spot_img

ಉಳ್ಳಾಲ ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳ ಬಂಧನ

Date:

ಉಳ್ಳಾಲ: ಪಶ್ಚಿಮ ಬಂಗಾಳ ಮೂಲದ 20 ವರ್ಷದ ಯುವತಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಮಂಗಳೂರು ಸಮೀಪದ ಉಳ್ಳಾಲದ ರಾಣಿಪುರ ಬಳಿ ನಡೆದಿದೆ. ಬುಧವಾರ ತಡರಾತ್ರಿ ನೇತ್ರಾವತಿ ನದಿ ತಟದ ಬಳಿಯಲ್ಲಿ ಯುವತಿ ತೀವ್ರ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಸ್ಥಳೀಯರಿಗೆ ಕಂಡುಬಂದಿದ್ದು, ಘಟನೆ ಕುರಿತು ಉಳ್ಳಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂತ್ರಸ್ತ ಪಶ್ಚಿಮ ಬಂಗಾಳ ಮೂಲದ ಸಂತ್ರಸ್ತ ಯುವತಿ ಉದ್ಯೋಗ ಅರಸಿ ಕೇರಳದ ಉಪ್ಪಳ ಪ್ರದೇಶದಲ್ಲಿ ವಾಸವಿದ್ದು, ಮಂಗಳೂರಿಗೆ ಸ್ನೇಹಿತನೊಂದಿಗಾಗಿ ಆಗಮಿಸಿದ್ದಳು. ಇಬ್ಬರ ನಡುವೆ ಏನೋ ಕಾರಣಕ್ಕೆ ಗಲಾಟೆ ನಡೆದಿದ್ದು ಸ್ನೇಹಿತ ಅವಳ ಮೊಬೈಲ್ ಫೋನಿಗೆ ಹಾನಿ ಮಾಡಿದ್ದ , ನಂತರ ಅವಳು ತನ್ನ ಫೋನ್ ರಿಪೇರಿ ಮಾಡಲು ಆಟೋ ಹತ್ತಿದ್ದಾಳೆ. ನಂತರ ಚಾಲಕ ಸಹಾಯ ಮಾಡುವ ನೆಪದಲ್ಲಿ ತನ್ನ ವಾಹನದಲ್ಲಿ ಕುಳ್ಳಿರಿಸಿ 5-6 ಗಂಟೆಗಳ ಕಾಲ ಆಕೆ ಆಟೋ ಡ್ರೈವರ್ ಜೊತೆಗೇ ಇದ್ದು, ಅವನ ಜೊತೆಗೆ ಗೆಳೆತನ ಆಗಿದೆ. ಮೊಬೈಲ್ ರಿಪೇರಿ ಹಣ ಕೂಡಾ ಆತನೇ ಪಾವತಿಸಿದ್ದ. ಆ ಬಳಿಕ ಆಕೆ ರಾತ್ರಿ ವೇಳೆ ಪ.ಬಂಗಾಳ ಹೋಗಲು ರೈಲ್ವೇ ನಿಲ್ದಾಣಕ್ಕೆ ಬಿಡಲು ಆಟೋ ಡ್ರೈವರಿಗೆ ಹೇಳುತ್ತಾಳೆ. ಆದರೆ ಕಂಕನಾಡಿ ರೈಲ್ವೇ ನಿಲ್ದಾಣಕ್ಕೆ ಹೋಗದೇ ಆಟೋ ಡ್ರೈವರ್ ಮತ್ತಿಬ್ಬರ ಗೆಳೆಯರನ್ನು ಕರೆಸಿ ಬೇರೊಂದು ಜಾಗಕ್ಕೆ ಹೋಗುತ್ತಾರೆ. ಆ ಜಾಗದಲ್ಲಿ ಆಕೆಗೆ ಚೆನ್ನಾಗಿ ಮದ್ಯಪಾನ ಮಾಡಿಸಿ, ಆಕೆ ಪ್ರಜ್ಞೆ ತಪ್ಪಿದ್ದು, ಪ್ರಜ್ಞೆ ಬಂದಾಗ ಅತ್ಯಾಚಾರ ನಡೆದಿರುವುದು ಆಕೆ ಗಮನಕ್ಕೆ ಬಂದಿದೆ.

