ಉಡುಪಿ: ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಮತ್ತು ಹವಾಮಾನ ಇಲಾಖೆಯ ರೆಡ್ ಅಲರ್ಟ್ ಎಚ್ಚರಿಕೆಯನ್ನು ಪರಿಗಣಿಸಿ, ಜೂನ್ 12ರಂದು (ನಾಳೆ) ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ನಿರ್ಧಾರವನ್ನು ವಿದ್ಯಾರ್ಥಿಗಳ ಸುರಕ್ಷತೆಯನ್ನು ಮತ್ತು ಸೌಕರ್ಯವನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ಯಾವ ಶಿಕ್ಷಣ ಸಂಸ್ಥೆಗಳಿಗೆ ರಜೆ?
ಎಲ್ಲಾ ಪ್ರಾಥಮಿಕ (1ರಿಂದ 8ನೇ ತರಗತಿ) ಮತ್ತು ಪ್ರೌಢ ಶಾಲೆಗಳು (9ರಿಂದ 10ನೇ ತರಗತಿ).
ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು.
ಗಮನ : ಈ ಕೆಳಗಿನ ಶಿಕ್ಷಣ ಸಂಸ್ಥೆಗಳಿಗೆ ರಜೆ ಇರುವುದಿಲ್ಲ
ಪದವಿಪೂರ್ವ ಕಾಲೇಜುಗಳು (ಪಿಯುಸಿ).
ಪದವಿ, ಸ್ನಾತಕೋತ್ತರ, ಡಿಪ್ಲೊಮಾ, ಇಂಜಿನಿಯರಿಂಗ್ ಮತ್ತು ಐಟಿಐ ಸಂಸ್ಥೆಗಳು.
ಕಾರಣ:
ಹವಾಮಾನ ಇಲಾಖೆಯು ಜಿಲ್ಲೆಗೆ ರೆಡ್ ಅಲರ್ಟ್ ಜಾರಿ ಮಾಡಿದೆ. ಮಳೆಯ ತೀವ್ರತೆ ಮತ್ತು ಕೆಳದರ್ಜೆಯ ಪ್ರದೇಶಗಳಲ್ಲಿ ಪ್ರವಾಹದ ಅಪಾಯವನ್ನು ಗಮನದಲ್ಲಿಟ್ಟು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳು ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.
ನೆನಪಿರಲಿ: ಮಳೆ-ಸಂಬಂಧಿತ ಅಪಾಯಗಳಿಂದ ದೂರವಿರಲು ಸ್ಥಳೀಯ ಇಲಾಖೆಯ ಸೂಚನೆಗಳನ್ನು ಅನುಸರಿಸಿ.
ಅಹಮದಾಬಾದ್ನಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ 242 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೃತರ ಪಟ್ಟಿಯಲ್ಲಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿಯವರ ಹೆಸರೂ ಇರುವುದಾಗಿ ಪ್ರಾಥಮಿಕ ವರದಿಗಳು ತಿಳಿಸುತ್ತಿವೆ.