spot_img

ಗಂಗೊಳ್ಳಿಯಲ್ಲಿ ಅವೈಜ್ಞಾನಿಕ ಬೆಳಕು ಮೀನುಗಾರಿಕೆ: ಮೂರು ಬೋಟುಗಳಿಗೆ ದಂಡ

Date:

spot_img

ಕುಂದಾಪುರ: ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣಾ ವ್ಯಾಪ್ತಿಯ ಸಮುದ್ರದಲ್ಲಿ ಅವೈಜ್ಞಾನಿಕವಾಗಿ ಬೆಳಕು ಮೀನುಗಾರಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿರುವುದರಿಂದ ಬೆಳಕು ಮೀನುಗಾರಿಕೆ ಮತ್ತು ಬುಲ್ ಟ್ರಾಲ್ ಕ್ರಮಗಳನ್ನು ನಿಷೇಧಿಸಲಾಗಿದೆ.

ಮಾರ್ಚ್ 14 ರಂದು ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಶ್ರೀ ಸಿದ್ದಿ, ಗಂಗಾಮಾತಾ, ಶ್ರೀ ಯಕ್ಷೇಶ್ವರಿ ಕೃಪಾ 3 ಎಂಬ ಬೋಟುಗಳು ಬೆಳಕು ಮೀನುಗಾರಿಕೆ ನಡೆಸುತ್ತಿರುವುದು ಪತ್ತೆಯಾಯಿತು.

ಉಡುಪಿ ಜಿಲ್ಲಾ ಮೀನುಗಾರಿಕೆ ಜಂಟಿ ನಿರ್ದೇಶಕರು ಮತ್ತು ಆರ್ಬಿಟ್ರೇಟರ್ ಅವರಿಂದ ಈ ಬೋಟುಗಳ ಮಾಲಕರಿಗೆ ತಲಾ ₹5,000 ರಂತೆ ₹15,000 ದಂಡ ವಿಧಿಸಲಾಗಿದೆ. ಬೋಟು ಮಾಲಕರು ದಂಡವನ್ನು ಪಾವತಿಸಿ ಬೋಟುಗಳನ್ನು ಬಿಡುಗಡೆ ಮಾಡಿಸಿಕೊಂಡಿದ್ದಾರೆ.

ಅದೆ ರೀತಿ IND KA 03 MM 5000 ನೋಂದಣಿ ಸಂಖ್ಯೆಯ ಬೋಟ್‌ನಲ್ಲಿ ಜನರೇಟರ್ ಅಳವಡಿಸಿ ಬೆಳಕು ಮೀನುಗಾರಿಕೆ ನಡೆಸುತ್ತಿರುವುದು ಕೂಡ ಪತ್ತೆಯಾಗಿದ್ದು, ಈ ಬೋಟ್ ಮಾಲಕರಿಗೂ ₹5,000 ದಂಡ ವಿಧಿಸಲಾಗಿದೆ.

ಬೋಟುಗಳಲ್ಲಿ ಅಳವಡಿಸಿದ್ದ ಜನರೇಟರ್ ಹಾಗೂ ಬೆಳಕು ಮೀನುಗಾರಿಕೆಗೆ ಸಂಬಂಧಿಸಿದ ಲೈಟಿಂಗ್ ಉಪಕರಣಗಳನ್ನು ತೆರವುಗೊಳಿಸಿ ಬೋಟು ಬಿಡುಗಡೆಗೊಳಿಸಲಾಗಿದೆ.

