spot_img

ಅಕ್ರಮ ಮತಾಂತರ: ಆರೋಪಿಯ ಆಸ್ತಿ ಮೇಲೆ ಬುಲ್ಡೋಜರ್ ಪ್ರಯೋಗ

Date:

ಲಕ್ನೋ: ಉತ್ತರ ಪ್ರದೇಶದಲ್ಲಿ ಅಕ್ರಮ ನಿರ್ಮಾಣಗಳ ತೆರವು ಕಾರ್ಯಾಚರಣೆ ಮತ್ತೆ ಮುನ್ನೆಲೆಗೆ ಬಂದಿದೆ. ಅಕ್ರಮ ಮತಾಂತರ ಪ್ರಕರಣದಲ್ಲಿ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್‌) ಬಂಧಿಸಿರುವ ಜಲಾಲುದ್ದೀನ್‌ ಅಲಿಯಾಸ್‌ ಛಂಗುರ್‌ ಬಾಬಾ ಎಂಬಾತನಿಗೆ ಸೇರಿದ ಬಲರಾಮ್‌ಪುರದಲ್ಲಿನ ಅನಧಿಕೃತ ಕಟ್ಟಡಗಳನ್ನು ಮಂಗಳವಾರ ಧ್ವಂಸಗೊಳಿಸಲಾಗಿದೆ.

ಜಲಾಲುದ್ದೀನ್‌ನ ತನಿಖೆಯು ಮುಂದುವರಿದಿದ್ದು, ಈತ ಕೇವಲ ಸಮಾಜಘಾತುಕನಲ್ಲದೆ, ದೇಶದ್ರೋಹಿ ಕೃತ್ಯಗಳಲ್ಲೂ ಭಾಗಿಯಾಗಿದ್ದಾನೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ತಿಳಿಸಿದ್ದಾರೆ. ಅಲ್ಲದೆ, ಈತನ ಅಕ್ರಮ ಮತಾಂತರ ಜಾಲದಲ್ಲಿ ಭಾಗಿಯಾಗಿರುವ ಇತರ ವ್ಯಕ್ತಿಗಳ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ಎಟಿಎಸ್‌ ತಂಡವು ಜಲಾಲುದ್ದೀನ್‌ ಮತ್ತು ಆತನ ಸಹಾಯಕಿಯಾದ ನೀತು ಅಲಿಯಾಸ್‌ ನಸ್ರೀನ್‌ಳನ್ನು ಬಲರಾಮ್‌ಪುರದಲ್ಲಿ ಶನಿವಾರ ಬಂಧಿಸಿತ್ತು. ಈ ಪ್ರಕರಣವು ರಾಜ್ಯದಲ್ಲಿ ಅಕ್ರಮ ಮತಾಂತರ ಚಟುವಟಿಕೆಗಳ ವಿರುದ್ಧ ಸರ್ಕಾರ ಕೈಗೊಳ್ಳುತ್ತಿರುವ ಕಠಿಣ ಕ್ರಮಗಳನ್ನು ಮತ್ತೊಮ್ಮೆ ಪ್ರತಿಬಿಂಬಿಸಿದೆ. ಜಲಾಲುದ್ದೀನ್‌ನ ಒಡೆತನದ ಅಕ್ರಮ ಕಟ್ಟಡಗಳ ಧ್ವಂಸವು, ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಸರ್ಕಾರವು ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದನ್ನು ಸೂಚಿಸುತ್ತದೆ. ಈ ಬೆಳವಣಿಗೆಯು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ನಾರಾಯಣ ಗುರು ಜಯಂತಿ

ಜ್ಞಾನ ಮತ್ತು ಸಮಾನತೆಯ ಪುನರುತ್ಥಾನಕ್ಕೆ ಪ್ರೇರಣೆಯ ದಿನಪ್ರತಿ ವರ್ಷ ಸೆಪ್ಟೆಂಬರ್ 7, ಭಾರತದ ಕರಾವಳಿ ತೀರದ ಜನತೆಗೆ ಒಂದು ಪವಿತ್ರ ಮತ್ತು ಮಹತ್ವದ ದಿನ

ಧರ್ಮಸ್ಥಳ ಪ್ರಕರಣ: ಆರೋಪಿ ಚಿನ್ನಯ್ಯ ನ್ಯಾಯಾಂಗ ಬಂಧನಕ್ಕೆ, ಶಿವಮೊಗ್ಗ ಜೈಲಿಗೆ ರವಾನೆ

'ಧರ್ಮಸ್ಥಳದಲ್ಲಿ ಹೆಣ ಹೂತಿದ್ದೇನೆ' ಎಂದು ಹಲವು ದಿನಗಳ ಕಾಲ ಸುದ್ದಿಯಲ್ಲಿದ್ದ ಆರೋಪಿ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಐಸಿಸಿ ಮತ್ತು Google Pay ಜಂಟಿ ಪ್ರಯತ್ನ: ಮಹಿಳಾ ವಿಶ್ವಕಪ್ ಟಿಕೆಟ್ ಮಾರಾಟಕ್ಕೆ ಹೊಸ ಡಿಜಿಟಲ್ ಸ್ಪರ್ಶ

ವಿಶೇಷ ಟಿಕೆಟ್‌ಗಳು ಗೂಗಲ್ ಪೇ ಮೂಲಕ ಸೆಪ್ಟೆಂಬರ್ 8ರವರೆಗೆ ಲಭ್ಯವಿರಲಿದ್ದು, ಸೆಪ್ಟೆಂಬರ್ 9 ರಿಂದ ಎಂದಿನಂತೆ ಟಿಕೆಟ್ ಮಾರಾಟ ಪ್ರಾರಂಭವಾಗಲಿದೆ ಎಂದು ICC ತಿಳಿಸಿದೆ.

ಸೈನಸ್ ಸಮಸ್ಯೆ: ಕರಿಮೆಣಸಿನ ಆವಿಯಿಂದ ಪರಿಹಾರ ಸಾಧ್ಯವೇ?

ಮೂಗು ಕಟ್ಟಿಕೊಂಡಾಗ ಅಥವಾ ಸೈನಸ್‌ಗಳಿಂದ ತಲೆನೋವು ಬಂದಾಗ ಬಿಸಿ ನೀರಿನ ಆವಿಗೆ ಕರಿಮೆಣಸು ಸೇರಿಸಿ ಉಸಿರಾಡುವುದು ಒಂದು ಜನಪ್ರಿಯ ವಿಧಾನ.