spot_img

ಕೆಥೋಲಿಕ್ ಸಭಾ ಕಾರ್ಕಳ ವಲಯ ಕೇಂದ್ರದ ಸಹಕಾರದಿಂದ ಮಕ್ಕಳಿಗೆ ಕೊಡೆ ವಿತರಣಾ ಕಾರ್ಯಕ್ರಮ

Date:

ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಶಾಲಾ ಮಕ್ಕಳಿಗೆ ಕಾರ್ಕಳ ಕೆಥೋಲಿಕ್ ಸಭಾ ವತಿಯಿಂದ ಉಚಿತವಾಗಿ ನೀಡಿದ ಕೊಡೆಗಳ ವಿತರಣಾ ಸಮಾರಂಭವು ಜೂ. 2ರಂದು ನಡೆಯಿತು.

ಸುಮಾರು 140 ಮಕ್ಕಳಿಗೆ ಸಂಘದ ವತಿಯಿಂದ ಉಚಿತವಾಗಿ ಕೊಡೆಗಳನ್ನು ನೀಡಲಾಯಿತು. ಕಾರ್ಕಳ ಕೆಥೋಲಿಕ್ ಸಭಾದ ಅಧ್ಯಕ್ಷ ವಿಲ್ಸನ್ ಮಸ್ಕರೇನ್ಹಸ್ ಮಾತನಾಡಿ ಸಂಘದ ವತಿಯಿಂದ ಮಕ್ಕಳಿಗೆ ಕೊಡೆ ನೀಡುತ್ತಿರುವುದು ಸಂತೋಷವಾಗುತ್ತಿದೆ. ಮಕ್ಕಳು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ಮಾಡಿ ಸಮಾಜದಲ್ಲಿ ಸತ್ಪ್ರಜೆಗಳಾಗಿ ಬಾಳುವಂತೆ ತಿಳಿಸಿದರು. ಮುಂದಿನ ದಿನಗಳಲ್ಲಿ ಇನ್ನಿತರ ಶಾಲೆಗಳಿಗೆ ಸಂಘದ ವತಿಯಿಂದ ಸಹಾಯಹಸ್ತ ಮಾಡುವುದಾಗಿ ತಿಳಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಉಪಾಧ್ಯಕ್ಷೆ ಶ್ರೀಮತಿ ರೂಪಾ ವಹಿಸಿದ್ದರು.ಶಾಲಾ ಮಕ್ಕಳಿಗೆ ಉಚಿತವಾಗಿ ಕೊಡೆಗಳನ್ನು ನೀಡಿದ ಕಾರ್ಕಳ ಕೆಥೋಲಿಕ್ ಸಭಾದ ಅಧ್ಯಕ್ಷರಾದ ವಿಲ್ಸನ್ ಮಸ್ಕರೇನ್ಹಸ್, ಕಾರ್ಯದರ್ಶಿ ಅಂತೋನಿ ಮಿರಾಂದ, ಕೋಶಾಧಿಕಾರಿ ಪ್ರತಿಮಾ ಡಿಸೋಜಾರವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ಧೇಶ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ರಾವ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಜಯಶ್ರೀ, ಸಿಬ್ಬಂದಿ ಕು| ನಿರೀಕ್ಷಾ, ಕಾರ್ಕಳ ಕೆಥೋಲಿಕ್ ಸಭಾದ ಕಾರ್ಯದರ್ಶಿ ಅಂತೋನಿ ಮಿರಾಂದ, ಕೋಶಾಧಿಕಾರಿ ಪ್ರತಿಮಾ ಡಿಸೋಜಾ, ಮೋಹನ್‌ದಾಸ್ ಹೆಗ್ಡೆ ಜಾರ್ಕಳ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೆಚ್. ಜಿ. ವಸಂತಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಶ್ರೀಮತಿ ವಸಂತಿ, ಬೈಲೂರು ಗ್ರಾ.ಪಂ. ಸದಸ್ಯೆ ಶ್ರೀಮತಿ ಅಶ್ವಿತಾ, ತುಳುನಾಡ ಜವನೆರ್ ಬೆಂಗಳೂರು ಇದರ ಸದಸ್ಯರಾದ ಪ್ರಸಾದ್ ಶೆಟ್ಟಿ, ಶರತ್ ಶೆಟ್ಟಿ, ಶಾಂತಿ ಯುವಕ ವೃಂದದ ಅಧ್ಯಕ್ಷ ಮುಸ್ತಾಫ್, ಹರೀಶ್ ಆಚಾರ್ಯ ಉಪಸ್ಥಿತರಿದ್ದರು.

