ಶೀರೂರು ಪರ್ಯಾಯದ ಸಡಗರ: ಉಡುಪಿ ನಗರ ಸೇರಿಹಲವೆಡೆ ಜ.17,18 ರಂದು ಮದ್ಯ ಮಾರಾಟ ಬಂದ್!

Date:

spot_img

ಉಡುಪಿ: ಐತಿಹಾಸಿಕ ಶೀರೂರು ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಉಡುಪಿ ನಗರದಾದ್ಯಂತ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಜಿಲ್ಲಾಡಳಿತವು ಮಹತ್ವದ ಕ್ರಮ ಕೈಗೊಂಡಿದ್ದು, ಎರಡು ದಿನಗಳ ಕಾಲ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದೆ.

ಉಡುಪಿ ಶ್ರೀ ಕೃಷ್ಣ ಮಠದ ಶೀರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪರ್ಯಾಯೋತ್ಸವವು ಜ. 17 ಮತ್ತು 18 ರಂದು ಅದ್ಧೂರಿಯಾಗಿ ನಡೆಯಲಿದೆ. ಈ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಮತ್ತು ಗಣ್ಯರು ನಗರಕ್ಕೆ ಆಗಮಿಸಲಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ. ಸ್ವರೂಪ ಟಿ.ಕೆ. ಅವರು ಮದ್ಯ ನಿಷೇಧದ ಆದೇಶ ನೀಡಿದ್ದಾರೆ.

ಜ. 17 ರ ಬೆಳಿಗ್ಗೆ 10:00 ಗಂಟೆಯಿಂದ ಜ. 18 ರ ಸಂಜೆ 06:00 ಗಂಟೆಯವರೆಗೆ ಈ ನಿಷೇಧ ಜಾರಿಯಲ್ಲಿರಲಿದೆ. ಉಡುಪಿ ನಗರಸಭೆ ವ್ಯಾಪ್ತಿಯ ಜೊತೆಗೆ ಉದ್ಯಾವರ, ಕೊರಂಗ್ರಪಾಡಿ, ಅಲೆವೂರು, ಹಿರೇಬೆಟ್ಟು, ಅಂಬಲಪಾಡಿ, ಕುತ್ಪಾಡಿ, ಕಡೆಕಾರು, ಕಿದಿಯೂರು, ಮೂಡುತೋನ್ಸೆ ಮತ್ತು ಪಡುತೋನ್ಸೆ ಸೇರಿದಂತೆ ಸುಮಾರು 15 ಕಿ.ಮೀ ವ್ಯಾಪ್ತಿಯ ಗ್ರಾಮಗಳಲ್ಲೂ ಮದ್ಯ ಮಾರಾಟ ಬಂದ್ ಆಗಲಿದೆ. ಬಾರ್, ರೆಸ್ಟೋರೆಂಟ್ ಹಾಗೂ ವೈನ್ ಶಾಪ್‌ಗಳು ಕಡ್ಡಾಯವಾಗಿ ಮುಚ್ಚಿರಬೇಕು ಎಂದು ಸೂಚಿಸಲಾಗಿದೆ. ಒಂದು ವೇಳೆ ಜಿಲ್ಲಾಡಳಿತದ ಈ ಆದೇಶವನ್ನು ಉಲ್ಲಂಘಿಸಿ ಮದ್ಯ ಮಾರಾಟ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.