ಅಪಘಾತದ ನಂತರ ಗಾಯಗೊಂಡ ಯುವತಿ ತೀವ್ರ ಅಸ್ವಸ್ಥ ಸ್ಥಿತಿಯಲ್ಲಿ ನೆರೆಮನೆಯ ಬಾಗಿಲು ತಟ್ಟಿದ್ದು, ನೀರು ಕೇಳುತ್ತಿದ್ದಂತೆಯೇ ಅಸ್ವಸ್ಥಗೊಂಡು ಪ್ರಜ್ಞೆ ತಪ್ಪಿದ್ದಾಳೆ. ಮನೆಮಂದಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಯುವತಿಯನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಅವಳನ್ನು ಚಿಕಿತ್ಸೆಗಾಗಿ ಐಸಿಯು ವಾರ್ಡ್ ಗೆ ಸೇರಿಸಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಉಳ್ಳಾಲ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮೂಲ್ಕಿಯ ಆಟೋರಿಕ್ಷಾ ಚಾಲಕ ಮತ್ತು ಕುಂಪಲ ಮತ್ತು ಮಂಗಳೂರಿನ ಇಬ್ಬರು ಸಹಚರರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೂಲ್ಕಿಯ ಆಟೋ ಚಾಲಕ ಪ್ರಭುರಾಜ್ (38), ಕುಂಪಲದ ಎಲೆಕ್ಟ್ರಿಷಿಯನ್ ಮಿಥುನ್ (30) ಮತ್ತು ಮಂಗಳೂರು ನಿವಾಸಿ ಮಣಿ (30) ಎಂದು ಗುರುತಿಸಲಾಗಿದೆ.ಮುಂದಿನ ವಿಚಾರಣೆ ನಡೆಯುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಮರ್ಮಾಂತಿಕ ಘಟನೆ ಸ್ಥಳೀಯರಲ್ಲಿ ಆಕ್ರೋಶ ಉಂಟುಮಾಡಿದ್ದು, ಸಾರ್ವಜನಿಕರು ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೇಸಿಗೆಯಲ್ಲಿ ವಾಲ್ನಟ್ ಸೇವಿಸುವುದರ ಪ್ರಯೋಜನಗಳು!

ಬೇಸಿಗೆಯಲ್ಲಿ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರಿನಾಂಶದಿಂದ ಕೂಡಿದ ಹಣ್ಣುಗಳು ಮತ್ತು ತರಕಾರಿಗಳಷ್ಟೇ ಪ್ರಾಮುಖ್ಯತೆ ಡ್ರೈ ಫ್ರೂಟ್ಸ್‌ಗೂ ಇದೆ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ನಿಷೇಧ: ವಿದ್ಯಾರ್ಥಿಗಳಿಗೆ ಅವಮಾನ, ನ್ಯಾಯಾಲಯದ ಮುಂದೆ ಪ್ರಕರಣ

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಯಜ್ಞೋಪವೀತ (ಜನಿವಾರ) ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಪ್ರಕರಣಗಳು ರಾಜ್ಯವ್ಯಾಪಿ ವಿವಾದವಾಗಿ ಪರಿಣಮಿಸಿದೆ.

ಸುಪ್ರೀಂಕೋರ್ಟ್ ಕಾನೂನು ರಚಿಸಿದರೆ ಸಂಸತ್ತಿನ ಅಗತ್ಯವೇನು? – ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ವಿವಾದಾತ್ಮಕ ಹೇಳಿಕೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಸುಪ್ರೀಂಕೋರ್ಟ್ ಕಾನೂನು ರಚನೆಯಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಿದರೆ ಸಂಸತ್ತನ್ನು ಮುಚ್ಚಿಬಿಡಬೇಕು ಎಂದು ವಾದಿಸಿದ್ದಾರೆ

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ವಿಚಿತ್ರ ವಿನಂತಿ: “ಪಾಸ್ ಮಾಡಿ ಸರ್, ನನ್ನ LOVE ನಿಮ್ಮ ಕೈಯಲ್ಲಿ!”

ಸ್ಎಸ್ಎಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನದ ಸಂದರ್ಭದಲ್ಲಿ ಒಂದು ವಿಚಿತ್ರ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ.