ಉಡುಪಿ: ಶ್ರೀ ಪೇಜಾವರ ಮಠದ ‘ರಾಮರಾಜ್ಯ ಯೋಜನೆ’ ಪ್ರಯುಕ್ತ ದಾನಿಗಳ ನೆರವಿನಿಂದ ನಿರ್ಮಿತ ‘ಶ್ರೀರಾಮಸದನ’ ಉದ್ಘಾಟನೆ!

Date:

spot_img

ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಪರಿಕಲ್ಪನೆಯ ‘ರಾಮರಾಜ್ಯ ಯೋಜನೆ’ಯಡಿ ಉಡುಪಿ ಜಿಲ್ಲೆ ನೀಲಾವರ ಗ್ರಾಮದ ಸತೀಶ್ ನಾಯ್ಕ ಅವರ ಕುಟುಂಬಕ್ಕಾಗಿ ನೂತನ ಗೃಹ ನಿರ್ಮಾಣ ಮಾಡಲಾಗಿದೆ. ಶ್ರೀಮಠದ ಆಶ್ರಯದಲ್ಲಿ ಹಾಗೂ ದಾನಿಗಳ ಆರ್ಥಿಕ ನೆರವಿನಿಂದ ಈ ಮನೆಯನ್ನು ಕಟ್ಟಲಾಗಿದ್ದು, ಶ್ರೀಮಠದ ಪರವಾಗಿ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿ ಗೃಹ ಪ್ರವೇಶ ನೆರವೇರಿಸಿದರು. ಈ ನೂತನ ನಿವಾಸಕ್ಕೆ ‘ಶ್ರೀರಾಮಸದನ’ ಎಂಬ ಪುಣ್ಯನಾಮವನ್ನು ನೀಡಿದರು.

ಈ ಸಂದರ್ಭದಲ್ಲಿ ಶ್ರೀಪಾದರು ಗೃಹಸ್ಥರನ್ನು ಆಶೀರ್ವದಿಸಿ, ಮನೆಯಲ್ಲಿ ಸದಾ ಭಜನೆ-ಸಂಕೀರ್ತನೆ ನಡೆಯಲಿ, ಶ್ರೀರಾಮನ ನಾಮಸ್ಮರಣೆ ಆಗಲಿ ಎಂದು ಸಲಹೆ ನೀಡಿದರು. ಕುಟುಂಬದ ಸದಸ್ಯರಿಗೆ ಶ್ರೀರಾಮನ ಸಂಕೀರ್ತನೆ ಹಾಡಿಸಿ ತಾವೂ ಹಾಡಿದರು.

ಈ ಮನೆ ನಿರ್ಮಾಣಕ್ಕೆ ಆಸ್ಟ್ರೇಲಿಯಾದ ಯೋಗಗುರು ರಾಜೇಂದ್ರ ಎಂಕಮೂಲೆಯವರು ಪ್ರಮುಖ ದಾನಿಯಾಗಿ ಆರ್ಥಿಕ ನೆರವು ನೀಡಿದ್ದಾರೆ. ಗೃಹ ಉದ್ಘಾಟನಾ ಸಮಾರಂಭದಲ್ಲಿ ವಾಸುದೇವ ಭಟ್ ಪೆರಂಪಳ್ಳಿ, ಅಶ್ವಿನ್ ಹಾಗೂ ಮಠದ ಅನೇಕ ಭಕ್ತರು ಭಾಗವಹಿಸಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