
ಉಡುಪಿ ಜಿಲ್ಲೆಯ ಅಜ್ಜರಕಾಡು ಅಗ್ನಿ ಶಾಮಕ ದಳ ಠಾಣೆಯ ಸಮೀಪ ಸೋಮವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರು ಗಾಯಗೊಂಡಿದ್ದು, ಓರ್ವ ಸಾವನ್ನಪ್ಪಿದ್ದಾರೆ.
ಮೃತರನ್ನು ಸ್ಥಳೀಯ ನಿವಾಸಿ ಸ್ಯಾಮ್ಯುಯೆಲ್ ಸದಾನಂದ ಕರ್ಕಡ (59) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಎರಡು ಬೈಕುಗಳು ಅತಿ ವೇಗದಿಂದ ಮುಖಾಮುಖಿಯಾಗಿ ಡಿಕ್ಕಿಯಾಗಿ, ಸದಾನಂದರವರು ರಸ್ತೆಗುರುಳಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಎರಡು ಬೈಕುಗಳು ಸಂಪೂರ್ಣವಾಗಿ ಹಾನಿಗೊಂಡಿದೆ. ಈ ಘಟನೆಯ ಕುರಿತು ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.