spot_img

ಉಪ್ಪಿನಂಗಡಿ: ಹಾವೇರಿ ಮೂಲದ ಮಹಿಳೆ ನಾಪತ್ತೆ

Date:

spot_img

ಉಪ್ಪಿನಂಗಡಿ: ಇಲ್ಲಿನ 34ನೇ ನೆಕ್ಕಿಲಾಡಿ ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದ ಹಾವೇರಿ ಮೂಲದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರೇಷ್ಮಾ ಮಲಲಿ ಭಜಂತ್ರಿ (26) ಎಂಬುವರು ನಾಪತ್ತೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಇವರು ಹಾವೇರಿ ಜಿಲ್ಲೆ, ಹಾನಗಲ್ ತಾಲೂಕಿನ ಸಂಕ್ರಿಕೊಪ್ಪ ನಿವಾಸಿ ಭೀಮಪ್ಪ ಅವರ ಪತ್ನಿ.

ಭೀಮಪ್ಪ ಮತ್ತು ರೇಷ್ಮಾ ದಂಪತಿ ನೆಕ್ಕಿಲಾಡಿಯ ಇಮ್ಮಿಯಾಜ್ ಎಂಬುವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ನಾಗರ ಪಂಚಮಿ ಹಬ್ಬಕ್ಕಾಗಿ ಜುಲೈ 26 ರಂದು ಭೀಮಪ್ಪ ಹಾವೇರಿಗೆ ತೆರಳಿದ್ದರು. ಜುಲೈ 30 ರಂದು ಅವರು ಹಿಂತಿರುಗಿ ಬಂದಾಗ ರೇಷ್ಮಾ ಮನೆಯಲ್ಲಿ ಇರಲಿಲ್ಲ. ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗದ ಕಾರಣ ಭೀಮಪ್ಪ ಅವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚಾಮರಾಜನಗರದಲ್ಲಿ ದುರಂತ: ಹಣ್ಣು ಎಂದು ವಿಷದ ಕಾಯಿ ತಿಂದ 12 ಮಕ್ಕಳು ಆಸ್ಪತ್ರೆಗೆ ದಾಖಲು!

ಯಳಂದೂರು ತಾಲ್ಲೂಕಿನ ಯರಿಯೂರು ಗ್ರಾಮದಲ್ಲಿ ಹಣ್ಣು ಎಂದು ತಿಳಿದು ವಿಷದ ಕಾಯಿ ತಿಂದಿದ್ದರಿಂದ 12 ಮಕ್ಕಳು ಅಸ್ವಸ್ಥಗೊಂಡ ಘಟನೆ ನಡೆದಿದೆ.

ಸೌದಿ ಅರೇಬಿಯಾದಲ್ಲಿ ಒಂದೇ ದಿನ 8 ಜನರಿಗೆ ಮರಣದಂಡನೆ

ಸೌದಿ ಅರೇಬಿಯಾದಲ್ಲಿ ಶನಿವಾರ ಒಂದೇ ದಿನ 8 ಮಂದಿಗೆ ಮರಣದಂಡನೆ ವಿಧಿಸಲಾಗಿದ್ದು, ಇದು ದೇಶದ ಇತಿಹಾಸದಲ್ಲೇ ಒಂದೇ ದಿನದಲ್ಲಿ ನೀಡಿದ ಅತಿ ಹೆಚ್ಚು ಶಿಕ್ಷೆಯಾಗಿದೆ.

ಬೆಂಗಳೂರು-ಕೋಲ್ಕತ್ತಾ ವಿಮಾನದಲ್ಲಿ ತಾಂತ್ರಿಕ ದೋಷ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೋಲ್ಕತ್ತಾಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕೂಡಲೇ ಅದನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಕೋರ್ಟ್ ತೀರ್ಪಿಗೆ ತಲೆಬಾಗಬೇಕು ಎಂದ ನಿಖಿಲ್ ಕುಮಾರಸ್ವಾಮಿ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ₹11.5 ಲಕ್ಷ ದಂಡ ವಿಧಿಸಿದ ಬೆನ್ನಲ್ಲೇ, ಈ ತೀರ್ಪಿನ ಕುರಿತು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.