ನಿಷೇಧಿತ ಬೆಳಕು ಮೀನುಗಾರಿಕೆ ಮತ್ತು ಬುಲ್ ಟ್ರಾಲ್ ನಿಯಂತ್ರಣಕ್ಕೆ ಮೀನುಗಾರಿಕಾ ಇಲಾಖೆ ಮತ್ತು ಕರಾವಳಿ ಕಾವಲು ಪೊಲೀಸ್ ಇಲಾಖೆ ಜಂಟಿಯಾಗಿ ಫ್ಲೈಯಿಂಗ್ ಸ್ವಾಡ್ ರಚಿಸಿದ್ದು, ಈ ತಂಡವು ಮಲ್ಪೆ ಮತ್ತು ಗಂಗೊಳ್ಳಿ ಬಂದರಿನಲ್ಲಿ ನಿರಂತರ ತಪಾಸಣೆ ನಡೆಸಲಿದೆ ಎಂದು ಪ್ರಕಟಣೆ ತಿಳಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳದ ಗೋವಿಂದೂರಿನಲ್ಲಿ ಭೀಕರ ಗಾಳಿ ಮಳೆಗೆ ಅಯ್ಯಪ್ಪ ಶಿಬಿರದ ಮೇಲ್ಚಾವಣಿ ಕುಸಿತ

ಇಂದು ಮದ್ಯಾಹ್ನ 3:00 ಸುಮಾರಿಗೆ ಬಿರುಸಿನ ಗಾಳಿ ಮಳೆಗೆ ಕಾರ್ಕಳದ ಗೋವಿಂದೂರಿನ ಅಯ್ಯಪ್ಪ ಶಿಬಿರದ ಮೇಲ್ಚಾವಣಿ ಗಾಳಿಯ ರಭಸಕ್ಕೆ ಹಾರಿ ನುಚ್ಚುನೂರಾಗಿದೆ.

40 ದಾಟಿದವರ ಸಂಧು ನೋವಿಗೆ ಆಯುರ್ವೇದದಲ್ಲಿದೆ ಪರಿಣಾಮಕಾರಿ ಪರಿಹಾರ!

ವಯಸ್ಸು 40 ದಾಟಿದಂತೆ ಕಾಣಿಸಿಕೊಳ್ಳುವ ಸಂಧು ನೋವು ಅದೆಷ್ಟೋ ಜನರನ್ನು ಕಾಡುತ್ತದೆ.

ವಾಟ್ಸಾಪ್‌ನಿಂದ ಹೊಸ AI ವೈಶಿಷ್ಟ್ಯ ‘ಕ್ವಿಕ್ ರಿಕ್ಯಾಪ್’: ಇನ್ನು ಮಿಸ್ಡ್ ಮೆಸೇಜ್ ಚಿಂತೆ ಇಲ್ಲ!

ಮೆಟಾ ಕಂಪನಿಯು ಅಭಿವೃದ್ಧಿಪಡಿಸಿರುವ ವಾಟ್ಸಾಪ್ ಕ್ವಿಕ್ ರಿಕ್ಯಾಪ್ AI (WhatsApp Quick Recap AI) ಎಂಬ ನೂತನ ಕೃತಕ ಬುದ್ಧಿಮತ್ತೆ ಆಧಾರಿತ ವೈಶಿಷ್ಟ್ಯವು, ಬಳಕೆದಾರರು ಗ್ರೂಪ್‌ಗಳು ಅಥವಾ ವೈಯಕ್ತಿಕ ಚಾಟ್‌ಗಳಲ್ಲಿ ಮಿಸ್ ಮಾಡಿಕೊಂಡ ಸಂದೇಶಗಳನ್ನು ಸರಳ ಮತ್ತು ಅರ್ಥಪೂರ್ಣವಾಗಿ ಸಂಕ್ಷಿಪ್ತಗೊಳಿಸಲು ನೆರವಾಗಲಿದೆ.

ಜ್ಞಾನಸುಧಾ : ಮೌಲ್ಯಸುಧಾ-38ರಲ್ಲಿ ‘ಕಾರ್ಗಿಲ್ ವಿಜಯ ದಿವಸ’

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ-38ನ್ನು ಕಾರ್ಗಿಲ್ ವಿಜಯದಿವಸದ ಶುಭಸಂದರ್ಭದಲ್ಲಿ ಆಯೋಜಿಸಲಾಗಿದೆ.