ಸಹಶಿಕ್ಷಕರಾದ ದಿನೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ವಸಂತಿ ಹೆಚ್. ಜಿ. ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಉದಯ ಕುಮಾರ್ ವಂದಿಸಿದರು. ಶಾಲಾ ಶಿಕ್ಷಕ ವೃಂದದವರು ಸಹಕರಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಿಜೆಪಿ ನಾಯಕರೇ ನ್ಯಾಯದ ಪರವಾಗಿ ಇರುವ ಬುದ್ದಿವಂತ ನಾಗರಿಕರನ್ನು ಅವಮಾನಿಸಬೇಡಿ : ಅನಿತಾ ಡಿಸೋಜ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ

ಎಲ್ಲಾ ನಾಗರಿಕರು ಸತ್ಯದ ಪರನಿಂತು ಶಾಂತಿ ಭಂಗ ಮಾಡುವವರ ವಿರುದ್ಧ ಕ್ರಮ ಗೊಳ್ಳುವ ಪೊಲೀಸ್ ಇಲಾಖೆಯ ಪರನಿಂತು ಅವರಿಗೆ ಧೈರ್ಯ ತುಂಬಿ ಸಹಕಾರ ನೀಡುವ ಅಗತ್ಯವಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಅನಿತಾ ಡಿಸೋಜರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಳೆಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು 14 ತ್ವರಿತ ಮನೆಮದ್ದುಗಳು!

ಮಳೆಗಾಲ ಶುರುವಾದಾಗ ತಂಪಾದ ಹವಾಮಾನವು ತಾತ್ಕಾಲಿಕವಾಗಿ ತಾಜಾತನ ನೀಡಿದರೂ, ಈ ಅವಧಿಯಲ್ಲಿ ಮಕ್ಕಳಿಂದ ಹಿಡಿದು ಹಿರಿಯರವರವರೆಗೆ ವಿವಿಧ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಗಂಟಲು ನೋವು, ಶೀತ-ಕೆಮ್ಮು, ತಲೆನೋವು ಮತ್ತು ಜ್ವರದಂತಹ ಸೋಂಕುಗಳು ಸಾಮಾನ್ಯ.

ಕರ್ನಾಟಕ ಅಸಂಘಟಿತ ಕಾರ್ಮಿಕರ ಒಕ್ಕೂಟದ ನೂತನ ಅಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಅಡ್ಕ ಆಯ್ಕೆ

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಒಕ್ಕೂಟದ ಸಭೆ ಜೂನ್ 4ರಂದು ಮಂಗಳೂರಿನ ಕೇಂದ್ರ ಕಚೇರಿಯಲ್ಲಿ ಯಶಸ್ವಿಯಾಗಿ ಜರುಗಿತು. ಈ ಸಭೆಯಲ್ಲಿ ಸಂಘದ ನೂತನ ಅಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಅಡ್ಕರವರನ್ನು ಆಯ್ಕೆ ಮಾಡಲಾಯಿತು.

‘ಗೆಳೆಯರ ಬಳಗ ಪೆರ್ಡೂರು ( ರಿ )’ ಇವರ ವತಿಯಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮ

ಮಳೆಗಾಲದ ಯೋಜನೆಯ ಭಾಗವಾಗಿ ಪೆರ್ಡೂರಿನ ಬಿ.ಎಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಗೆಳೆಯರ ಬಳಗ ಪೆರ್ಡೂರು (ರಿ) ಸಂಸ್ಥೆಯ ವತಿಯಿಂದ ಸಮವಸ್ತ್ರ ವಿತರಣಾ ಕಾರ್ಯಕ್ರಮ ಇಂದು ಭವ್ಯವಾಗಿ ಜರುಗಿತು.