spot_img

ಶ್ರೀಕೃಷ್ಣಗೀತಾನುಗ್ರಹ ಪ್ರಶಸ್ತಿಗೆ ಭಾಜನರಾದ ವಿದ್ವಾನ್ ರಾಜಾ ಎಸ್. ಗಿರಿ ಆಚಾರ್ಯ:ಪರ್ಯಾಯ ಶ್ರೀಪುತ್ತಿಗೆ ಮಠದಿಂದ ಗೌರವದ ಸನ್ಮಾನ

Date:

spot_img

ಉಡುಪಿ: ಶ್ರೀಕ್ಷೇತ್ರ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಸರ್ವಾಂಗೀಣ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವಿದ್ವಾನ್ ರಾಜಾ ಎಸ್. ಗಿರಿ ಆಚಾರ್ಯ ಅವರನ್ನು ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು ಶ್ರೀಕೃಷ್ಣಗೀತಾನುಗ್ರಹ ಪ್ರಶಸ್ತಿಯೊಂದಿಗೆ ಸನ್ಮಾನಿಸಿ ಗೌರವಿಸಿದರು.

ರಾಜಾ ಎಸ್. ಗಿರಿ ಆಚಾರ್ಯರು ದೇಶದಾದ್ಯಾಂತ ವಿಶಾಲವಾದ ಶ್ರೀ ರಾಘವೇಂದ್ರ ಮಠಗಳ ಆಡಳಿತಾಧಿಕಾರಿಯಾಗಿ ಹಾಗೂ ಗ್ರಂಥ ಸಂಶೋಧಕ, ವಿದ್ವಾಂಸರಿಗೆ ಪೋಷಕರಾಗಿ ನಿರಂತರವಾಗಿ ಅಪರೂಪದ ಸೇವೆ ಸಲ್ಲಿಸುತ್ತಿದ್ದಾರೆ. ಶಾಸ್ತ್ರಗಳ ಸಂರಕ್ಷಣೆಯಲ್ಲಿ, ವಿದ್ವಾನ್ ಪೀಳಿಗೆ ಬೆಳೆಸುವಲ್ಲಿ ಹಾಗೂ ಸಂಶೋಧನೆ ಕ್ಷೇತ್ರದಲ್ಲಿ ಅವರ ಕೊಡುಗೆ ಅತ್ಯಂತ ಅಮೂಲ್ಯವಾಗಿದೆ.

ಅವರ ಈ ಶ್ರೇಷ್ಠ ಸೇವೆಯನ್ನು ಗೌರವಿಸಿ, ಪರ್ಯಾಯ ಶ್ರೀ ಪುತ್ತಿಗೆ ಮಠವು ತಮ್ಮ ಪ್ರತಿಷ್ಠಿತ ಪ್ರಶಸ್ತಿಯ ಮೂಲಕ ಅವರನ್ನು ಸನ್ಮಾನಿಸಿತು.

ಕಾರ್ಯಕ್ರಮದಲ್ಲಿ ಭಾಗಿಯಾದವರು:
ಈ ಸಮಾರಂಭದಲ್ಲಿ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದರು ಹಾಗೂ ಕಿರಿಯ ಪಟ್ಟದ ಪರಮಪೂಜ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರೂ ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ವಿಶ್ವ ಛಾಯಾಗ್ರಹಣ ದಿನಾಚರಣೆ

ಪ್ರತಿ ವರ್ಷ ಆಗಸ್ಟ್ 19ರಂದು, ಪ್ರಪಂಚದಾದ್ಯಂತ ವಿಶ್ವ ಛಾಯಾಗ್ರಹಣ ದಿನವನ್ನು ಆಚರಿಸಲಾಗುತ್ತದೆ

ಉಡುಪಿ: ಭಾರೀ ಮಳೆ ಹಿನ್ನೆಲೆ ಆಗಸ್ಟ್ 19ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ವರುಣಾರ್ಭಟಕ್ಕೆ ತತ್ತರಿಸಿದ ಜನಜೀವನ; ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಜೆ ಘೋಷಣೆ

ಹೆರಿಗೆ ನಂತರ ಕೂದಲು ಉದುರುವ ಸಮಸ್ಯೆ ಇದೆಯೇ? ಆತಂಕ ಬೇಡ, ಸಮಸ್ಯೆಗೆ ಪರಿಹಾರ ಇಲ್ಲಿದೆ!

ಹೆರಿಗೆಯ ನಂತರ ಅನೇಕ ಮಹಿಳೆಯರು ಇದ್ದಕ್ಕಿದ್ದಂತೆ ಹೆಚ್ಚಾಗಿ ಕೂದಲು ಉದುರುತ್ತಿರುವುದನ್ನು ಗಮನಿಸಿ ಭಯ ಪಡುತ್ತಾರೆ. ಆದರೆ ತಜ್ಞರ ಪ್ರಕಾರ, ಈ ಸಮಸ್ಯೆ ತಾತ್ಕಾಲಿಕವಾಗಿದ್ದು, ಸರಿಯಾದ ಆಹಾರ ಮತ್ತು ಆರೈಕೆಯಿಂದ ಇದನ್ನು ಸುಧಾರಿಸಬಹುದು.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ ಆಕ್ಟಿವ್ 5 ಭಾರತದಲ್ಲಿ ಬಿಡುಗಡೆ

ದೇಶದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆದ ಸ್ಯಾಮ್‌ಸಂಗ್, ಭಾರತೀಯ ವೃತ್ತಿಪರರು ಮತ್ತು ಕೈಗಾರಿಕೆಗಳ ಅಗತ್ಯಗಳಿಗೆ ಅನುಗುಣವಾಗಿ ವಿನ್ಯಾಸಗೊಳಿಸಲಾದ ಗ್ಯಾಲಕ್ಸಿ ಟ್ಯಾಬ್ ಆಕ್ಟಿವ್ 5 ಎಂಟರ್‌ಪ್ರೈಸ್ ಎಡಿಷನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ.