
ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಶಾಲಾ ಮಕ್ಕಳಿಗೆ ಕಾರ್ಕಳ ಕೆಥೋಲಿಕ್ ಸಭಾ ವತಿಯಿಂದ ಉಚಿತವಾಗಿ ನೀಡಿದ ಕೊಡೆಗಳ ವಿತರಣಾ ಸಮಾರಂಭವು ಜೂ. 2ರಂದು ನಡೆಯಿತು.
ಸುಮಾರು 140 ಮಕ್ಕಳಿಗೆ ಸಂಘದ ವತಿಯಿಂದ ಉಚಿತವಾಗಿ ಕೊಡೆಗಳನ್ನು ನೀಡಲಾಯಿತು. ಕಾರ್ಕಳ ಕೆಥೋಲಿಕ್ ಸಭಾದ ಅಧ್ಯಕ್ಷ ವಿಲ್ಸನ್ ಮಸ್ಕರೇನ್ಹಸ್ ಮಾತನಾಡಿ ಸಂಘದ ವತಿಯಿಂದ ಮಕ್ಕಳಿಗೆ ಕೊಡೆ ನೀಡುತ್ತಿರುವುದು ಸಂತೋಷವಾಗುತ್ತಿದೆ. ಮಕ್ಕಳು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ಮಾಡಿ ಸಮಾಜದಲ್ಲಿ ಸತ್ಪ್ರಜೆಗಳಾಗಿ ಬಾಳುವಂತೆ ತಿಳಿಸಿದರು. ಮುಂದಿನ ದಿನಗಳಲ್ಲಿ ಇನ್ನಿತರ ಶಾಲೆಗಳಿಗೆ ಸಂಘದ ವತಿಯಿಂದ ಸಹಾಯಹಸ್ತ ಮಾಡುವುದಾಗಿ ತಿಳಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಎಸ್ಡಿಎಂಸಿ ಉಪಾಧ್ಯಕ್ಷೆ ಶ್ರೀಮತಿ ರೂಪಾ ವಹಿಸಿದ್ದರು.ಶಾಲಾ ಮಕ್ಕಳಿಗೆ ಉಚಿತವಾಗಿ ಕೊಡೆಗಳನ್ನು ನೀಡಿದ ಕಾರ್ಕಳ ಕೆಥೋಲಿಕ್ ಸಭಾದ ಅಧ್ಯಕ್ಷರಾದ ವಿಲ್ಸನ್ ಮಸ್ಕರೇನ್ಹಸ್, ಕಾರ್ಯದರ್ಶಿ ಅಂತೋನಿ ಮಿರಾಂದ, ಕೋಶಾಧಿಕಾರಿ ಪ್ರತಿಮಾ ಡಿಸೋಜಾರವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ಧೇಶ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ರಾವ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಜಯಶ್ರೀ, ಸಿಬ್ಬಂದಿ ಕು| ನಿರೀಕ್ಷಾ, ಕಾರ್ಕಳ ಕೆಥೋಲಿಕ್ ಸಭಾದ ಕಾರ್ಯದರ್ಶಿ ಅಂತೋನಿ ಮಿರಾಂದ, ಕೋಶಾಧಿಕಾರಿ ಪ್ರತಿಮಾ ಡಿಸೋಜಾ, ಮೋಹನ್ದಾಸ್ ಹೆಗ್ಡೆ ಜಾರ್ಕಳ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೆಚ್. ಜಿ. ವಸಂತಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಶ್ರೀಮತಿ ವಸಂತಿ, ಬೈಲೂರು ಗ್ರಾ.ಪಂ. ಸದಸ್ಯೆ ಶ್ರೀಮತಿ ಅಶ್ವಿತಾ, ತುಳುನಾಡ ಜವನೆರ್ ಬೆಂಗಳೂರು ಇದರ ಸದಸ್ಯರಾದ ಪ್ರಸಾದ್ ಶೆಟ್ಟಿ, ಶರತ್ ಶೆಟ್ಟಿ, ಶಾಂತಿ ಯುವಕ ವೃಂದದ ಅಧ್ಯಕ್ಷ ಮುಸ್ತಾಫ್, ಹರೀಶ್ ಆಚಾರ್ಯ ಉಪಸ್ಥಿತರಿದ್ದರು.

ಸಹಶಿಕ್ಷಕರಾದ ದಿನೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ವಸಂತಿ ಹೆಚ್. ಜಿ. ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಉದಯ ಕುಮಾರ್ ವಂದಿಸಿದರು. ಶಾಲಾ ಶಿಕ್ಷಕ ವೃಂದದವರು ಸಹಕರಿಸಿದರು.