spot_img

ಕೇಂದ್ರ ಸಚಿವ ನಿತಿನ್ ಗಡ್ಕರಿಯವರಿಂದ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ತೂಗು ಸೇತುವೆ ಲೋಕಾರ್ಪಣೆ

Date:

spot_img

ಸಾಗರ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಶರಾವತಿ ಹಿನ್ನೀರಿನ ಮೇಲೆ ನಿರ್ಮಿಸಲಾಗಿರುವ, ದೇಶದ ಎರಡನೇ ಅತಿ ಉದ್ದದ ಸಿಗಂಧೂರು ತೂಗು ಸೇತುವೆಯನ್ನು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಇಂದು ಲೋಕಾರ್ಪಣೆ ಮಾಡಿದರು. ಸುಮಾರು 473 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ಸೇತುವೆ ಮಲೆನಾಡು ಭಾಗದ ಜನರ ದಶಕಗಳ ಕನಸನ್ನು ನನಸು ಮಾಡಿದೆ.

ಲಿಂಗನಮಕ್ಕಿ ಜಲಾಶಯದ ನಂತರ ಸಾಗರ ತಾಲೂಕಿನ ತುಮರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅನೇಕ ಹಳ್ಳಿಗಳಿಗೆ ಲಾಂಚ್‌ಗಳೇ ಏಕೈಕ ಸಂಪರ್ಕ ಸಾಧನವಾಗಿತ್ತು. ಸಂಜೆ ನಂತರ ಈ ಗ್ರಾಮಗಳಿಗೆ ಸಾಗರದಿಂದ ಸಂಪರ್ಕವೇ ಇರಲಿಲ್ಲ. ಈಗ ಈ ಸೇತುವೆ ನಿರ್ಮಾಣದಿಂದ ಗ್ರಾಮಸ್ಥರಿಗೆ ದೊಡ್ಡ ಅನುಕೂಲವಾಗಿದ್ದು, ಇಡೀ ದಿನ ಸಂಪರ್ಕ ಲಭ್ಯವಾಗಿದೆ. 2018ರಲ್ಲಿ ಇದೇ ನಿತಿನ್ ಗಡ್ಕರಿ ಅವರು ಸಾಗರ ತಾಲೂಕಿನ ಅಂಬಾರಗೋಡು-ಕಳಸವಳ್ಳಿ ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು, ಈಗ ಅವರೇ ಲೋಕಾರ್ಪಣೆ ಮಾಡಿದ್ದಾರೆ.

ಸಿಗಂಧೂರು ಸೇತುವೆ ಉದ್ಘಾಟನೆಯ ಬಳಿಕ, ಗಡ್ಕರಿ ಅವರು ಮಧ್ಯಾಹ್ನ 12 ಗಂಟೆಗೆ ಸಾಗರದ ನೆಹರು ಮೈದಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಂಜೂರಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೂ ಚಾಲನೆ ನೀಡಿದರು. ಇದರಲ್ಲಿ 625 ಕೋಟಿ ರೂ. ವೆಚ್ಚದ ರಾಷ್ಟ್ರೀಯ ಹೆದ್ದಾರಿ 369 ಇ – ಸಾಗರದಿಂದ ಮರುಕುಟಕದವರೆಗೆ ಸಾಗರ ನಗರದ ಬೈಪಾಸ್ ಸೇರಿ ದ್ವಿಪಥ ಸಂಪರ್ಕ ರಸ್ತೆಯ ಶಂಕುಸ್ಥಾಪನಾ ಸಮಾರಂಭವೂ ಸೇರಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 2056 ಕೋಟಿ ರೂ. ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಲಾಯಿತು.

ಸುಮಾರು 2.25 ಕಿಲೋಮೀಟರ್ ಉದ್ದವಿರುವ ಈ ಸೇತುವೆಯು 11 ಮೀಟರ್ ರಸ್ತೆ ಅಗಲವನ್ನು ಹೊಂದಿದೆ. ಒಟ್ಟು 17 ಪಿಲ್ಲರ್‌ಗಳನ್ನು ಹೊಂದಿರುವ ಇದು, ಕೇಬಲ್-ಸೈಡ್ ತಂತ್ರಜ್ಞಾನವನ್ನು ಬಳಸಿ ನಿರ್ಮಿಸಲಾಗಿದೆ. ಇದು ಎಕ್‌ಸಟ್ರಾಡೋಸ್ ಬ್ಯಾಲೆನ್ಸ್‌ಡ್ ಕ್ಯಾಂಟಿಲಿವರ್ ಸೇತುವೆ ವಿನ್ಯಾಸವನ್ನು ಅನುಸರಿಸಿದೆ. ಭಾರತದಲ್ಲಿಯೇ ಅತಿ ದೊಡ್ಡ ಕೇಬಲ್ ಹಿಡಿತದ ಸೇತುವೆ ಗುಜರಾತ್‌ನ ದ್ವಾರಕಾದಲ್ಲಿ ಇದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಜಪಾನ್‌ನಿಂದ ಇಂಟರ್ನೆಟ್ ವೇಗದಲ್ಲಿ ವಿಶ್ವ ದಾಖಲೆ: 1.02 Pbps ವೇಗ, ಒಂದೇ ಸೆಕೆಂಡಿನಲ್ಲಿ ನೆಟ್‌ಫ್ಲಿಕ್ಸ್ ಡೌನ್‌ಲೋಡ್!

ಡಿಜಿಟಲ್ ಜಗತ್ತಿನಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿರುವ ಜಪಾನ್, ಇಂಟರ್ನೆಟ್ ವೇಗದಲ್ಲಿ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

ಊಟವಾದ ತಕ್ಷಣ ನಿದ್ದೆ ಮಾಡುತ್ತೀರಾ? ಎಚ್ಚರ! ಈ ಅಭ್ಯಾಸ ಆರೋಗ್ಯಕ್ಕೆ ಅತಿ ಅಪಾಯಕಾರಿ!

ರಾತ್ರಿ ಊಟ ಮಾಡಿದ ತಕ್ಷಣ ಮಲಗುವುದು ಅನೇಕರ ಅಭ್ಯಾಸ. ಆದರೆ, ಈ ಅಭ್ಯಾಸವು ಆರೋಗ್ಯಕ್ಕೆ ಅತಿ ಅಪಾಯಕಾರಿ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ.

ದಿನ ವಿಶೇಷ – ಯುವ ಜನರ ಕೌಶಲ್ಯ ದಿನಾಚರಣೆ

ಈ ದಿನವನ್ನು ಯುವಕರ ಕೌಶಲ್ಯ ವಿಕಾಸ, ಉದ್ಯೋಗ ಅವಕಾಶಗಳು ಮತ್ತು ಸಮರ್ಥ ಜಾಗತಿಕ ನಾಗರಿಕರಾಗಿ ಬೆಳೆಯುವ ಪ್ರಾಮುಖ್ಯತೆಯನ್ನು ಹೈಲೈಟ್ ಮಾಡಲು ಯುನೈಟೆಡ್ ನೇಷನ್ಸ್ ಸಂಸ್ಥೆ 2004ರಲ್ಲಿ ಘೋಷಿಸಿತು.

ಶಿರಾಡಿಘಾಟ್‌ನಲ್ಲಿ ಜಲಪಾತಕ್ಕೆ ಉರುಳಿದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪ್ರಸಿದ್ಧ ಶಿರಾಡಿಘಾಟ್‌ನಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಜಲಪಾತವೊಂದರ ಬಳಿ ನಿಲ್ಲಿಸಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಜಲಪಾತಕ್ಕೆ ಉರುಳಿಬಿದ್ದಿದೆ.