ಸುಂಟರಗಾಳಿ ಮತ್ತು ಅತಿಯಾದ ಮಳೆಯಿಂದ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಆದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ವಿ ಸುನಿಲ್‌ ಕುಮಾರ್ ಮನವಿ‌

Date:

spot_img

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ನಿನ್ನೆ ದಿನಾಂಕ 18-08-2025 ರಂದು ಅತಿಯಾದ ಮಳೆ ಹಾಗೂ ಸುಂಟರ ಗಾಳಿಯಿಂದಾಗಿ ಸುಮಾರು ನೂರಕ್ಕೂ ಹೆಚ್ಚಿನ ವಾಸದ ಮನೆಗಳಿಗೆ ಹಾನಿಯಾಗಿದ್ದು, ಜೊತೆಗೆ ಬೆಳೆ ಹಾನಿ ಸೇರಿದಂತೆ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಅಪಾರ ಹಾನಿ ಉಂಟಾಗಿರುತ್ತದೆ.

ಕಾರ್ಕಳ ತಾಲೂಕಿನ ಬೆಳ್ಮಣ್‌, ಸೂಡ, ನಂದಳಿಕೆ, ರೆಂಜಾಳ, ಬೈಲೂರು, ಕಡ್ತಲ ಹಾಗೂ ಯರ್ಲಪಾಡಿ ಗ್ರಾಮಗಳ ಪರಿಸರದಲ್ಲಿ ಮತ್ತು ಹೆಬ್ರಿ ತಾಲೂಕಿನ ಚಾರ, ಕುಚ್ಚೂರು ಮತ್ತು ಮುದ್ರಾಡಿ ಗ್ರಾಮಗಳ ಪರಿಸರದಲ್ಲಿ ನಿನ್ನೆಯ ಸಂಜೆಯ ಹೊತ್ತಿಗೆ ಒಮ್ಮೆಲೆ ಬಂದ ಸುಂಟರಗಾಳಿ ಹಾಗೂ ಅತಿಯಾದ ಮಳೆ ಗಾಳಿಯಿಂದ ಆ ಪ್ರದೇಶದ ಹಲವು ಕಡೆಗಳಲ್ಲಿ ವಾಸದ ಮನೆಗಳು, ಕೃಷಿ ಸೇರಿದಂತೆ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿ ಉಂಟಾಗಿದ್ದು , ತುರ್ತು ಪರಿಹಾರೋಪಾಯಗಳನ್ನು ಒದಗಿಸುವುದು ತುಂಬಾ ಅವಶ್ಯಕವಾಗಿರುವುದನ್ನು ಮನಗಂಡ ಕಾರ್ಕಳ ಶಾಸಕರಾದ ಶ್ರೀ ವಿ ಸುನಿಲ್‌ ಕುಮಾರ್‌ ರವರು ವಿಧಾನ ಸಭಾ ಅಧಿವೇಶನ ಸಂದರ್ಭದಲ್ಲಿ ಮಾನ್ಯ ಕಂದಾಯ ಸಚಿವರಾದ ಶ್ರೀ ಕೃಷ್ಣ ಭೈರೇಗೌಡ ಅವರನ್ನು ಭೇಟಿ ಮನವಿ ಸಲ್ಲಿಸಿರುತ್ತಾರೆ.

ಪ್ರಾಕೃತಿಕ ವಿಕೋಪದಿಂದ, ಪ್ರಮುಖವಾಗಿ ವಾಸದ ಮನೆಗಳಿಗೆ ಆಗಿರುವ ಹಾನಿಗೆ ಸಂಬಂದಿಸಿದಂತೆ ಸಚಿವರಿಗೆ ಮಾಹಿತಿ ನೀಡಿ, ತುರ್ತು ಅನುದಾನವನ್ನು ಬಿಡುಗಡೆ ಮಾಡುವಂತೆ ಹಾಗೂ ಆದಷ್ಟೂ ಶೀಘ್ರವಾಗಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ಮನವಿ ಮಾಡಿರುತ್ತಾರೆ ಎಂದು ಕಾರ್ಕಳ ಶಾಸಕರ ಕಛೇರಿ ‘ವಿಕಾಸ’ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.