿಸಿದ ಈ ಕಾರ್ಯಕ್ರಮದಲ್ಲಿ ಹಿರಿಯಡಕ ವಲಯದ ಮೇಲ್ವಿಚಾರಕರಾದ ಶ್ರೀ ರಾಜ್ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯಡಕ ವಲಯದ ಗ್ರಾಮಾಭಿವೃದ್ಧಿ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಗಣೇಶ್ ನಾಯ್ಕರವರು ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ರೇವತಿಯವರು ವಹಿಸಿದ್ದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಗಸ್ತು ಅರಣ್ಯಾಧಿಕಾರಿಯವರಾದ ಶ್ರೀ ಕೇಶವ ಪೂಜಾರಿ ಎಂ. ಪರಿಸರ ಸಂರಕ್ಷಣೆ ಬಗ್ಗೆ ಮಕ್ಕಳಿಗೆ ವಿಸ್ತಾರವಾಗಿ ಮಾಹಿತಿಯನ್ನು ನೀಡಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೊಮ್ಮಾರಬೆಟ್ಟು ಗ್ರಾಮ ಪಂಚಾಯತ್ತಿನ ಉಪಾಧ್ಯಕ್ಷರಾದ ಶ್ರೀ ಹರೀಶ್ ಸಾಲ್ಯಾನ್, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಸುನೀಲ್ ಶೆಟ್ಟಿ, ಉಡುಪಿ ತಾಲೂಕು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಅಧ್ಯಕ್ಷರು ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರಾದ ಶ್ರೀ ವಿಜಯ ಶೆಟ್ಟಿ ಕೊಂಡಾಡಿ, ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯರಾದ ಶ್ರೀ ಸುಬ್ರಹ್ಮಣ್ಯ ಭಟ್, ಶಾಲಾ ಸಹಶಿಕ್ಷಕಿಯರು, ವಿದ್ಯಾರ್ಥಿಗಳು ಹಾಗೂ ಗ್ರಾಮಾಭಿವೃದ್ಧಿಯ ಸೇವಾಪ್ರತಿನಿಧಿಯವರು ಭಾಗವಹಿಸಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ವಿಶ್ವ ಆತ್ಮಹತ್ಯಾ ನಿರೋಧ ದಿನ

ವಿಶ್ವ ಆರೋಗ್ಯ ಸಂಸ್ಥೆ (WHO) ಮತ್ತು ಅಂತರರಾಷ್ಟ್ರೀಯ ಆತ್ಮಹತ್ಯಾ ನಿರೋಧ ಸಂಘಟನೆಯ (IASP) ಜಂಟಿ ಉದ್ದೇಶದೊಂದಿಗೆ ಪ್ರತಿ ವರ್ಷ ಸೆಪ್ಟೆಂಬರ್ 10 ರಂದು ಈ ದಿನವನ್ನು ಆಚರಿಸಲಾಗುತ್ತದೆ.

ಆಪಲ್‌ನಿಂದ ಐಫೋನ್ ಲೋಕಕ್ಕೆ ಹೊಸ ಸ್ಪರ್ಧಿ: ಅತಿ ತೆಳುವಾದ ‘ಐಫೋನ್ ಏರ್’ ಅನಾವರಣ!

ಅತಿ ತೆಳುವಾದ ಐಫೋನ್ 'ಏರ್' ಮಾದರಿ, ಹೊಸ ವೈಶಿಷ್ಟ್ಯಗಳೊಂದಿಗೆ ಐಫೋನ್ 17, ಸುಧಾರಿತ ಏರ್‌ಪಾಡ್ಸ್ ಪ್ರೊ 3 ಮತ್ತು ರಕ್ತದೊತ್ತಡ ಮಾನಿಟರ್ ಹೊಂದಿರುವ ಆಪಲ್ ವಾಚ್.

ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ

ಭಾರತದ 17ನೇ ಉಪರಾಷ್ಟ್ರಪತಿಯಾಗಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಮತ್ತು ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಆಯ್ಕೆಯಾಗಿದ್ದಾರೆ.

ಸಾಂಬಾರಿಗೆ ರುಚಿ ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು: ಕೆಂಪು ಮೆಣಸಿನಕಾಯಿಯ ಪ್ರಯೋಜನಗಳು

ಅಡುಗೆಮನೆಯಲ್ಲಿ ಸಾಮಾನ್ಯವಾಗಿ ಬಳಸುವ ಕೆಂಪು ಮೆಣಸಿನಕಾಯಿ ಕೇವಲ ಆಹಾರಕ್ಕೆ ಖಾರ ಮತ್ತು ರುಚಿ ನೀಡುವುದಷ್ಟೇ ಅಲ್ಲ, ಇದು ಅನೇಕ ಆರೋಗ್ಯಕಾರಿ ಗುಣಗಳನ್ನು ಸಹ ಹೊಂದಿದೆ.